Homeಕರ್ನಾಟಕತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ...

ತುಮಕೂರು ಸ್ಮಾರ್ಟ್‌ ಸಿಟಿ: ಅಗೆದದ್ದು ಆಯ್ತು, ಈಗ ತೇಪೆ ಕೆಲಸ. ಅದು ನೆಪಮಾತ್ರಕ್ಕೆ…

ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು

- Advertisement -
- Advertisement -

ಅಗೆದದ್ದು ಆಯ್ತು ಈಗ ತೇಪೆ ಕೆಲಸ : ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿರುವ ಗುತ್ತಿಗೆದಾರರು

ತುಮಕೂರು ನಗರದಲ್ಲಿ ಕುಡಿಯುವ ನೀರು, ನೈಸರ್ಗಿಕ ಅನಿಲ ಹಾಗು ಜಿಯೋ ಕೇಬಲ್ ಗಾಗಿ ಆಗೆದಿದ್ದ ಜಾಗದಲ್ಲಿ ನೆಪಮಾತ್ರಕ್ಕೆ ಜಲ್ಲಿಕಲ್ಲು ಇರುವ ಪುಡಿಯಿಂದ ತೇಪೆಹಾಕುವ ಕೆಲಸ ನಡೆಯುತ್ತಿದೆ. ಅದರ ಮೇಲೆ ಡಾಂಬರೀಕರಣ ಮಾಡಿದರೆ ಅದು ಒಂದೆರಡು ದಿನದಲ್ಲಿ ಕಿತ್ತುಹೋದರೂ ಪರವಾಗಿಲ್ಲ. ಕೇಳುವವರು ಹೇಳುವವರು ಇಲ್ಲವೆಂಬಂತಾಗಿದೆ.

ಸಬ್ ರೋಡ್ ಗಳಲ್ಲಿ ಹಾಕಿದ ಟಾರ್ ಕಿತ್ತು ಬಂದಿದೆ. ಕಳಪೆ ಕಾಮಗಾರಿ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಗೆದ ನೆಲದಲ್ಲಿ ಒಂದಿಂಚು ಕೂಡ ಅಗೆಯದೆ ಜಲ್ಲಿಪುಡಿ ಹಾಕಿ ಟಾರ್ ನಿಂದ ಮುಚ್ಚುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ಮತ್ತು ಇಂಜಿನಿಯರ್ ಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ಆರೋಪಿಸುತ್ತಿದ್ದಾರೆ.

ನೋಡಿ ಸರ್ ಚರಂಡಿ ತೋಡಿರುವ ಜಾಗದಲ್ಲಿ ಕನಿಷ್ಟ ಮೂರು ಇಂಚು ಮಣ್ಣುತೆಗೆದು ಜಲ್ಲಿಯನ್ನು ತುಂಬಿ ಅದನ್ನು ರೋಲರ್ ನಿಂದ ಸಮತಟ್ಟು ಮಾಡಿದ ಮೇಲೆ ಡಾಂಬರೀಕರಣ ಮಾಡಬೇಕು. ಆದರೆ ಇವರು ನೆಪಮಾತ್ರಕ್ಕೆ ಜಲ್ಲಿಪುಡಿಯಿಂದ ಮುಚ್ಚುತ್ತಿದ್ದಾರೆ. ಮಳೆ ಬಂದರೆ ಕೊಚ್ಚಿ ಹೋಗುವುದು ಗ್ಯಾರೆಂಟಿ. ಏನು ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಕಿವಿಗೆ ಹಾಕಿಕೊಳ್ಳಲ್ಲ. ಗುತ್ತಿಗೆದಾರರು ಸ್ಥಳದಲ್ಲಿ ಇಲ್ಲ. ಕಾರ್ಮಿಕರು ಇನ್ನೇನು ಮಾಡಿಯಾರು ಹೇಳಿ ಎಂದು ರುದ್ರೇಶ್ ಪ್ರಶ್ನಿಸುತ್ತಾರೆ.

ಕುಡಿಯುವ ನೀರು, ಜಿಯೋ ಕೇಬಲ್ ಮತ್ತು ಗ್ಯಾಸ್ ಲೈನ್ ಗಾಗಿ ಅಗೆದು ರಸ್ತೆಗಳು ಗಬ್ಬೆದ್ದು ಹೋಗಿವೆ. ನಿತ್ಯವೂ ರಸ್ತೆಯಲ್ಲಿ ಓಡಾಡುವರು ದೂಳು ಸ್ನಾನ ಮಾಡುವುದು ಸಾಮಾನ್ಯವಾಗಿದೆ. ರಸ್ತೆ ಮಧ್ಯೆ ಎರಡೂ ಕಡೆ ನೀರು ಮತ್ತು ಗ್ಯಾಸ್ ಪೈಪ್ ಲೈನ್ ಸಂಪರ್ಕ ಕೂಡಿರುವ ಜಾಗದಲ್ಲಿ ಸರಿಯಾಗಿ ಜಲ್ಲಿಕಲ್ಲಿನಿಂದ ಮುಚ್ಚಿಲ್ಲ. ಹೀಗಾಗಿ ವಾಹನಗಳಲ್ಲಿ ಹೋದರೆ ಬೆನ್ನುನೋವು ಬರುವುದು ಗ್ಯಾರೆಂಟಿ. ನಾಲ್ಕುಚಕ್ರದ ವಾಹನಗಳು ದಡಕ್ ದಡಕ್ ಎಂದು ಸದ್ದು ಮಾಡುತ್ತವೆ. ಇದು ಗುತ್ತಿಗೆದಾರರು ಮಾಡುತ್ತಿರುವ ಕೆಲಸವಾಗಿದೆ.

ಈಗ ಮೂರು ಲೈನ್ ಗಳನ್ನು ಮಾತ್ರ ಅಳವಡಿಸಲಾಗಿದೆ. ಗ್ಯಾಸ್ ಪೈಪ್ ಲೈನ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದಕ್ಕಾಗಿ ಮತ್ತೆ ರಸ್ತೆ ಅಗೆಯಬೇಕಾಗುತ್ತದೆ. ಇನ್ನೂ ವಿದ್ಯುತ್ ಲೈನ್ ಭೂಗತವಾಗಿ ಹೋಗಿಲ್ಲ. ಅದಕ್ಕಾಗಿಯೂ ರಸ್ತೆಯನ್ನು ಕಟಿಂಗ್ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಮ್ಮೆ ಅಗೆಯುವುದು ಮತ್ತೊಮ್ಮೆ ಮುಚ್ಚುವುದು ಮಾಡುತ್ತಲೇ ಬರುತ್ತಿದ್ದಾರೆ.

ಅಂದರೆ ರಸ್ತೆ ಅಗೆದಿರುವ ಜಾಗದಲ್ಲಿ ಜಲ್ಲಿಪುಡಿ ಹಾಕಿ ಅದರ ಮೇಲೆ ಟಾರ್ ಮುಚ್ಚುವುದಿಂದ ಹೆಚ್ಚು ದಿನ ಬಾಳಿಕೆ ಬರುವುದಿಲ್ಲ. ಅದರಿಂದ ಮತ್ತೆ ರಿಪೇರಿಗೆ ಬಿಲ್ ಮಾಡಿಕೊಳ್ಳಬಹುದು. ಇಂತಹ ಉದ್ದೇಶದಿಂದಲೇ ಗುತ್ತಿಗೆದಾರರು ಕಳಪೆ ಕಾಮಗಾರಿಯನ್ನು ಮಾಡುತ್ತಾರೆ. ಅಧಿಕಾರಿಗಳು ಮತ್ತು ಸ್ಮಾರ್ಟ್‌ ಇಂಜಿನಿಯರ್ ಗಳು ಸ್ಥಳ ಪರಿಶೀಲನೆ ಮಾಡಿ ಸರಿಯಾಗಿದೆಯೇ ಇಲ್ಲವೋ ಪರಿಶೀಲಿಸಿ ಮತ್ತೆ ಕಾಮಗಾರಿ ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಬೇಕು. ಮಾತುಕೇಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಮಾಡಿ ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು. ಆಗ ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನಿಗಾ ವಹಿಸಲು ಸಾಧ್ಯವಿದೆ ಎನ್ನುತ್ತಾರೆ ದಯಾನಂದ್

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅರ್ಧಂಬರ್ಧ ಆಗಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಕಳಪೆಗಾರಿ ಮಾಡಿ ಬಿಲ್ ಪಡೆದಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕುಂಭಕರ್ಣನ ನಿದ್ದೆಯಿಂದ ಎದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕರು ಕಾಮಗಾರಿಯಲ್ಲಿ ಅವ್ಯಹಾರ ನಡೆದಿಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸ್ಮಾರ್ಟ್ ಸಿಟಿ ಅವ್ಯವಹಾರ: ಸಂಸದ ಬಸವರಾಜ್‌, ಸೊಗಡು ನಡುವೆ ಭಿನ್ನಾಭಿಪ್ರಾಯ..

ಆದರೆ ಜನರು ಆರೋಪಿಸುವುದೇನೆಂದರೆ ನಗರದಲ್ಲಿ ನಡೆಯುತ್ತಿರುವ ಒಂದು ಕಾಮಗಾರಿಯೂ ಸರಿಯಾಗಿ ವೈಜ್ಞಾನಿಕವಾಗಿ ನೆಯುತ್ತಿಲ್ಲ. ರಸ್ತೆಗಳ ಬದಿಯಲ್ಲಿ ನೆಪಮಾತ್ರಕ್ಕೆ ಬರೀ ಜಲ್ಲಿಪುಡಿ ಮುಚ್ಚಿ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...