Homeಅಂತರಾಷ್ಟ್ರೀಯ#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

#AllEyesOnDeck | 6ನೇ ದಿನಕ್ಕೆ ಕಾಲಿಟ್ಟ ಗಾಝಾಗೆ ಹೊರಟ ‘ಮದ್ಲೀನ್‌’ ಪ್ರಯಾಣ; ಇಸ್ರೇಲ್‌ನಿಂದ ಬಂಧನಕ್ಕೆ ಸಿದ್ಧತೆ!

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿರುವ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಪ್ರಯಾಣವು ಆರನೇ ದಿನಕ್ಕೆ ತಲುಪಿದೆ. ಪ್ರಸ್ತುತ ಮೆಡಿಟರೇನಿಯನ್ ಸಮುದ್ರದಲ್ಲಿರುವ ಹಡಗು ಯಾವುದೇ ಅಡೆತಡೆಗಳಿಲ್ಲದಿದ್ದರೆ ಏಳನೆ ದಿನವಾದ ಶುಕ್ರವಾರ (ನಾಳೆ) ಗಾಝಾ ತಲುಪಲಿದೆ. #AllEyesOnDeck | 6ನೇ ದಿನಕ್ಕೆ

ಮಾರ್ಚ್ 2 ರಿಂದ ಗಾಝಾ ಮೇಲೆ ವಸಾಹತುಗಾರ ಇಸ್ರೇಲ್‌ ವಿಧಿಸಿರುವ ಮುತ್ತಿಗೆಯನ್ನು ಮುರಿಯುವ ಉದ್ದೇಶ ಕೂಡಾ ಮದ್ಲೀನ್‌ಗೆ ಇದೆ. ಹಡಗಿನಲ್ಲಿರುವ 12 ಹೋರಾಟಗಾರಲ್ಲಿ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಕೂಡ ಒಬ್ಬರು. 2007 ರಿಂದ ಈ ಗಾಝಾ ಪ್ರದೇಶವನ್ನು ಇಸ್ರೇಲ್‌ ನೆಲೆ, ಜಲ ಮತ್ತು ವಾಯು ದಿಗ್ಬಂಧನಕ್ಕೆ ಒಳಗಾಗಿಸಿದೆ.

ತಿಂಗಳ ಹಿಂದೆಯಷ್ಟೆ ಗಾಝಾಗೆ ತೆರಳುತ್ತಿದ್ದ ಮತ್ತೊಂದು ಎಫ್‌ಎಫ್‌ಸಿ ನೆರವು ಹಡಗಿನ ಮೇಲೆ ಇಸ್ರೇಲ್‌ನ ಡ್ರೋನ್‌ಗಳು ಬಾಂಬ್ ದಾಳಿ ಮಾಡಿತ್ತು. ಅದಾಗಿ ಒಂದು ತಿಂಗಳ ನಂತರ ಜೂನ್ 1 ರಂದು ಮದ್ಲೀನ್‌ ಸಿಸಿಲಿಯ ಕ್ಯಾಟಾನಿಯಾ ಬಂದರಿನಿಂದ ಹೊರಟಿದೆ. ಇಸ್ರೇಲಿ ಬಾಂಬ್ ದಾಳಿಯಲ್ಲಿ 54,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

 

View this post on Instagram

 

A post shared by Thiago Ávila (@thiagoavilabrasil)

ಮದ್ಲೀನ್ ಸುಮಾರು 2,000 ಕಿಮೀ (1,250-ಮೈಲಿ) ಪ್ರಯಾಣಿಸಲಿದ್ದು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹಡಗಿನ ಲೈವ್ ಟ್ರ್ಯಾಕರ್ ಅನ್ನು ಫೋರೆನ್ಸಿಕ್ ಆರ್ಕಿಟೆಕ್ಚರ್ ನೇರಪ್ರಸಾರ ಮಾಡುತ್ತಿದ್ದು, ಜೊತೆಗೆ ಹಡಗಿನಲ್ಲಿರುವ ಗಾರ್ಮಿನ್ ಲೈವ್ ಟ್ರ್ಯಾಕರ್ ಅನ್ನು ಬಳಸುತ್ತಿದೆ.

ಅದಾಗ್ಯೂ, ಮದ್ಲೀನ್ ಹಡಗನ್ನು ಗಾಝಾ ತಲುಪಲು ಇಸ್ರೇಲ್ ಸೇನೆ ಅನುಮತಿಸುವುದಿಲ್ಲ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಹಡಗಿನಲ್ಲಿರುವ ಹೋರಾಟಗಾರರು ಇಸ್ರೇಲಿ ಸೈನ್ಯದ ಆದೇಶವನ್ನು ಪಾಲಿಸಲು ವಿಫಲವಾದರೆ ಅವರ ಬಂಧನ ಮತ್ತು ಅವರ ಹಡಗನ್ನು ವಶಪಡಿಸಿಕೊಳ್ಳುವ ಅಪಾಯವಿದೆ ಎಂದು ಹೇಳಿವೆ.

ಈ ನಡುವೆ, ಸುಮಾರು 6,50,706 ಜನರು ಇಸ್ರೇಲ್ ಸರ್ಕಾರಕ್ಕೆ ಆಗ್ರಹ ಪತ್ರವನ್ನು ಕಳುಹಿಸಿದ್ದು, ಹಡಗು ಯಾವುದೇ ಅಡೆತಡೆಯಿಲ್ಲದೆ ಗಾಝಾ ತಲುಪಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದೆ.

“ಹಡಗು ನಿರಾಯುಧವಾಗಿದ್ದು, ಯಾವುದೇ ಬೆದರಿಕೆಯನ್ನು ಒಡ್ಡುವುದಿಲ್ಲ ಮತ್ತು ಅಂತರರಾಷ್ಟ್ರೀಯ ಕಡಲ ಕಾನೂನು ಹಾಗೂ ಮಾನವೀಯ ಮತ್ತು ಮಾನವ ಹಕ್ಕುಗಳ ಕಾನೂನಿನೊಂದಿಗೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಪ್ರಯಾಣಿಕರು ಮತ್ತು ಸಿಬ್ಬಂದಿಯಲ್ಲಿ ಸಂಸದರು, ಪತ್ರಕರ್ತರು, ವಕೀಲರು ಮತ್ತು ಜಾಗತಿಕ ನಾಗರಿಕ ಸಮಾಜವನ್ನು ಪ್ರತಿನಿಧಿಸುವ ಮಾನವ ಹಕ್ಕುಗಳ ರಕ್ಷಕರು ಸೇರಿದ್ದಾರೆ” ಎಂದು ಪತ್ರವು ಹೇಳಿದೆ.

“ಮದ್ಲೀನ್ ಅಥವಾ ಅದರ ನಾಗರಿಕ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಯಾವುದೇ ಪ್ರತಿಬಂಧ, ದಾಳಿ, ವಿಧ್ವಂಸಕ ಕೃತ್ಯ ಅಥವಾ ಹಸ್ತಕ್ಷೇಪ ಮಾಡಿದರೆ ಅದು ನಾಗರಿಕರ ಮೇಲಿನ ಉದ್ದೇಶಪೂರ್ವಕ, ತಿಳಿದ ಮತ್ತು ಕಾನೂನುಬಾಹಿರ ದಾಳಿಯಾಗುತ್ತದೆ. ಜೊತಗೆ ಅದು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುತ್ತದೆ” ಎಂದು ಪತ್ರವೂ ಎಚ್ಚರಿಸಿದೆ.

“ಅಂತಹ ಕ್ರಮಗಳು ನಾಲ್ಕನೇ ಜಿನೀವಾ ಸಮಾವೇಶದ ಗಂಭೀರ ಉಲ್ಲಂಘನೆಗೆ ಸಮನಾಗಿರುತ್ತದೆ ಮತ್ತು ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ರೋಮ್ ಶಾಸನದ ಅಡಿಯಲ್ಲಿನ ಯುದ್ಧ ಅಪರಾಧಗಳಾಗಿ ಪರಿಣಮಿಸಬಹುದು” ಎಂದು ಪತ್ರವೂ ಹೇಳಿದೆ.

ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌ ಬೆಂಬಲ

ಈ ನಡುವೆ ಬುಧವಾರ ಐರ್ಲೆಂಡ್‌ನ ರಾಜಧಾನಿ ಡಬ್ಲಿನ್‌ನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಅಮೆರಿಕದ ಗಾಯಕ ಮ್ಯಾಕ್ಲೆಮೋರ್‌, ಪ್ಯಾಲೆಸ್ತೀನಿ ಹೋರಾಟ ಮತ್ತು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಳೆದ ಜೂನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಬೆಂಬಲಿಗ ಮ್ಯಾಕ್ಲೆಮೋರ್ ಜರ್ಮನಿಯ ವೇದಿಕೆಯಲ್ಲಿ ಮಾಡಿದ ಭಾಷಣದಲ್ಲಿ ಹತ್ಯಾಕಾಂಡವನ್ನು ನೆನಪಿಸಿಕೊಂಡಿದ್ದಾರೆ. ಈ ವೇಳೆ ಅವರು ಗಾಝಾದ ಮೇಲೆ ಇಸ್ರೇಲ್‌ನ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು.

ಭಾನುವಾರ ಸಿಸಿಲಿಯಿಂದ ಹೊರಟ ಮದ್ಲೀನ್, ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳನ್ನು ಒಳಗೊಂಡಂತೆ ಮಾನವೀಯ ಸಹಾಯವನ್ನು ಹೊತ್ತೊಯ್ಯುತ್ತಿದೆ. ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ನೌಕಾ ದಿಗ್ಬಂಧನವನ್ನು ಮುರಿಯಲು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಆಯೋಜಿಸಿರುವ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಪ್ರಯಾಣಿಸುತ್ತಿದೆ.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ. #AllEyesOnDeck | 6ನೇ ದಿನಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...