Homeಅಂತರಾಷ್ಟ್ರೀಯಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ, ಆದರೆ ಮೋದಿ ಮೌನ: ಕಾಂಗ್ರೆಸ್

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ, ಆದರೆ ಮೋದಿ ಮೌನ: ಕಾಂಗ್ರೆಸ್

- Advertisement -
- Advertisement -

ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರನ್ನು ಕೈಕೋಳ ಹಾಕಿ ನೆಲಕ್ಕೆ ಒತ್ತಿಹಿಡಿದು ದೌರ್ಜನ್ಯ ಮಾಡುತ್ತಿರುವ ವಿಡಿಯೋ ಬಹಿರಂಗವಾದ ನಂತರ ಕಾಂಗ್ರೆಸ್ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತಕ್ಷಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಬೇಕು ಎಂದು ಪಕ್ಷವು ಒತ್ತಾಯಿಸಿದೆ.

ಅಮೆರಿಕದ ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಕೈಕೋಳ ಹಾಕಿ ನೆಲಕ್ಕೆ ಒತ್ತಿಹಿಡಿದು ದೌರ್ಜನ್ಯ ಮಾಡಲಾಗಿದೆ ಎಂಬ ವಿಡಿಯೋ ಮತ್ತು ಚಿತ್ರಗಳನ್ನು ಕಾಂಗ್ರೆಸ್ ನಾಯಕರು ಹಂಚಿಕೊಂಡಿದ್ದಾರೆ.

ಭಾರತೀಯ ಯುವಕನನ್ನು ಕೈಕೋಳ ಹಾಕಿ ಗಡೀಪಾರು ಮಾಡಲಾಗುತ್ತಿದೆ ಎಂಬ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

“ನ್ಯೂವಾರ್ಕ್ ಲಿಬರ್ಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ನಮಗೆ ಬಂದಿವೆ. ಈ ನಿಟ್ಟಿನಲ್ಲಿ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಭಾರತೀಯ ಕಾನ್ಸುಲೇಟ್ ಎಕ್ಸ್‌ನಲ್ಲಿ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಸರ್ಕಾರವು ಭಾರತ ಮತ್ತು ಭಾರತೀಯರ ಗೌರವವನ್ನು ರಕ್ಷಿಸುವಲ್ಲಿ ನಿರಂತರವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿದೇಶಿ ರಾಷ್ಟ್ರದ ಮುಖ್ಯಸ್ಥರೊಬ್ಬರು ಭಾರತದ ಅನುಪಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಒತ್ತಡ ಹೇರುವ ಮೂಲಕ ಕದನ ವಿರಾಮವನ್ನು ಖಚಿತಪಡಿಸಿಕೊಂಡಿರುವುದಾಗಿ ನಿರಂತರವಾಗಿ ಹೇಳಿಕೊಳ್ಳುತ್ತಿದ್ದಾರೆ” ಎಂದು ರಮೇಶ್ ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಕಳೆದ ಒಂದು ವರ್ಷದಿಂದ, ಅಮೆರಿಕದಲ್ಲಿ ವಾಸಿಸುವ ಭಾರತೀಯ ನಾಗರಿಕರು ಮತ್ತು ವಿದ್ಯಾರ್ಥಿಗಳನ್ನು ಪದೇ ಪದೇ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ಮೌನವಾಗಿದ್ದಾರೆ ಅಥವಾ ಅವರು ಮಾತನಾಡುವ ಧೈರ್ಯವನ್ನು ಒಟ್ಟುಗೂಡಿಸಲು ಸಾಧ್ಯವಾಗುತ್ತಿಲ್ಲ ಎಂದು ಭಾವಿಸಬೇಕಿದೆ” ಎಂದು ರಮೇಶ್ ಹೇಳಿದ್ದಾರೆ.

ಅದಾಗ್ಯೂ, ಭಾರತ ಮತ್ತು ಭಾರತೀಯರ ಗೌರವವನ್ನು ರಕ್ಷಿಸುವುದು ಭಾರತದ ಪ್ರಧಾನಿಯು ಪ್ರಮುಖ ಜವಾಬ್ದಾರಿಯಾಗಿದೆ ಎಂದು ರಮೇಶ್ ಪ್ರತಿಪಾದಿಸಿದ್ದಾರೆ.

“ಪ್ರಧಾನಿ ಮೋದಿ ತಕ್ಷಣ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಬೇಕು ಮತ್ತು ಅಮೆರಿಕದಲ್ಲಿ ಭಾರತೀಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಮತ್ತು ತೊಂದರೆಗಳ ಬಗ್ಗೆ ಮಧ್ಯಪ್ರವೇಶಿಸಲು ಮನವಿ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್‌ನಲ್ಲಿ ಘಟನೆಯ ವೀಡಿಯೊವನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದು, ಅದನ್ನು ಭಾರತೀಯ-ಅಮೆರಿಕನ್ ಸಾಮಾಜಿಕ ಉದ್ಯಮಿ ಕುನಾಲ್ ಜೈನ್ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿವಾದಿತ ವೀಡಿಯೊದಲ್ಲಿ ಭಾರತೀಯ ಯುವಕನನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಪೊಲೀಸರು ನೆಲಕ್ಕೆ ಒತ್ತಿಹಿಡಿದು ಕೈಕೋಳ ಹಾಕಿರುವುದು ಕಾಣುತ್ತದೆ.

“ನಿನ್ನೆ ರಾತ್ರಿ ನ್ಯೂಯಾರ್ಕ್ ವಿಮಾನ ನಿಲ್ದಾಣದಿಂದ ಒಬ್ಬ ಯುವ ಭಾರತೀಯ ವಿದ್ಯಾರ್ಥಿಯನ್ನು ಕೈಕೋಳ ಹಾಕಿ, ಕೂಗಾಡುತ್ತಾ, ಅಪರಾಧಿಯಂತೆ ನಡೆಸಿಕೊಳ್ಳುವುದನ್ನು ನಾನು ನೋಡಿದೆ. ಆ ವಿದ್ಯಾರ್ಥಿ ತನ್ನ ಕನಸುಗಳನ್ನು ಬೆನ್ನಟ್ಟುತ್ತಾ ಬಂದವರು, ಅವರು ಯಾರಿಗೂ ಹಾನಿ ಮಾಡಲಿಲ್ಲ. ಒಬ್ಬ ಅನಿವಾಸಿ ಭಾರತೀಯನಾಗಿ, ನಾನು ಅಸಹಾಯಕನಾಗಿದ್ದು, ಹೃದಯ ಮುರಿದ ಭಾವನೆಯಿದೆ. ಇದು ಮಾನವ ದುರಂತ” ಎಂದು ಜೈನ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜೈನ್ ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ ಪವನ್ ಖೇರಾ, “ಇದು ತುಂಬಾ ನೋವಿನ ವಿಚಾರ, ಜೊತೆಗೆ ತುಂಬಾ ಅವಮಾನಕರ ಮತ್ತು ನೋಡಲು ತುಂಬಾ ದುಃಖಕರವಾಗಿದೆ. ಒಂದು ದೇಶವಾಗಿ, ನಾವು ಈ ಅವಮಾನವನ್ನು ಏಕೆ ಸಹಿಸಿಕೊಳ್ಳಬೇಕು?” ಎಂದು ಕೇಳಿದ್ದಾರೆ.

“ದೇವಯಾನಿ ಖೋಬ್ರಗಡೆ ವಿಷಯದ ಸಮಯದಲ್ಲಿ ನಾವು ಅಮೆರಿಕಕ್ಕೆ ನಮ್ಮ ಬಲವನ್ನು ತೋರಿಸಿದ ದಿನಗಳಿಂದ ಈಗ ನಮ್ಮ ನಾಗರಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳುವುದನ್ನು ನೋಡುವವರೆಗೆ ನಡೆಯುತ್ತಿದೆ. ಜಗತ್ತಿನಲ್ಲಿ ನಮ್ಮ ಬಗ್ಗೆ ಯಾವುದೇ ಸದ್ಭಾವನೆ ಉಳಿದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...