Homeಅಂತರಾಷ್ಟ್ರೀಯವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.

ನಗರದ ಮಧ್ಯಭಾಗದಲ್ಲಿ ಭಾನುವಾರ ನೂರಾರು ಪ್ರತಿಭಟನಾಕಾರರು ವಲಸಿಗರ ಶೋಧ ಕಾರ್ಯಾಚರಣೆಯಲ್ಲಿ ಬಂಧಿತರಾದವರನ್ನು ಬಂಧಿಸಿಟ್ಟಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಂಧನ ಕೇಂದ್ರದ ಬಳಿ ಬೀಡುಬಿಟ್ಟಿದ್ದ ಭದ್ರತಾ ಪಡೆಗಳ ವಿರುದ್ದ “ಶೇಮ್, ಶೇಮ್” “ವಾಪಸ್ ಹೋಗಿ” ಇತ್ಯಾದಿ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿರುವುದು ಮತ್ತು ಭದ್ರತಾ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವುದನ್ನು ನೋಡಬಹುದು.

“ಒಂದು ಕಾಲದಲ್ಲಿ ಅಮೆರಿಕದ ಶ್ರೇಷ್ಠ ನಗರವಾಗಿದ್ದ ಲಾಸ್ ಏಂಜಲೀಸ್ ಅನ್ನು ಅಕ್ರಮ ವಲಸಿಗರು ಮತ್ತು ಕ್ರಿಮಿನಲ್‌ಗಳು ಆಕ್ರಮಿಸಿಕೊಂಡಿದ್ದಾರೆ. ಈಗ ಹಿಂಸಾತ್ಮಕ, ದಂಗೆಕೋರ ಗುಂಪುಗಳು ನಮ್ಮ ಗಡಿಪಾರು ಕಾರ್ಯಾಚರಣೆಗಳನ್ನು ನಿಲ್ಲಿಸಲು ಫೆಡರಲ್ ಏಜೆಂಟ್‌ಗಳ ಮೇಲೆ ದಾಳಿ ಮಾಡುತ್ತಿವೆ. ಆದರೆ, ಈ ಕಾನೂನುಬಾಹಿರ ಗಲಭೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ. ಲಾಸ್ ಏಂಜಲೀಸ್ ಅನ್ನು ವಲಸಿಗರ ಆಕ್ರಮಣದಿಂದ ಮುಕ್ತಗೊಳಿಸಲು ಮತ್ತು ಈ ವಲಸಿಗರ ಗಲಭೆಗಳನ್ನು ಕೊನೆಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅಕ್ರಮ ವಲಸಿಗರನ್ನು ಹೊರಹಾಕಿ ಲಾಸ್‌ ಏಂಜಲೀಸ್ ಅನ್ನು ಸ್ವಚ್ಛ ಮಾಡುತ್ತೇವೆ” ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದರೂ, ಟ್ರಂಪ್ 1807ರ ದಂಗೆ ಕಾಯ್ದೆಯನ್ನು ಇನ್ನೂ ಜಾರಿಗೊಳಿಸಿಲ್ಲ. ಆದರೂ, ಅಶಾಂತಿ ಹರಡಿದರೆ ವ್ಯಾಪಕ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಸೂಚನೆಯನ್ನು ಅವರು ನೀಡಿದ್ದಾರೆ. “ನಮ್ಮ ದೇಶದಲ್ಲಿ ಧಂಗೆ ನಡೆಯಲು ಬಿಡುವುದಿಲ್ಲ. ಸೇನೆ ನಿಯೋಜಿಸುತ್ತೇವೆ” ಎಂದು ಮಾಧ್ಯಮಗಳಿಗೆ ಟ್ರಂಪ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಸೇನೆ ನಿಯೋಜನೆಯನ್ನು “ದೇಶದ ಸಾರ್ವಭೌಮತ್ವದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ. ಸೇನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಫೆಡರಲ್ ಅಧಿಕಾರಿಗಳನ್ನು ಅವರು ಒತ್ತಾಯಿಸಿದ್ದಾರೆ.

ಹಲವರ ಬಂಧನ

ಪ್ರತಿಭಟನಾ ನಿರತ ಹಲವರನ್ನು ಲಾಸ್ ಏಂಜಲೀಸ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. “ಲಾಸ್‌ ಏಂಜಲೀಸ್ ಡೌನ್‌ಟೌನ್‌ನ ಸಿವಿಕ್ ಸೆಂಟರ್‌ನಲ್ಲಿ ಕಾನೂನು ಬಾಹಿರ ಸಭೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಜನರು ಡೌನ್‌ಟೌನ್ ಸಿವಿಕ್ ಸೆಂಟರ್‌ನಿಂದ ದೂರ ಇರಿ” ಎಂದು ಭಾನುವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...