Homeಮುಖಪುಟಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು

- Advertisement -
- Advertisement -

ಕಳೆದ ವರ್ಷ ನಲ್ಗೋಂಡ ಜಿಲ್ಲೆಯ ಮಿರ್ಯಾಲ ಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.

ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮತ್ತು ಆತನ ಗೂಂಡಾಗಳು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಇಡೀ ದೇಶ ಈ ಹತ್ಯೆಯಿಂದ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಈ ಸನ್ನಿವೇಶವನ್ನು ಅಮೃತ ಸಹ ದಿಟ್ಟತನದಿಂದ ಎದುರಿಸಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಲ್ಲದೇ ಮೃತ ಗಂಡನ ಕುಟುಂಬದ ಜೊತೆಯೇ ಇದ್ದು ತಂದೆಯ ವಿರುದ್ಧ ಕಾನೂನು ಸಮರ ಸಾರಿದ್ದಳು. ಬಹಳಷ್ಟು ಜನರಿಗೆ ಅಂತರ್ಜಾತಿ ಮದುವೆಯಾಗಿ ಕುಟುಂಬವನ್ನು ಎದುರಿಸುವ ಬಗ್ಗೆ ಸ್ಫೂರ್ತಿಯಾಗಿ ಆಕೆ ನಿಂತಿದ್ದಾಳೆ. ಈಗ ಅಮೃತಾಳಿಗೆ ಮುದ್ದಾದ ಗಂಡುಮಗು ಜನಿಸಿದ್ದು ಆ ಮಗುವಿನ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಆದರೆ ಪ್ರಣಯ್‌ ಹತ್ಯೆಯ ಪ್ರತ್ಯಕ್ಷ ಸಾಕ್ಷಿ ಅಮೃತಳೇ ಆಗಿದ್ದು, ಇತ್ತಿಚಿಗೆ ಕೋರ್ಟಿನಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳದಂತೆ ತಂದೆ ಮಾರುತಿರಾವ್ ಮತ್ತು ತನ್ನ ಬೆಂಬಲಿಗ ಕರೀಂ ಸೇರಿ ಅಮೃತಾಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಂದೆ ಮಾರುತಿರಾವ್ ನೊಂದಿಗೆ ಅಮೃತ

ಪ್ರಣಯ್‌ ಕೊಲೆ ಕೇಸಿನಲ್ಲಿ ಜೈಲಿನಲ್ಲಿದ್ದ ಮಾರುತಿರಾವ್ ಏಪ್ರಿಲ್‌ನಲ್ಲಿ ಬೇಲ್‌ ಮೇಲೆ ಹೊರಬಂದಿದ್ದಾನೆ. ಅದಾದ ಆರು ತಿಂಗಳಲ್ಲಿಯೇ ತನ್ನ ಸ್ನೇಹಿತ ಕಂದುಲ ವೆಂಕಟೇಶ್ವರರಾವ್‌ನನ್ನು ಅಮೃತ ವರ್ಷಿಣಿ ಜೊತೆ ಮಾತುಕತೆ ಕಳುಹಿಸಿದ್ದಾನೆ.

ವೆಂಕಟೇಶ್ವರಾವ್ ‘ನಿಮ್ಮ ತಂದೆ ಹೇಳಿದ ಹಾಗೆ ನೀನು ನಡೆದುಕೊಂಡರೆ ನಿಮ್ಮ ತಂದೆಯ ಆಸ್ತಿಯನ್ನೆಲ್ಲ ನಿನಗೆ ಬರೆದುಕೊಡಲಿದ್ದಾರೆ. ಆತನಿಗೆ ಇಷ್ಟವಾದ ವ್ಯಕ್ತಿಯನ್ನು ನೀನು ಮದುವೆ ಆದರೆ ಎಲ್ಲಾ ಆಸ್ತಿಯು ನಿನಗೆ ಸೇರುತ್ತದೆ ಎಂದು ಆಮಿಷ ಒಡ್ಡಿದ್ದಾನೆ. ಆದರೆ ತನ್ನ ಪತಿಯ ಹತ್ಯೆಯಿಂದ ಆಕ್ರೋಶಿತರಾಗಿರುವ ಅಮೃತಾ ಈ ಪ್ರಸ್ತಾಪವನ್ನು ತಿರಸ್ಕರಿಸಿ ವೆಂಕಟೇಶ್ವರಾವ್ ನನ್ನು ಮನೆಯಿಂದ ವಾಪಸ್ಸು ಕಳುಹಿಸಿದ್ದಾಳೆ.

ಮಗುವಿನೊಂದಿಗೆ ಅಮೃತ

ಇದರಿಂದ ಕುಪಿತಗೊಂಡಿರುವ ಆಕೆಯ ತಂದೆ ನಾನು ಹೇಳಿದಂತೆ ಕೇಳದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ, ನಿನಗೆ ತೊಂದರೆ ತಪ್ಪಿದ್ದಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ. ಇದರಿಂದ ನೊಂದ ಅಮೃತ ಪೋಲೀಸರಿಗೆ ದೂರು ನೀಡಿದ್ದರಿಂದ ಮಾರುತಿರಾವ್ ಮತ್ತು ಕರೀಂನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ.

ಜಾತಿ ಅಮಲನ್ನು ನೆತ್ತಿಗೇರಿಸಿಕೊಂಡಿರುವ ದುರಹಾಂಕಾರಿ ಮಾರುತಿರಾವ್ ತನ್ನ ತಪ್ಪಿಗೆ ಮತ್ತು ಶಿಕ್ಷೆಗೆ ಪಾಠ ಕಲಿತಂತೆ ಕಾಣುತ್ತಿಲ್ಲ. ಅದಕ್ಕಾಗಿಯೇ ಅಮೃತ ಕುಟುಂಬವನ್ನು ಪದೇ ಪದೇ ಟಾರ್ಗೆಟ್ ಮಾಡುತ್ತಿರುವುದರಿಂದ ಆತನಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಅಮೃತ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂಬ ಒತ್ತಾಯವನ್ನು ಪ್ರಜ್ಞಾವಂತರು ಮುಂದಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...