Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...