Homeಅಂತರಾಷ್ಟ್ರೀಯವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.

ನಗರದ ಮಧ್ಯಭಾಗದಲ್ಲಿ ಭಾನುವಾರ ನೂರಾರು ಪ್ರತಿಭಟನಾಕಾರರು ವಲಸಿಗರ ಶೋಧ ಕಾರ್ಯಾಚರಣೆಯಲ್ಲಿ ಬಂಧಿತರಾದವರನ್ನು ಬಂಧಿಸಿಟ್ಟಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಂಧನ ಕೇಂದ್ರದ ಬಳಿ ಬೀಡುಬಿಟ್ಟಿದ್ದ ಭದ್ರತಾ ಪಡೆಗಳ ವಿರುದ್ದ “ಶೇಮ್, ಶೇಮ್” “ವಾಪಸ್ ಹೋಗಿ” ಇತ್ಯಾದಿ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿರುವುದು ಮತ್ತು ಭದ್ರತಾ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವುದನ್ನು ನೋಡಬಹುದು.

“ಒಂದು ಕಾಲದಲ್ಲಿ ಅಮೆರಿಕದ ಶ್ರೇಷ್ಠ ನಗರವಾಗಿದ್ದ ಲಾಸ್ ಏಂಜಲೀಸ್ ಅನ್ನು ಅಕ್ರಮ ವಲಸಿಗರು ಮತ್ತು ಕ್ರಿಮಿನಲ್‌ಗಳು ಆಕ್ರಮಿಸಿಕೊಂಡಿದ್ದಾರೆ. ಈಗ ಹಿಂಸಾತ್ಮಕ, ದಂಗೆಕೋರ ಗುಂಪುಗಳು ನಮ್ಮ ಗಡಿಪಾರು ಕಾರ್ಯಾಚರಣೆಗಳನ್ನು ನಿಲ್ಲಿಸಲು ಫೆಡರಲ್ ಏಜೆಂಟ್‌ಗಳ ಮೇಲೆ ದಾಳಿ ಮಾಡುತ್ತಿವೆ. ಆದರೆ, ಈ ಕಾನೂನುಬಾಹಿರ ಗಲಭೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ. ಲಾಸ್ ಏಂಜಲೀಸ್ ಅನ್ನು ವಲಸಿಗರ ಆಕ್ರಮಣದಿಂದ ಮುಕ್ತಗೊಳಿಸಲು ಮತ್ತು ಈ ವಲಸಿಗರ ಗಲಭೆಗಳನ್ನು ಕೊನೆಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅಕ್ರಮ ವಲಸಿಗರನ್ನು ಹೊರಹಾಕಿ ಲಾಸ್‌ ಏಂಜಲೀಸ್ ಅನ್ನು ಸ್ವಚ್ಛ ಮಾಡುತ್ತೇವೆ” ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದರೂ, ಟ್ರಂಪ್ 1807ರ ದಂಗೆ ಕಾಯ್ದೆಯನ್ನು ಇನ್ನೂ ಜಾರಿಗೊಳಿಸಿಲ್ಲ. ಆದರೂ, ಅಶಾಂತಿ ಹರಡಿದರೆ ವ್ಯಾಪಕ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಸೂಚನೆಯನ್ನು ಅವರು ನೀಡಿದ್ದಾರೆ. “ನಮ್ಮ ದೇಶದಲ್ಲಿ ಧಂಗೆ ನಡೆಯಲು ಬಿಡುವುದಿಲ್ಲ. ಸೇನೆ ನಿಯೋಜಿಸುತ್ತೇವೆ” ಎಂದು ಮಾಧ್ಯಮಗಳಿಗೆ ಟ್ರಂಪ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಸೇನೆ ನಿಯೋಜನೆಯನ್ನು “ದೇಶದ ಸಾರ್ವಭೌಮತ್ವದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ. ಸೇನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಫೆಡರಲ್ ಅಧಿಕಾರಿಗಳನ್ನು ಅವರು ಒತ್ತಾಯಿಸಿದ್ದಾರೆ.

ಹಲವರ ಬಂಧನ

ಪ್ರತಿಭಟನಾ ನಿರತ ಹಲವರನ್ನು ಲಾಸ್ ಏಂಜಲೀಸ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. “ಲಾಸ್‌ ಏಂಜಲೀಸ್ ಡೌನ್‌ಟೌನ್‌ನ ಸಿವಿಕ್ ಸೆಂಟರ್‌ನಲ್ಲಿ ಕಾನೂನು ಬಾಹಿರ ಸಭೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಜನರು ಡೌನ್‌ಟೌನ್ ಸಿವಿಕ್ ಸೆಂಟರ್‌ನಿಂದ ದೂರ ಇರಿ” ಎಂದು ಭಾನುವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...