Homeಕರ್ನಾಟಕದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

ದಲಿತ ಚಳವಳಿಯಲ್ಲಿ ಬಿ.ಕೃಷ್ಣಪ್ಪ ನಮ್ಮ ಕೈಹಿಡಿದು ನಡೆಸಿದರು: ಮಾವಳ್ಳಿ ಶಂಕರ್

- Advertisement -
- Advertisement -

ಬಿ.ಕೃಷ್ಣಪ್ಪ ಅವರು ಹಾಡುತ್ತಿದ್ದ ಹೋರಾಟದ ಹಾಡುಗಳ ಮೂಲಕ ನಾವು ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪ ಅವರ 87 ವರ್ಷದ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ನಿಧನದ ಬಳಿಕ ದೇಶದ ದಲಿತ ಸಮುದಾಯಗಳಲ್ಲಿ ಸ್ಮಶಾನ ಮೌನ ಆವರಿಸಿತ್ತು. ಅದರ ನಂತರ ಮಹಾರಾಷ್ಟ್ರದಲ್ಲಿ 1972ರ ದಶಕದಲ್ಲಿ ‘ದಲಿತ್ ಪ್ಯಾಂಥರ್ಸ್‌’ ಆರಂಭವಾಗಿತ್ತು. ಅದು ವ್ಯಕ್ತಿಗತವಾಗಿದ್ದರಿಂದ ಕ್ರಮೇಣ ಅದರ ವೇಗ ಕ್ಷೀಣಿಸಿತು. ಆದರೆ, ಕರ್ನಾಟಕದಲ್ಲಿ ದಲಿತ ಚಳಚಳಿ ಎಲ್ಲರನ್ನು ಒಳಗೊಂಡಿತ್ತು, ಎಲ್ಲರನ್ನು ಪೊರೆಯುವ ತಾಯ್ತನ ದಲಿತ ಸಂಘರ್ಷ ಸಮಿತಿಗೆ ಇತ್ತು” ಎಂದರು.

“ದಸಂಸ ಎಲ್ಲ ಜಾತಿಯ ನೊಂದವರನ್ನು ತನ್ನ ಒಡಲೊಳಗೆ ಇಟ್ಟುಕೊಂಡಿತ್ತು, ಅಂತಹ ತಾಯ್ತನದಿಂದ ಎಲ್ಲರನ್ನೂ ಪೊರೆದ ದೊಡ್ಡ ಚಳವಳಿಯೇ ದಲಿತ ಸಂಘರ್ಷ ಸಮಿತಿ. ಬಿ.ಕೃಷ್ಣಪ್ಪ, ಸಿದ್ದಲಿಂಗಯ್ಯ, ದೇವನೂರ ಮಹಾದೇವ ಸೇರಿದಂತೆ ಅನೇಮಕ ಕವಿಗಳು, ಕಲಾವಿದರು, ಹಾಡುಗಾರರು ಈ ಚಳವಳಿಯನ್ನು ಮುನ್ನಡೆಸಿದರು. ಯಾರೂ ಕೂಡ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಯೋಚನೆ ಮಾಡಿದವರಲ್ಲ; ಅಂಬೇಡ್ಕರ್ ಚಿಂತನೆ ಹಡರುವುದು ಮಾತ್ರ ಅವರ ಗುರಿಯಾಗಿತ್ತು; ದಲಿತರ ಮೇಲೆಲಿನ ದೌರ್ಜನ್ಯ ತಡೆಯುವುದಾಗಿತ್ತು. ಆದರೆ, ದೌರ್ಜನ ಇಂದಿಗೂ ನಿಂತಿಲ್ಲ” ಎಂದು ಹೇಳಿದರು.

“ಕೃಷ್ಣಪ್ಪ ಅವರು ದಲಿತ ಚಳವಳಿಯಲ್ಲಿದ್ದಾಗ ಮಾವಳ್ಳಿ ಕೇಂದ್ರ ಸ್ಥಾನವಾಗಿತ್ತು. ಬಿಕೆ ಅವರ ಜೊತೆಗೆ ಸಿದ್ದಲಿಂಗಯ್ಯ, ದೇವನೂರು ಮಹಾದೇವ, ತ್ಯಾಗಿ ಸೇರಿದಂತೆ ಅನೇಕರು ಮಾವಳ್ಳಿಯ ಸತ್ಯಮ್ಮನ ಗುಡಿಯಲ್ಲಿ ಕೂರುತ್ತಿದ್ದರು. ಕೃಷ್ಣಪ್ಪ ಅವರು ಅದ್ಭುತವಾಗಿ ಹೋರಾಟದ ಹಾಡುಗಳನ್ನು ಹಾಡುತ್ತಿದ್ದರು. ಬಿಕೆ ಹಾಡುಗಳ ಮೂಲಕ ನಾವು ದಲಿತ ಚಳವಳಿಯ ಭಾಗವಾದವರು. ಅವರ ಕನಸು ಮತ್ತು ಚಿಂತನೆಗಳನ್ನು ನಾವು ಮೈಗೂಡಿಸಿಕೊಂಡೆವು. ಗದಗಿಗೆ (ಸಾವನ್ನಪ್ಪಿದ ಸ್ಥಳ) ಹೊರಡುವ ಹಿಂದಿನ ದಿನ ಅವರನ್ನು ನಾನು ಬೆಂಗಳೂರಿನಿಂದ ಬಸ್‌ ಹತ್ತಿಸಿದೆ. ದಲಿತ ಚಳವಳಿಯ ಆರಂಭದ ದಿನದಿಂದಲೂ ಅವರ ಕೊನೆಯ ದಿನದವರೆಗೆ ನಮ್ಮನ್ನು ಕೈಹಿಡಿದು ನಡೆಸಿದರು” ಎಂದರು.

“ತಮ್ಮ ಜೀವನವನ್ನು ದಲಿತ ಚಳವಳಿಗೆ ಮೀಸಲಿಟ್ಟಿದ್ದ ಅನೇಕ ಹೋರಾಟಗಾರರನ್ನು ಇಂದು ನಾವು ಕಳೆದುಕೊಂಡಿದ್ದೇವೆ. ನಮ್ಮ ಹಿರಿಯರನ್ನು ನಾವು ನೆನೆಪಿಸಿಕೊಳ್ಳುವ ಜೊತೆಗೆ ಅವರ ಚಿಂತನೆಯನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

“ಮೂರು ದಶಕಗಳ ಕಾಲ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಸಂಸ ನಿರಂತರವಾಗಿ ಮಾತನಾಡುತ್ತಿತ್ತು. ಇದರಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್‌ಇ) ಸೆಲ್ ಆರಂಭವಾಯಿತು. ನಮಗೆ ಅಧಿಕಾರ ಇಲ್ಲ, ನಮ್ಮಿಂದ ಎಫ್‌ಐಆರ್‌ ಹಾಕಲು ಸಾಧ್ಯವಿಲ್ಲ ಎಂದು ಎಂದು ಅಲ್ಲಿನ ಎಸ್‌ಪಿ-ಡಿಸಿಪಿಗಳು ಹೇಳುತ್ತಿದ್ದರು. ಅವರಿಗೆ ಅಧಿಕಾರ ಕೊಡಿ ಎಂದು ನಾವು ಹಲವು ಭಾರಿ ಒತ್ತಾಯಿಸಿದ್ದೇವೆ. ದಲಿತ ಚಳವಳಿ ಎತ್ತಿದ ಪ್ರಶ್ನೆಗೆ ಡಿಸಿಆರ್‌ಇ (ವಿಶೇಷ ಪೊಲೀಸ್ ಠಾಣೆ) ಸೆಲ್ ಆರಂಭಿಸುವ ಮೂಲಕ ಮಹದೇವಪ್ಪ ಇಂದು ಉತ್ತರಿಸಿದ್ದಾರೆ. ದಲಿತ ಸಮುದಾಯದ ರಕ್ಷಣೆಗೆ ದೇಶದಲ್ಲೇ ಅತ್ಯಂತ ವ್ಯವಸ್ಥಿತಿ ಪೊಲೀಸ್ ಠಾಣೆ ಅರಂಭಿಸಿರುವುದು ಕರ್ನಾಟಕ ಸರ್ಕಾರ ಮಾತ್ರ; 32 ಡಿಸಿಆರ್‌ಇ ಸೆಲ್ ಪೊಲೀಸ್ ಠಾಣೆಗಳನ್ನು ಸರ್ಕಾರ ಆರಂಭಿಸಿದೆ. ದಸಂಸದ ಬೇಡಿಕೆಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಈವರೆಗೆ ಯಾರಿಗೂ ಇರಲಿಲ್ಲ, ಅದನ್ನು ಜಾರಿಗೆ ತಂದ ಮಹದೇವಪ್ಪ ಅವರನ್ನು ನಾವು ಅಭಿನಂದಿಸಲೇಬೇಕು” ಎಂದು ಪ್ರಶಂಸಿದರು.

“ದಲಿತರಿಗೆ ಭೂಮಿ ಇದ್ದಿದ್ದರೆ ಅವರ ಮೇಲಿನ ದೌರ್ಜನ್ಯಗಳು ಕಡಿಮೆ ಆಗುತ್ತಿದ್ದವು; ಭೂಮಿ ಎಂಬುದು ಒಂದು ಸಾಧನವಾಗಿದೆ. ದಲಿತ ಚಳವಳಿ ಆರಂಭಿಸಿದ ಪಿಟಿಎಸ್‌ಎಲ್‌ ಮೂಲಕ ಒಂದಷ್ಟು ಭೂಮಿ ಸಿಕ್ಕಿದೆ. ಅದನ್ನೂ ಪ್ರಬಲ ಜಾತಿಗಳು ವಿರೋಧಿಸಿವೆ. ಪಿಟಿಸಿಎಲ್‌ ಕಾಯ್ದೆಯನ್ನು ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪ್ರಯತ್ನವಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ. ಲಕ್ಷಲಕ್ಷ ದರಕಾಸ್ತು ಭೂಮಿ ಅರ್ಜಿಗಳು ಕೊಳೆಯುತ್ತಾ ಬಿದ್ದಿವೆ. ಈ ಬಗ್ಗೆ ಯಾವ ಶಾಸಕರೂ ಮಂತ್ರಿಗಳು ಸಭೆ ನಡೆಸುತ್ತಿಲ್ಲ. ಅರಣ್ಯ ಇಲಾಖೆ ದಲಿತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಂಡು ಸಾಮಾಜಿಕ ಅರಣ್ಯ ಮಾಡುತ್ತಿವೆ. ಅದನ್ನು ಕೇಳಿದವರನ್ನು ಹಿಡಿದು ಜೈಲಿಗೆ ಹಾಕುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಚಳವಳಿಯನ್ನು ಹೊಸ ತಲೆಮಾರು ಒಗ್ಗೂಡಿಸಬೇಕು: ಪ್ರೊ. ನಟರಾಜ್ ಹುಳಿಯಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...