Homeಕರ್ನಾಟಕಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಮೃತ ದಿವ್ಯಾಂಶಿ ತಾಯಿ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರಲ್ಲಿ ಒಬ್ಬರಾದ ದಿವ್ಯಾಂಶಿ ಅವರ ತಾಯಿ, ತಮ್ಮ ಮಗಳ ಸಾವಿಗೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ಈ ದುರಂತವನ್ನು ಹುಚ್ಚುತನ ಹಾಗೂ ರಾಜ್ಯ ಸರ್ಕಾರದ ನಿರ್ವಹಣೆಯ ದುಷ್ಪರಿಣಾಮ ಎಂದು ಕರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ದಿವ್ಯಾಂಶಿ ಸಾವನ್ನಪ್ಪಿದರು. ಕಾಲ್ತುಳಿತವು 11 ಜೀವಗಳನ್ನು ಬಲಿ ತೆಗೆದುಕೊಂಡಿತು; 47 ಅಭಿಮಾನಿಗಳನ್ನು ಗಾಯಗೊಳಿಸಿತು. ಅಂದಾಜು 2 ರಿಂದ 3 ಲಕ್ಷ ಜನರು ಕೇವಲ 35,000 ಸಾಮರ್ಥ್ಯವಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣ ಪ್ರವೇಶಿಸಲು ಆಗಮಿಸಿದ್ದರು.

“ನಾನು ಸಂಚಾರ ಪೊಲೀಸರನ್ನು ದೂಷಿಸುತ್ತೇನೆ; ಅವರಿಗೆ ಜನಸಂದಣಿಯನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿರಲಿಲ್ಲವೇ? ಸಾಕಷ್ಟು ಪೊಲೀಸ್ ನಿಯೋಜನೆ ಇತ್ತು. ಆದರೆ, ಯಾರೂ ಏನನ್ನೂ ನಿರ್ವಹಿಸಲಿಲ್ಲ. ಹೊರಗೆ ಇದು ನಡೆಯುತ್ತಿರುವಾಗ ಸರ್ಕಾರ ಕ್ರೀಡಾಂಗಣದೊಳಗೆ ಆಚರಣೆಗಳನ್ನು ನಡೆಸಿದ್ದು ಹುಚ್ಚುತನ” ಎಂದು ಅವರು ವರದಿಗಾರರ ಮುಂದೆ ಹೇಳಿದರು.

ಮೃತ ಬಾಲಕಿ ದಿವ್ಯಾಂಶಿ ಶವದ ಮುಂದೆ ರೋಧಿಸುತ್ತಿರುವ ಸಂಬಂಧಿಕರು

ಆಂಧ್ರಪ್ರದೇಶದ ಅಪ್ರಾಪ್ತ ಬಾಲಕಿ ದಿವ್ಯಾಂಶಿ ಬುಧವಾರ ತನ್ನ ತಾಯಿಯೊಂದಿಗೆ ತನ್ನ ಕ್ರಿಕೆಟ್ ಆರಾಧ್ಯ ದೈವ ವಿರಾಟ್ ಕೊಹ್ಲಿಯನ್ನು ನೋಡಲು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು.

“ನಾವು ಫುಟ್‌ಪಾತ್‌ನಲ್ಲಿ ಆರಾಮವಾಗಿ ಕುಳಿತಿದ್ದೆವು. ಒಳಗೆ ಹೋಗುವ ಯೋಜನೆಯೂ ಇರಲಿಲ್ಲ. ಅವಳು ಕ್ರಿಕೆಟ್‌ನಿಂದ ತುಂಬಾ ಆಕರ್ಷಿತಳಾಗಿದ್ದಳು, ಆಟಗಾರರ ಬಗ್ಗೆ ಅವಳಿಗೆ ಎಲ್ಲವೂ ತಿಳಿದಿತ್ತು. ಅವಳು ಕೊಹ್ಲಿಯನ್ನು ನೋಡಲು ಬಯಸಿದ್ದಳು” ಎಂದು ತಾಯಿ ಹೇಳಿದರು.

ಮಧ್ಯಾಹ್ನ 3.30 ರ ಸುಮಾರಿಗೆ ಜನಸಂದಣಿ ಅನಿಯಂತ್ರಿತವಾಗಿ ಹೆಚ್ಚಾದಾಗ ಕಾಲ್ತುಳಿತ ಸಂಭವಿಸಿತು. “ನನಗೆ ಉಸಿರುಗಟ್ಟಿಸುತ್ತಿತ್ತು; ನಾನು ಒಬ್ಬ ವ್ಯಕ್ತಿಯನ್ನು ಸುರಕ್ಷಿತವಾಗಿ ಎಳೆಯುವಲ್ಲಿ ಯಶಸ್ವಿಯಾಗಿದ್ದೆ. ನಂತರ, ಕೇವಲ ಐದು ನಿಮಿಷಗಳಲ್ಲಿ, ದಿವ್ಯಾಂಶಿ ಕಾಣೆಯಾದಳು. ಅವಳು ಒಳಗೆ ಹೋಗಿರಬಹುದು ಎಂದು ನಾನು ಭಾವಿಸಿದೆ. ಕೆಲಹೊತ್ತಿನ ಬಳಿಕ ಗಾಯಗೊಂಡಿದ್ದ ಆಕೆಯನ್ನು ನಾನು ನೋಡಿದೆ” ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ತನ್ನ ಮಗಳ ಬಹುಮುಖ ಪ್ರತಿಭೆ ಕುರಿತು ಮಾತನಾಡಿದ ಅವರು, “ಅವಳು ಒಬ್ಬ ದೇವತೆ; ಅವಳ ಹೊಸ ಶಾಲೆಗೆ ಸೇರಿ ಕೇವಲ ಎರಡು ವರ್ಷವಾಗಿತ್ತು. ಶಿಕ್ಷಕರು ಈಗಾಗಲೇ ಅವಳ ಬಗ್ಗೆ ತುಂಬಾ ಹೆಮ್ಮೆಪಡುತ್ತಿದ್ದರು. ಅವಳನ್ನು ಹೆತ್ತಾಗ ನನಗೆ ಕೇವಲ 20 ವರ್ಷ; ನಾವು ಒಟ್ಟಿಗೆ ಬೆಳೆದೆವು. ನಾನು ಮನೆಯಲ್ಲಿ ಇಲ್ಲದಿದ್ದರೆ ಆಕೆಯ ತಮ್ಮನನ್ನು ತಾಯಿಯಂತೆ ಬೆಳೆಸುತ್ತಿದ್ದಳು” ಎಂದು ಭಾವುಕರಾದರು.

ಕಾಲ್ತುಳಿತ ದುರಂತ: ಉನ್ನತ ಅಧಿಕಾರಿಗಳ ಎತ್ತಂಗಡಿಯಿಂದ ಸಿಎಂ ಅತ್ಯಾಪ್ತರ ತಲೆದಂಡದವರೆಗಿನ ಬೆಳವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...