Homeಕರ್ನಾಟಕಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

- Advertisement -
- Advertisement -

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ತನ್ನ ಪ್ರತಿಕ್ರಿಯೆ ಅಥವಾ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು(ಜೂ.10) ಅವಕಾಶ ನೀಡಿದೆ.

ಜೂನ್ 4ರಂದು ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು ಮತ್ತು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಜೂನ್ 5ರಂದು ಹೈಕೋರ್ಟ್‌ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ವಿಚಾರಣೆಯನ್ನು ಇಂದಿಗೆ (ಜೂ.10) ಮುಂದೂಡಿತ್ತು.

ಇಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ಮುಂದುವರಿಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ (ಎಜಿ) ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ನಮ್ಮ ಪ್ರತಿಕ್ರಿಯೆ ಸಲ್ಲಿಸಲಾಗಿಲ್ಲ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿದ್ದು, ಒಂದು ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ಪೊಲೀಸ್‌ ಆಯುಕ್ತರು ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ, ಡಿಎನ್‌ಎ ಅಧಿಕಾರಿಗಳ ಜಾಮೀನು ಅರ್ಜಿಗಳು ಬಾಕಿ ಇದ್ದು, ಇಲ್ಲಿ ಹೇಳುವುದನ್ನು ಅವರು ಅಲ್ಲಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ” ಎಂದರು.

ಅದಕ್ಕೆ ಪೀಠವು “ನ್ಯಾಯಾಲಯದ ನಿರ್ದೇನಕ್ಕೆ ನೀವು ಪ್ರತಿಕ್ರಿಯೆ ಸಲ್ಲಿಸುವುದಿಲ್ಲ ಎಂದು ಹೇಳುತ್ತಿದ್ದೀರಾ?” ಎಂದಿತು. ಈ ವೇಳೆ ಎಜಿ ಅವರು “ದಯಮಾಡಿ ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು. ಕೆಲವು ವಿಚಾರಗಳಿವೆ ಸ್ವಾಮಿ” ಎಂದರು.

ಆಗ ಮತ್ತೆ ಪೀಠವು “ಸಮಸ್ಯೆ ಏನಿದೆ?” ಎಂದು ಮರು ಪ್ರಶ್ನಿಸಿತು. ಇದಕ್ಕೆ ಎಜಿ ಅವರು “ಮುಕ್ತ ನ್ಯಾಯಾಲಯದಲ್ಲಿ ಹೇಳುವುದರಿಂದ ಪೂರ್ವಾಗ್ರಹ ಉಂಟಾಗಲಿದೆ. ಸ್ವತಂತ್ರ ವಿಚಾರಣಾ ಆಯೋಗದಿಂದ ವರದಿ ಬರಲಿ. ನಾವು ಪಕ್ಷಪಾತಿಗಳಾಗಿದ್ದೇವೆ ಎನಿಸಬಾರದು. ಇದು ಒಂದು ತಿಂಗಳ ವಿಚಾರವಷ್ಟೆ” ಎಂದರು.

ಆಗ ಹೈಕೋರ್ಟ್‌ “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು. ಇದಕ್ಕೆ ಎಜಿ ಅವರು “ಕಳೆದ ವಿಚಾರಣೆಯಲ್ಲಿ ಪ್ರಕರಣವನ್ನು ಸಿಐಡಿಗೆ ನೀಡಲಾಗಿದೆ ಎಂದು ಹೇಳಿದ್ದೇನೆ. ಆ ದಿನವೇ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಇದನ್ನು ಆರೋಪಿಗಳು ಜಾಮೀನು ಅರ್ಜಿಯಲ್ಲಿ ಬಳಸಿಕೊಳ್ಳುತ್ತಾರೆ” ಎಂದರು. ಇದಕ್ಕೆ ಪೀಠವು “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು.

ಮುಂದಿನ ವಿಚಾರಣೆ ಜೂನ್ 12ಕ್ಕೆ ನಿಗದಿಯಾಗಿದೆ

Credit: livelaw.in

ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...