Homeಕರ್ನಾಟಕಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ 'ನೈತಿಕ ಹೊಣೆ' ಹೊತ್ತು...

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

- Advertisement -
- Advertisement -

ಬೆಂಗಳೂರು: ಜೂನ್ 4ರಂದು ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ 2025ರ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ‘ನೈತಿಕ ಹೊಣೆಗಾರಿಕೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಎ.ಶಂಕರ್ ಮತ್ತು ಖಜಾಂಚಿ ಇ.ಎಸ್. ಜೈರಾಮ್ ರಾಜೀನಾಮೆ ನೀಡಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಐಪಿಎಲ್‌ನ 18 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಆರ್‌ಸಿಬಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ ಸಂಭ್ರಮಾಚರಣೆಯ ಮೆರವಣಿಗೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರಿಂದ ಈ ಗೆಲುವು ಕಹಿಘಟನೆಯಾಗಿ ಮರುಕಳುಹಿಸಿತ್ತು. ಬೆಂಗಳೂರಿನಲ್ಲಿ ತಂಡದ ಚೊಚ್ಚಲ ಐಪಿಎಲ್ ಪ್ರಶಸ್ತಿ ಆಚರಣೆಯು ದುರಂತ ತಿರುವು ಪಡೆದು 11 ಅಭಿಮಾನಿಗಳ ಸಾವಿಗೆ ಕಾರಣವಾದ ನಂತರ, ಪೊಲೀಸರು ಪ್ರಕರಣದಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಫ್ರಾಂಚೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದ್ದಾರೆ.

ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಮತ್ತು ಇದರಲ್ಲಿ ನಮ್ಮ ಪಾತ್ರವು ತುಂಬಾ ಸೀಮಿತವಾಗಿದ್ದರೂ, ನೈತಿಕ ಜವಾಬ್ದಾರಿಯ ಕಾರಣದಿಂದಾಗಿ ನಿನ್ನೆ ರಾತ್ರಿ ನಾವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಈ ಕುರಿತು 2025ರ ಜೂನ್ 6ರಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ ಎಂದು ಎ. ಶಂಕರ್ ಇ.ಎಸ್. ಜೈರಾಮ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ವಿಜಯೋತ್ಸವದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ತಂಡದ ಸದಸ್ಯರನ್ನು ನೋಡಲು ಲಕ್ಷಾಂತರ ಜನರು ಸೇರಿದ್ದರು. ಇದು ಸಂಪೂರ್ಣ ಅವ್ಯವಸ್ಥೆಗೆ ಕಾರಣವಾಯಿತು ಮತ್ತು ಅಂತಿಮವಾಗಿ ಬುಧವಾರ ಕ್ರೀಡಾಂಗಣದ ಹೊರಗೆ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಕಾರಣವಾಯಿತು.

ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆ ನಮ್ಮ ತಂಡಕ್ಕೆ ತುಂಬಾ ನೋವನ್ನುಂಟು ಮಾಡಿದೆ ಎಂದು  ಗುರುವಾರದಂದು ಆರ್‌ಸಿಬಿ ಹೇಳಿಕೆ ತಿಳಿಸಿದೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಿಗೆ ಸಹಾಯ ಮಾಡಲು ನಿಧಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ಫ್ರಾಂಚೈಸಿ ತಿಳಿಸಿದೆ.

ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದೆ. ಇದಲ್ಲದೆ ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ಸ್ಥಾಪಿಸಲಾಗುತ್ತಿದೆ ಎಂದು ಅದು ಹೇಳಿದೆ.

ಈ ದುರಂತದ ಬಗ್ಗೆ ಪ್ರಸ್ತುತ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಯುತ್ತಿದ್ದು, ಮುಂದಿನ ಹದಿನೈದು ದಿನಗಳಲ್ಲಿ ಅದರ ವರದಿಯನ್ನು ನಿರೀಕ್ಷಿಸಲಾಗಿದೆ. ಟ್ರೋಫಿ ಗೆದ್ದ ಒಂದು ದಿನದ ನಂತರ ವಿಜಯೋತ್ಸವವನ್ನು ನಡೆಸಿದ್ದಕ್ಕಾಗಿ ಆರ್‌ಸಿಬಿಯು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮಕ್ಕೆ ಅಗತ್ಯವಾದ ಸಾಕಷ್ಟು ಭದ್ರತೆಯನ್ನು ವ್ಯವಸ್ಥೆ ಮಾಡಲು ಸಾಕಷ್ಟು ಸಮಯವನ್ನು ಇಲ್ಲವಾಗಿಸಿತ್ತು.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬುಧವಾರದ ವ್ಯವಸ್ಥೆಯಲ್ಲಿನ ಲೋಪಗಳನ್ನು ಪ್ರಶ್ನಿಸಿದ್ದಾರೆ ಮತ್ತು ಅಂತಹ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಫ್ರಾಂಚೈಸಿ, ಪೊಲೀಸ್ ಮತ್ತು ಜಿಲ್ಲಾಡಳಿತದ ನಡುವೆ ಸರಿಯಾದ ಸಮನ್ವಯದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಕಳೆದ ವರ್ಷ ಭಾರತದ ಟಿ20 ವಿಶ್ವಕಪ್ ಗೆಲುವಿನ ನಂತರ ಮುಂಬೈನಲ್ಲಿ ಲಕ್ಷಾಂತರ ಕ್ರೀಡಾ ಅಭಿಮಾನಿಗಳು ಬೀದಿಗೆ ಇಳಿದಿದ್ದಾಗ ನಡೆಸಿದ ಸರಾಗ ವಿಜಯೋತ್ಸವ ಮೆರವಣಿಗೆಯನ್ನು ಅವರು ಉದಾಹರಣೆಯಾಗಿ ಉಲ್ಲೇಖಿಸಿದರು.

ಆರ್‌ಸಿಬಿಯ ಸಾಮಾಜಿಕ ಮಾಧ್ಯಮ ತಂಡವು ಸಾಮಾಜಿಕ ಮಾಧ್ಯಮ ಪೋಸ್ಟ್‌ನೊಂದಿಗೆ ಜನರನ್ನು ವಿಜಯೋತ್ಸವದ ಮೆರವಣಿಗೆಗೆ ಆಹ್ವಾನಿಸಿತ್ತು. ಆದರೆ ಬೆಂಗಳೂರು ಸಂಚಾರ ಪೊಲೀಸರು ಮಾರ್ಗದಲ್ಲಿನ ದಟ್ಟಣೆಯನ್ನು ಪರಿಗಣಿಸಿ ವಿಜಯೋತ್ಸವ ಮೆರವಣಿಗೆಗೆ ಅವಕಾಶ ನೀಡುವುದು ಕಷ್ಟ ಎಂದು ಹೇಳಿಕೆ ನೀಡಿದ ನಂತರ ಅದನ್ನು ಹಿಂತೆಗೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆರವಣಿಗೆಗೆ ಅನುಮತಿ ನೀಡಿದರು. ಆದರೆ ಜನಸಂದಣಿಯ ಅವ್ಯವಸ್ಥೆ ಮತ್ತು ಮಳೆಯಿಂದಾಗಿ ಅದು ನಡೆಯಲಿಲ್ಲ.

ಭಾರತದ ಮಾಜಿ ವಿಕೆಟ್ ಕೀಪರ್ ಮತ್ತು ಕರ್ನಾಟಕದ ದಂತಕಥೆ ಸೈಯದ್ ಕಿರ್ಮಾನಿ ಇಂಡಿಯಾ ಟುಡೇ ಜೊತೆ  ಕಟುವಾಗಿ ಮಾತನಾಡಿದರು. ಈ ದುರಂತ ಘಟನೆಯನ್ನು “ಮಾರಕ ಸ್ವಾಗತ” ಎಂದು ಕರೆದರು.

ಆಚರಣೆಯಲ್ಲಿ ಭಾಗವಹಿಸಿದ್ದ ಆರ್‌ಸಿಬಿಯ ಅತಿದೊಡ್ಡ ತಾರೆ ವಿರಾಟ್ ಕೊಹ್ಲಿ, ಕ್ರೀಡಾಂಗಣದ ಹೊರಗೆ ನಡೆದ ಘಟನೆಯಿಂದ “ಆಶ್ಚರ್ಯಗೊಂಡಿದ್ದೇನೆ” ಎಂದು ಹೇಳಿದರು.

ನರಗುಂದ: ಮೂವರು ದಲಿತ ಬಾಲಕರನ್ನು ಧ್ವಜಸ್ತಂಭಕ್ಕೆ ಕಟ್ಟಿಹಾಕಿ ದೊಣ್ಣೆ, ಚಪ್ಪಲಿಯಿಂದ ಹಲ್ಲೆ; 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....