Homeಅಂತರಾಷ್ಟ್ರೀಯವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.

ನಗರದ ಮಧ್ಯಭಾಗದಲ್ಲಿ ಭಾನುವಾರ ನೂರಾರು ಪ್ರತಿಭಟನಾಕಾರರು ವಲಸಿಗರ ಶೋಧ ಕಾರ್ಯಾಚರಣೆಯಲ್ಲಿ ಬಂಧಿತರಾದವರನ್ನು ಬಂಧಿಸಿಟ್ಟಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಂಧನ ಕೇಂದ್ರದ ಬಳಿ ಬೀಡುಬಿಟ್ಟಿದ್ದ ಭದ್ರತಾ ಪಡೆಗಳ ವಿರುದ್ದ “ಶೇಮ್, ಶೇಮ್” “ವಾಪಸ್ ಹೋಗಿ” ಇತ್ಯಾದಿ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿರುವುದು ಮತ್ತು ಭದ್ರತಾ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವುದನ್ನು ನೋಡಬಹುದು.

“ಒಂದು ಕಾಲದಲ್ಲಿ ಅಮೆರಿಕದ ಶ್ರೇಷ್ಠ ನಗರವಾಗಿದ್ದ ಲಾಸ್ ಏಂಜಲೀಸ್ ಅನ್ನು ಅಕ್ರಮ ವಲಸಿಗರು ಮತ್ತು ಕ್ರಿಮಿನಲ್‌ಗಳು ಆಕ್ರಮಿಸಿಕೊಂಡಿದ್ದಾರೆ. ಈಗ ಹಿಂಸಾತ್ಮಕ, ದಂಗೆಕೋರ ಗುಂಪುಗಳು ನಮ್ಮ ಗಡಿಪಾರು ಕಾರ್ಯಾಚರಣೆಗಳನ್ನು ನಿಲ್ಲಿಸಲು ಫೆಡರಲ್ ಏಜೆಂಟ್‌ಗಳ ಮೇಲೆ ದಾಳಿ ಮಾಡುತ್ತಿವೆ. ಆದರೆ, ಈ ಕಾನೂನುಬಾಹಿರ ಗಲಭೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ. ಲಾಸ್ ಏಂಜಲೀಸ್ ಅನ್ನು ವಲಸಿಗರ ಆಕ್ರಮಣದಿಂದ ಮುಕ್ತಗೊಳಿಸಲು ಮತ್ತು ಈ ವಲಸಿಗರ ಗಲಭೆಗಳನ್ನು ಕೊನೆಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅಕ್ರಮ ವಲಸಿಗರನ್ನು ಹೊರಹಾಕಿ ಲಾಸ್‌ ಏಂಜಲೀಸ್ ಅನ್ನು ಸ್ವಚ್ಛ ಮಾಡುತ್ತೇವೆ” ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದರೂ, ಟ್ರಂಪ್ 1807ರ ದಂಗೆ ಕಾಯ್ದೆಯನ್ನು ಇನ್ನೂ ಜಾರಿಗೊಳಿಸಿಲ್ಲ. ಆದರೂ, ಅಶಾಂತಿ ಹರಡಿದರೆ ವ್ಯಾಪಕ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಸೂಚನೆಯನ್ನು ಅವರು ನೀಡಿದ್ದಾರೆ. “ನಮ್ಮ ದೇಶದಲ್ಲಿ ಧಂಗೆ ನಡೆಯಲು ಬಿಡುವುದಿಲ್ಲ. ಸೇನೆ ನಿಯೋಜಿಸುತ್ತೇವೆ” ಎಂದು ಮಾಧ್ಯಮಗಳಿಗೆ ಟ್ರಂಪ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಸೇನೆ ನಿಯೋಜನೆಯನ್ನು “ದೇಶದ ಸಾರ್ವಭೌಮತ್ವದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ. ಸೇನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಫೆಡರಲ್ ಅಧಿಕಾರಿಗಳನ್ನು ಅವರು ಒತ್ತಾಯಿಸಿದ್ದಾರೆ.

ಹಲವರ ಬಂಧನ

ಪ್ರತಿಭಟನಾ ನಿರತ ಹಲವರನ್ನು ಲಾಸ್ ಏಂಜಲೀಸ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. “ಲಾಸ್‌ ಏಂಜಲೀಸ್ ಡೌನ್‌ಟೌನ್‌ನ ಸಿವಿಕ್ ಸೆಂಟರ್‌ನಲ್ಲಿ ಕಾನೂನು ಬಾಹಿರ ಸಭೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಜನರು ಡೌನ್‌ಟೌನ್ ಸಿವಿಕ್ ಸೆಂಟರ್‌ನಿಂದ ದೂರ ಇರಿ” ಎಂದು ಭಾನುವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...