Homeಮುಖಪುಟಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್...

ಐದು ತಿಂಗಳಲ್ಲಿ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರ ಸೇರ್ಪಡೆ ಹೇಗೆ ಸಾಧ್ಯ?: ಪವನ್ ಖೇರಾ ಪ್ರಶ್ನೆ

- Advertisement -
- Advertisement -

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿಯವರ ಆರೋಪವನ್ನು ಬೆಂಬಲಿಸಿದ ಕಾಂಗ್ರೆಸ್ ನಾಯಕ ಪವನ್ ಖೇರಾ, 2024ರ ವಿಧಾನಸಭಾ ಚುನಾವಣೆಗೆ ಹಿಂದಿನ ಐದು ತಿಂಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಗೆ 41 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಪ್ರಶ್ನೆಗಳು ಬಹಳ ಸ್ಪಷ್ಟವಾಗಿವೆ… 2019 ರಿಂದ 2024 ರವರೆಗಿನ ಐದು ವರ್ಷಗಳಲ್ಲಿ, ಮಹಾರಾಷ್ಟ್ರದಲ್ಲಿ 31 ಲಕ್ಷ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಹೀಗಿರುವಾಗ, ಕೇವಲ ಐದು ತಿಂಗಳಲ್ಲಿ 41 ಲಕ್ಷ ಹೊಸ ಮತದಾರರನ್ನು ಸೇರಿಸಲು ಹೇಗೆ ಸಾಧ್ಯ? ಎಂದು ಖೇರಾ ಕೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, “ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಯ ನಂತರ ಮತದಾನದ ಶೇಕಡಾವಾರು ಪ್ರಮಾಣ ಭಾರೀ ಏರಿಕೆಯಾದ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಸಂಜೆ 5 ಗಂಟೆಗೆ ಶೇ. 58.22ರಷ್ಟು ಮತದಾನ ಪ್ರಮಾಣ ತೋರಿಸಲಾಗಿತ್ತು. ಅಂತಿಮ ಮತದಾನ ಪ್ರಮಾಣ ಶೇ. 66ರಷ್ಷು ಆಗಿತ್ತು. ಹಾಗಿದ್ದರೆ, ಒಂದು ಗಂಟೆಯ ಅವಧಿಯಲ್ಲಿ ಶೇ. 8 ರಷ್ಟು ಹೆಚ್ಚಳ ಹೇಗೆ ಸಾಧ್ಯ? ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅದೇ 12,000 ಬೂತ್‌ಗಳಿಂದ ಹೊಸ ಮತದಾರರು ಬರಲು ಹೇಗೆ ಸಾಧ್ಯ?” ಎಂದು ಖೇರಾ ಕೇಳಿ ಪ್ರಶ್ನಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಏಕೆ ತೆಗೆದುಹಾಕಲಾಯಿತು? ಎಂದು ಪ್ರಶ್ನಿಸಿದ ಪವನ್ ಖೇರಾ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದ ರಾಹುಲ್ ಗಾಂಧಿಯವರ ಆರೋಪಗಳನ್ನು “ಕಾನೂನಿನ ನಿಯಮಕ್ಕೆ ಅವಮಾನ” ಎಂದು ಚುನಾವಣಾ ಆಯೋಗ ಶನಿವಾರ ಬಣ್ಣಿಸಿದೆ.

“ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧ ಎತ್ತಲಾದ ಆಧಾರರಹಿತ ಆರೋಪಗಳು ಕಾನೂನಿನ ನಿಯಮಕ್ಕೆ ವಿರುದ್ಧವಾಗಿವೆ. ಚುನಾವಣಾ ಆಯೋಗವು ಡಿಸೆಂಬರ್ 24, 2024 ರಂದು ಕಾಂಗ್ರೆಸ್‌ಗೆ ನೀಡಿದ ಉತ್ತರದಲ್ಲಿ ಈ ಎಲ್ಲಾ ಸಂಗತಿಗಳು ಇವೆ. ಅಲ್ಲದೆ ಆಯೋಗದ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದೆ. ಮತ್ತೆ ಮತ್ತೆ ಅನುಮಾನಗಳನ್ನು ವ್ಯಕ್ತಪಡಿಸುವಾಗ ಈ ಎಲ್ಲಾ ಸಂಗತಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೋರುತ್ತದೆ,” ಎಂದು ಚುನಾವಣಾ ಆಯೋಗ ಹೇಳಿದೆ.

“ಯಾರಾದರೂ ತಪ್ಪು ಮಾಹಿತಿಯನ್ನು ಹರಡಿದರೆ, ಅದು ಕಾನೂನಿನ ಬಗ್ಗೆ ಅಗೌರವ ತೋರುವುದಲ್ಲದೆ, ಅವರ ಸ್ವಂತ ರಾಜಕೀಯ ಪಕ್ಷದಿಂದ ನೇಮಕಗೊಂಡ ಸಾವಿರಾರು ಪ್ರತಿನಿಧಿಗಳಿಗೆ ಅಪಖ್ಯಾತಿ ತರುತ್ತದೆ. ಚುನಾವಣೆಯ ಸಮಯದಲ್ಲಿ ದಣಿವರಿಯದೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಿದ ಲಕ್ಷಾಂತರ ಚುನಾವಣಾ ಸಿಬ್ಬಂದಿಯನ್ನು ಅವಮಾನಿಸದಂತಾಗುತ್ತದೆ. ಮತದಾರರ ಪ್ರತಿಕೂಲ ತೀರ್ಪಿನ ನಂತರ, ಚುನಾವಣಾ ಆಯೋಗವು ರಾಜಿಯಾಗಿದೆ ಎಂದು ಹೇಳುವ ಮೂಲಕ ಅದೇ ವಿಷಯವನ್ನು ಮತ್ತೆ ಮುನ್ನೆಲೆಗೆ ತರಲು ಪ್ರಯತ್ನಿಸುವುದು ಸಂಪೂರ್ಣವಾಗಿ ಅಸಂಬದ್ಧವಾಗಿದೆ” ಎಂದಿದೆ.

ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...