Homeಮುಖಪುಟಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

ಛತ್ತೀಸ್‌ಗಢ: ನಕ್ಸಲರ ಐಇಡಿ ಸ್ಫೋಟದಲ್ಲಿ ಎಎಸ್‌ಪಿ ಸಾವು, 4 ಜವಾನರಿಗೆ ತೀವ್ರ ಗಾಯ

- Advertisement -
- Advertisement -

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 4 ಭದ್ರತಾ ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

2013ರ ಬ್ಯಾಚ್‌ನ ರಾಜ್ಯ ಪೊಲೀಸ್ ಸೇವಾ ಅಧಿಕಾರಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರೆಪುಂಜೆ ಅವರು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಗೃಹ ಖಾತೆಯನ್ನೂ ಹೊಂದಿರುವ ರಾಜ್ಯದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ತಿಳಿಸಿದ್ದಾರೆ.

ಕೊಂಟಾ-ಎರ್ರಾಬೋರ್ ರಸ್ತೆಯ ಡೋಂಡ್ರಾ ಗ್ರಾಮದ ಬಳಿ ಘಟನೆ ಸಂಭವಿಸಿದಾಗ ಎಎಸ್‌ಪಿ ಮತ್ತು ಇತರ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಗಸ್ತು ತಿರುಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸುಕ್ಮಾದ ಎಎಸ್ಪಿ ಆಕಾಶ್ ರಾವ್ ಗಿರೆಪುಂಜೆ ಕೊಂಟಾ ಎರ್ರಾಬೋರ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು.  ಆಗ ಈ ಸ್ಪೋಟ ಸಂಭವಿಸಿದೆ. ಈ ಐಇಡಿ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜವಾನರು ಕೂಡ ಗಾಯಗೊಂಡಿದ್ದಾರೆ ಮತ್ತು ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕೊಂಟಾ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಎಎಸ್ಪಿ ಆಕಾಶ್ ರಾವ್ ಚಿಕಿತ್ಸೆಯ ಸಮಯದಲ್ಲಿ ನಿಧನರಾದರು. ಇತರ ಗಾಯಾಳುಗಳು  ಅಪಾಯದಿಂದ ಪಾರಾಗಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ .ಪಿ ಹೇಳಿದರು.

ಈ ಘಟನೆ ಸೋಮವಾರ ಬೆಳಿಗ್ಗೆ 9ರಿಂದ 10 ಗಂಟೆಯ ನಡುವೆ ನಡೆದಿದೆ ಎಂದು ಅವರು ಹೇಳಿದರು. ನಾಳೆ (ಮಂಗಳವಾರ) ನಕ್ಸಲರು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಎಎಸ್ಪಿ ಆಕಾಶ್ ರಾವ್ ಸ್ಫೋಟದಲ್ಲಿ ಹುತಾತ್ಮರಾಗಿದ್ದಾರೆ. ಅವರು ಧೈರ್ಯಶಾಲಿ ಅಧಿಕಾರಿಯಾಗಿದ್ದರು ಮತ್ತು ಶೌರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರು ಎಂದು ಉಪ ಮುಖ್ಯಮಂತ್ರಿ ಶರ್ಮಾ ನಾಗ್ಪುರದಲ್ಲಿ ತಿಳಿಸಿದರು.

ನಕ್ಸಲರು ಮತ್ತು ಸರ್ಕಾರದ ನಡುವೆ ಮಾತುಕತೆಗೆ ಪರಿಸ್ಥಿತಿ ಹೇಗೋ ಸೃಷ್ಟಿಯಾದರೆ, ಅದು ಇಂತಹ ಘಟನೆಗಳೊಂದಿಗೆ (ಸ್ಫೋಟವನ್ನು ಉಲ್ಲೇಖಿಸಿ) ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು.

ಒಂದೇ ಒಂದು ಗುಂಡನ್ನು ಹಾರಿಸಲು ಬಯಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಅವರು (ನಕ್ಸಲರು) ಮುಖ್ಯವಾಹಿನಿಗೆ ಬರಬೇಕು, ಪುನರ್ವಸತಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಮತ್ತು ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದರು.

2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಐಇಡಿ ಘಟನೆಗಳ ಪಟ್ಟಿ

• 30 ಮಾರ್ಚ್: ಬಿಜಾಪುರದಲ್ಲಿ ನಕ್ಸಲ್ ಎನ್‌ಕೌಂಟರ್‌ನ ಎರಡನೇ ದಿನದಂದು ಐಇಡಿ ಸ್ಫೋಟದಲ್ಲಿ ಮಹಿಳೆ ಸಾವನ್ನಪ್ಪಿದರು.

• 4 ಏಪ್ರಿಲ್: ನಾರಾಯಣಪುರದಲ್ಲಿ ನಕ್ಸಲರ ಐಇಡಿ ಸ್ಫೋಟಕ್ಕೆ ಒಬ್ಬ ಮೃತಪಟ್ಟು, ಒಬ್ಬ ಗಾಯಗೊಂಡಿದ್ದರು.

• 7 ಏಪ್ರಿಲ್: ಅಬುಜ್ಮದ್ ಕಾಡುಗಳಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ಗ್ರಾಮಸ್ಥರಿಗೆ ಗಾಯಗೊಂಡಿದ್ದರು.

• 9 ಏಪ್ರಿಲ್: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಜವಾನನು ಗೊಂಡಿದ್ದರು.

• 10 ಏಪ್ರಿಲ್: ಬಿಜಾಪುರದ ಅರಣ್ಯ ರಸ್ತೆಯಲ್ಲಿ ನಕ್ಸಲರು ಇರಿಸಿದ್ದ ಐಇಡಿಯನ್ನು ಯೋಧರು ನಿಷ್ಕ್ರಿಯಗೊಳಿಸಿದರು.

• 13 ಏಪ್ರಿಲ್: ಬಿಜಾಪುರದ ರಾಣಿಬೋಡ್ಲಿ ಕಟ್ಟೂರ್ ರಸ್ತೆಯಲ್ಲಿ 20 ಕೆಜಿ ಐಇಡಿ ನಿಷ್ಕ್ರಿಯಗೊಳಿಸಲಾಗಿದೆ.

• 14 ಏಪ್ರಿಲ್: ಯೋಧರು ಇರಿಸಿದ್ದ 5 ಐಇಡಿಗಳನ್ನು ನಾಶಪಡಿಸಿದ ನಕ್ಸಲರು.

• ಏಪ್ರಿಲ್ 18: ಬಿಜಾಪುರದ ಕೋಬ್ರಾ ಬೆಟಾಲಿಯನ್‌ನಲ್ಲಿ ಮಾವೋವಾದಿಯೊಬ್ಬನ ಬಂಧನ. ಆತ ಬಿಯರ್ ಬಾಟಲಿಗಳಲ್ಲಿ ತಯಾರಿಸಿದ 8 ಐಇಡಿಗಳ ವಶ.

• ಏಪ್ರಿಲ್ 21: ಬಿಜಾಪುರದಲ್ಲಿ ನಕ್ಸಲರು ಇರಿಸಿದ್ದ ಐಇಡಿ ಸ್ಫೋಟದಲ್ಲಿ ಸಿಎಎಫ್ ಜವಾನ್ ಸಾವು.

• ಏಪ್ರಿಲ್ 26: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಜವಾನನಿಗೆ ಗಾಯ

• ಮೇ 6: ಬಿಜಾಪುರದಲ್ಲಿ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಅಧಿಕಾರಿಗೆ ಗಾಯ.

• ಮೇ 19: ಗೌರ್ಮುಂಡ್ ಗ್ರಾಮದ ಕಾಡುಗಳಲ್ಲಿ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ದಿಂದ 5 ಕೆಜಿ ತೂಕದ ಎರಡು ಐಇಡಿಗಳ ನಾಶ.

• ಮೇ 30: ಬಿಜಾಪುರದ ಮದ್ದೀದ್ ರಾಷ್ಟ್ರೀಯ ಉದ್ಯಾನವನದಲ್ಲಿ ಐಇಡಿ ಸ್ಫೋಟದಲ್ಲಿ ಮೂವರು ಗ್ರಾಮಸ್ಥರಿಗೆ ಗಾಯ.

• ಮೇ 31: ಗುರ್ಮಕಾ ಮತ್ತು ಖೋಡ್‌ಪರ್ ಗ್ರಾಮದ ಅರಣ್ಯ ಮಾರ್ಗದಲ್ಲಿ ಭದ್ರತಾ ಪಡೆಗಳಿಂದ 10 ಐಇಡಿಗಳ ನಿಷ್ಕ್ರಿಯ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...