Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...