Homeಮುಖಪುಟಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಮಹಾರಾಷ್ಟ್ರ| ಕಿಕ್ಕಿರಿದ ರೈಲಿನಿಂದ ಬಿದ್ದು 6 ಪ್ರಯಾಣಿಕರು ಸಾವು, ಹಲವರಿಗೆ ಗಾಯ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದ ಲೋಕಲ್ ರೈಲಿನಿಂದ ಬಿದ್ದು ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ.

ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದ್ದು, ಕಿಕ್ಕಿರಿದ ರೈಲು ಕಸರಾ ಕಡೆಗೆ ಹೋಗುತ್ತಿತ್ತು ಎಂದು ವರದಿಯಾಗಿದೆ.

ಪೀಕ್ ಅವರ್‌ನಲ್ಲಿ ಭಾರೀ ಜನದಟ್ಟಣೆ ಇದ್ದುದರಿಂದ, ಅನೇಕ ಜನರು ರೈಲಿನ ಬಾಗಿಲುಗಳ ಬಳಿ ನಿಂತಿದ್ದರು. ರೈಲು ಚಲಿಸುತ್ತಿರುವಾಗ 10ಕ್ಕಿಂತ ಹೆಚ್ಚು ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಯಾಣಿಕರಲ್ಲಿ ಆರು ಮಂದಿ ಸಾವನ್ನಪ್ಪಿದರೆ, ಉಳಿದವರು ಗಾಯಗೊಂಡು ಹತ್ತಿರದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೃತರೆಲ್ಲರು 30 ರಿಂದ 35 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ.

ಇದು ರೈಲು ಡಿಕ್ಕಿಯಲ್ಲ. ಎರಡು ರೈಲುಗಳು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವಾಗ ಮೆಟ್ಟಿಲ ಬಳಿ ನಿಂತಿದ್ದ ಪ್ರಯಾಣಿಕರಿಗೆ ಪರಸ್ಪರ ತಾಗಿದೆ. ಪ್ರಯಾಣಿಕರೊಬ್ಬರು ಹೇಳಿದಂತೆ ಇದು ಘಟನೆಗೆ ಒಂದು ಶಂಕಿತ ಕಾರಣವಾಗಿದೆ. ಎರಡು ರೈಲುಗಳ ನಡುವಿನ ಅಂತರವು 1.5-2 ಮೀಟರ್. ಆದರೆ ತಿರುವುಗಳಲ್ಲಿ ಸ್ವಲ್ಪ ವಾಲುವಿಕೆ ಸಂಭವಿಸುತ್ತದೆ. ಇದು ಘಟನೆಗೆ ಮತ್ತೊಂದು ಕಾರಣವಾಗಿರಬಹುದು” ಎಂದು ಸೆಂಟ್ರಲ್ ರೈಲ್ವೆಯ ಸಿಪಿಆರ್‌ಒ ಸ್ವಪ್ನಿಲ್ ಧನರಾಜ್ ನಿಲಾ ಹೇಳಿದ್ದಾರೆ.

ಪ್ರಯಾಣಿಕರು ಕೈ ತಪ್ಪಿ ಕೆಳಗೆ ಬಿದ್ದಿದ್ದಾರೆಯೇ, ಬ್ಯಾಗ್‌ಗಳು ತಾಗಿ ಬಿದ್ದಿದ್ದಾರೆಯೇ ಅಥವಾ ಯಾರಾದರೂ ಅವರನ್ನು ತಳ್ಳಿದ್ದಾರೆಯೇ ಎಂಬುದನ್ನು ಕಂಡುಹಿಡಿಯುವ ಮೂಲಕ ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಬೇಕು ಎಂದು ಶಿವಸೇನಾ ಸಂಸದ ನರೇಶ್ ಮಾಸ್ಕೆ ಒತ್ತಾಯಿಸಿದ್ದಾರೆ.

ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ ರೈಲ್ವೆ ತನಿಖೆ ಆರಂಭಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಅದರ ರೈಲ್ವೆ ಇಲಾಖೆಯು ರೈಲು ಪ್ರಯಾಣಿಕರಿಗೆ ಮೂಲಭೂತ ಸೇವೆಗಳನ್ನು ನೀಡುವಲ್ಲಿ ವಿಫಲವಾಗಿದೆ ಎಂದು ಎನ್‌ಸಿಪಿ ಎಸ್‌ಪಿ ನಾಯಕಿ ವಿದ್ಯಾ ಚವಾಣ್ ಹೇಳಿದ್ದಾರೆ.

ರೈಲ್ವೆ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ರೈಲುಗಳ ಬಾಗಿಲುಗಳು ಸ್ವಯಂಚಾಲಿತವಾಗಿ ಮುಚ್ಚಲ್ಪಡುವಂತೆ ನೋಡಿಕೊಳ್ಳಬೇಕು ಇದರಿಂದ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬಹುದು ಎಂದಿದ್ದಾರೆ.

ಬಂಧಿತ 7 ಮಾವೋವಾದಿಗಳನ್ನು ದಿನಕ್ಕೊಬ್ಬರಂತೆ ಹತ್ಯೆ: ಮಾನವ ಹಕ್ಕುಗಳ ಸಂಘಟನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...