Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...