Homeಅಂತರಾಷ್ಟ್ರೀಯಗಾಝಾ - ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು

ಗಾಝಾ – ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿದ್ದ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಅನ್ನು ಇಸ್ರೇಲ್ ಅಂತಾರಾಷ್ಟ್ರೀಯ ಜಲ ಪ್ರದೇಶದಿಂದ ಅಪಹರಿಸಿತ್ತು. ಇದೀಗ ಹಡಗಿನಲ್ಲಿದ್ದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಮಂಗಳವಾರ ಅಲ್‌ಜಝೀರಾ ವರದಿ ಮಾಡಿದೆ. ಗಾಝಾ – ಮದ್ಲೀನ್

ಗ್ರೆಟಾ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಹೇಳಿದ ನಂತರ, ಅವರು ವಿಮಾನದಲ್ಲಿ ಇರುವ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಮದ್ಲೀನ್‌ ಹಡಗಿನಲ್ಲಿದ್ದ 12 ಜನರಲ್ಲಿ ಗ್ರೇಟಾ ಕೂಡ ಒಬ್ಬರು, ಪ್ಯಾಲೆಸ್ತೀನ್‌ನ ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ ಹಾಕಿದ್ದ ನೌಕಾ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸುವಾಗ ಅದರ ಸೇನೆ ಅವರನ್ನು ವಶಪಡಿಸಿಕೊಂಡಿತ್ತು.

ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಯುರೋಪಿಯನ್ ಪಾರ್ಲಿಮೆಂಟ್‌ನ ಫ್ರೆಂಚ್ ಸದಸ್ಯೆ ರಿಮಾ ಹಸನ್ ಮತ್ತು ಅಲ್ ಜಜೀರಾ ಪತ್ರಕರ್ತ ಒಮರ್ ಫಯಾದ್ ಸೇರಿದಂತೆ ಮದ್ಲೀನ್‌ನ 12 ಸಿಬ್ಬಂದಿಯನ್ನು ಇಸ್ರೇಲ್ ಬಂಧಿಸಿತ್ತು. ಇದರ ನಂತರ ಮದ್ಲೀನ್ ಹಡಗನ್ನು ಆಕ್ರಮಿತ ಪ್ಯಾಲೆಸ್ತೀನ್‌ನ ಅಶ್ಡೋಡ್ ಬಂದರಿಗೆ ಎಳೆದೊಯ್ಯಲಾಗಿತ್ತು ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಜಾದ ಮೇಲಿನ ಇಸ್ರೇಲ್‌ನ ಅಕ್ರಮ ದಿಗ್ಬಂಧನವನ್ನು ಮುರಿಯುವ ಗುರಿ ಕೂಡಾ ಹೊಂದಿದ್ದ ಈ ಹಡಗನ್ನು ವಸಾಹತುಗಾರ ಇಸ್ರೇಲಿ ಕಮಾಂಡೋಗಳು ಗಾಝಾ ತೀರದಿಂದ ಸುಮಾರು 100 ನಾಟಿಕಲ್ ಮೈಲುಗಳ (185 ಕಿಮೀ) ಅಂತರರಾಷ್ಟ್ರೀಯ ಜಲ ಪ್ರದೇಶದಿಂದ ವಶಪಡಿಸಿಕೊಂಳ್ಳಲಾಗಿತ್ತು. ಈ ವೇಳೆ ಹಡಗಿನಲ್ಲಿದ್ದ 11 ಹೋರಾಟಗಾರರು ಮತ್ತು ಪತ್ರಕರ್ತರನ್ನು ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಹೇಳಿಕೆ ನೀಡಿದ್ದ ಇಸ್ರೇಲಿ ವಿದೇಶಾಂಗ ಸಚಿವಾಲಯ, ಶೀಘ್ರದಲ್ಲೇ ಅವರನ್ನು ಗಡೀಪಾರು ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇದಕ್ಕೂ ಮೊದಲು ಫ್ರೀಡಂ ಪ್ಲೋಟಿಲ್ಲಾ ಒಕ್ಕೂಟವು, ಇಸ್ರೇಲ್ ಅಪಹರಿಸುವಾಗ ನಡೆದ ಘಟನೆಯ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ಈ ವಿಡಿಯೊದಲ್ಲಿ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ಯುರೋಪಿಯನ್ ಪಾರ್ಲಿಮೆಂಟ್‌ನ ಫ್ರೆಂಚ್ ಸದಸ್ಯೆ ರಿಮಾ ಹಸನ್ ಸೇರಿದಂತೆ ಇತರ ಹೋರಾಟಗಾರರು ಕೈಗಳನ್ನು ಮೇಲಕ್ಕೆತ್ತಿರುವ ದೃಶ್ಯಗಳು ಮತ್ತು ಇಸ್ರೇಲಿ ಪಡೆಗಳು ಹಡಗನ್ನು ಹತ್ತಿ ಅವರನ್ನು “ಅಪಹರಿಸಿದ” ದೃಶ್ಯವನ್ನು ತೋರಿಸಲಾಗಿದೆ.

ಹೋರಾಟಗಾರರನ್ನು ಪ್ರತಿನಿಧಿಸುವ ಪ್ಯಾಲೆಸ್ತೀನಿಯನ್ ಕಾನೂನು ಕೇಂದ್ರವಾದ ಅದಾಲಾ ಇದಕ್ಕೆ ಪ್ರತಿಕ್ರಿಯಿಸಿದ್ದು, ಗಡೀಪಾರು ಮಾಡುವ ಮೊದಲು ಅವರನ್ನು ಬಂಧನ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಜಲ ಪ್ರದೇಶದಲ್ಲಿದ್ದ ಹಡಗನ್ನು ಸ್ವಾಧೀನಪಡಿಸಿಕೊಳ್ಳಲು ಇಸ್ರೇಲ್‌ಗೆ “ಯಾವುದೇ ಕಾನೂನು ಅಧಿಕಾರ” ಇಲ್ಲ ಎಂದು ಅದು ಹೇಳಿದೆ. ಅವರು ಹೊರಟಿದ್ದು ಇಸ್ರೇಲ್‌ಗೆ ಅಲ್ಲ, ಬದಲಾಗಿ “ಪ್ಯಾಲೆಸ್ತೀನ್ ದೇಶದ ಪ್ರಾದೇಶಿಕ ಜಲಪ್ರದೇಶ”ಕ್ಕೆ ಹೋಗುತ್ತಿದ್ದ ಹಡಗು ಅದಾಗಿತ್ತು” ಎಂದು ಅದಾಲಾ ಹೇಳಿತ್ತು. 12 ನಿರಾಯುಧ ಹೋರಾಟಗಾರರ ಬಂಧನಗಳು ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಸೋಮವಾರ ಮುಂಜಾನೆ ಬಂಧಿಸಲ್ಪಟ್ಟಾಗಿನಿಂದ ಹೋರಾಟಗಾರರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು FFC ಸಂಘಟಕರಾದ ಹುವೈದಾ ಅರಾಫ್ ಅಲ್ ಜಝೀರಾಗೆ ತಿಳಿಸಿದ್ದಾರೆ. “ಇಂದು ರಾತ್ರಿ – ಸಾಧ್ಯವಾದಷ್ಟು ಬೇಗ ಅವರನ್ನು ಸಂಪರ್ಕಿಸಲು ಒತ್ತಾಯಿಸಲು ನಾವು ವಕೀಲರನ್ನು ಸಿದ್ಧಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಮದ್ಲೀನ್ ಯುನೈಟೆಡ್ ಕಿಂಗ್‌ಡಮ್ ಧ್ವಜದ ಅಡಿಯಲ್ಲಿ ನೌಕಾಯಾನ ಮಾಡುತ್ತಿದ್ದಾಗ, ಇಸ್ರೇಲಿ ಕಮಾಂಡೋಗಳು ಅದನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಇಸ್ರೇಲ್ ಸೇನೆ ಅಂತರರಾಷ್ಟ್ರೀಯ ಜಲ ಪ್ರದೇಶಕ್ಕೆ ಹೋಗಿ ಸಾರ್ವಭೌಮ ಯುಕೆ ಹಡಗನ್ನು ಆಕ್ರಮಿಸಿತು. ಇದು ಸ್ಪಷ್ಟವಾಗಿ ಕಾನೂನುಬಾಹಿರವಾಗಿದೆ. ಯುನೈಟೆಡ್ ಕಿಂಗ್‌ಡಮ್‌ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಅವರಿಂದ ನಾವು ಖಂಡನೆಯನ್ನು ನಾವು ನಿರೀಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಹತ್ಯಾಕಾಂಡದಲ್ಲಿ ಕನಿಷ್ಠ 54,927 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 126,615 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023 ರಂದು ಹಮಾಸ್ ನೇತೃತ್ವದ ದಾಳಿಯ ಸಮಯದಲ್ಲಿ ಇಸ್ರೇಲ್‌ನಲ್ಲಿ ಅಂದಾಜು 1,139 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರನ್ನು ಸೆರೆಹಿಡಿಯಲಾಗಿದೆ.

ಈ ನಡುವೆ, ಗಾಝಾದ ದಕ್ಷಿಣ ರಫಾದಲ್ಲಿರುವ ಅಮೆರಿಕ ಬೆಂಬಲಿತ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (GHF) ನೆರವು ಕೇಂದ್ರದ ಬಳಿ ಕನಿಷ್ಠ 14 ಜನರು ಸೇರಿದಂತೆ ಗಾಝಾದಲ್ಲಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಸೋಮವಾರ ಇಸ್ರೇಲ್ ಪಡೆಗಳು ಕೊಂದಿವೆ ಎಂದು ವರದಿಯಾಗಿವೆ.

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಇಟಲಿಯ ಸಿಸಿಲಿಯಿಂದ ಜೂನ್ 1ರ ಭಾನುವಾರ ಹೊರಟಿತ್ತು.  ಹಡಗಿನಲ್ಲಿ ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದರು.

ಹಡಗಿನಲ್ಲಿ ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳು ಇದ್ದವು. ಜೊತೆಗೆ ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ಎರಡು ದಶಕಗಳ ನೌಕಾ ದಿಗ್ಬಂಧನವನ್ನು ಮುರಿಯುವ ಉದ್ದೇಶ ಕೂಡಾ ಹೊಂದಿತ್ತು. ಹಡಗನ್ನು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಗಾಝಾಗೆ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಆಯೋಜಿಸಿತ್ತು.

ಈ ಹಿಂದೆ ಕೂಡಾ ಫ್ರೀಡಂ ಫ್ರೋಟಿಲ್ಲಾ ಒಕ್ಕೂಟದ ನೆರವಿನೊಂದಿಗೆ ಹೊರಟಿದ್ದ ಹಡಗಿನ ಮೇಲೆ ಮೆಡಿಟರೇನಿಯನ್‌ ಸಮುದ್ರದಲ್ಲಿ ಡ್ರೋನ್ ದಾಳಿಗಳಾಗಿದ್ದವು. ಹಾಗಾಗಿ, ಈ ಬಾರಿ ಟ್ರ್ಯಾಕರ್‌ನೊಂದಿಗೆ ತನ್ನ ‘ಮದ್ಲೀನ್’ ಹಡಗನ್ನು ಕಳುಹಿಸಿತ್ತು.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿತ್ತು.

ಗಾಝಾ ಪ್ರದೇಶದ ಸುಮಾರು 20 ಲಕ್ಷ ನಿವಾಸಿಗಳು ಹಸಿವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಸಹ ಸಂಸ್ಥೆಗಳು ಮತ್ತು ಪ್ರಮುಖ ಮಾನವೀಯ ಸಂಸ್ಥೆಗಳು ಗಾಝಾದಲ್ಲಿನ ಭೀಕರ ಪರಿಸ್ಥಿತಿಗಳನ್ನು ವರದಿ ಮಾಡುತ್ತಲೇ ಇವೆ. ವಸಾಹತುಗಾರ ಇಸ್ರೇಲಿ ನಿರ್ಬಂಧಗಳು, ನಾಗರಿಕ ಸುವ್ಯವಸ್ಥೆಯಲ್ಲಿನ ಕುಸಿತ ಮತ್ತು ವ್ಯಾಪಕ ಲೂಟಿಯು ನೆರವು ವಿತರಣೆಗೆ ಪ್ರಾಥಮಿಕ ಅಡೆತಡೆಗಳಾಗಿ ಅವರು ಉಲ್ಲೇಖಿಸಿದ್ದಾರೆ.ಗಾಝಾ – ಮದ್ಲೀನ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (ಬಿಜೆಪಿ) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...