Homeಮುಖಪುಟಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

- Advertisement -
- Advertisement -

ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಕುಂಭ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ರಾಜ್ಯ ಸರ್ಕಾರ ಒದಗಿಸಿದ ಅಧಿಕೃತ ಅಂಕಿ ಅಂಶಕ್ಕಿಂತ ವಾಸ್ತವದಲ್ಲಿ ತೀವ್ರವಾಗಿ ಹೆಚ್ಚಾಗಿದೆ ಎಂದು ಬಿಬಿಸಿ ನ್ಯೂಸ್ ಹಿಂದಿ ನಡೆಸಿದ ತನಿಖಾ ವರದಿಯಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರ 37 ಸಾವುಗಳನ್ನು ವರದಿ ಮಾಡಿದ್ದರೂ, ಬಿಬಿಸಿಯ ತನಿಖೆಯ ವೇಳೆ ಕನಿಷ್ಠ 82 ಸಾವುಗಳನ್ನು ದೃಢಪಡಿಸಿದೆ. ಕುಂಭಮೇಳ ಕಾಲ್ತುಳಿತದಲ್ಲಿ

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಪ್ರೀತಿಪಾತ್ರರನ್ನು ಕಳೆದುಕೊಂಡ ಕೆಲವು ಕುಟುಂಬಗಳಿಗೆ ಸುಮಾರು 5 ಲಕ್ಷಗಳ ನಗದು ಪರಿಹಾರವನ್ನು ನೀಡಲಾಯಿತಾದರೂ, ಅಧಿಕೃತ ಸಾವಿನ ಸಂಖ್ಯೆಯಿಂದ ಅವರನ್ನು ಹೊರಗಿಡಲಾಗಿದೆ ಎಂದು ತನಿಖಾ ವರದಿ ಹೇಳಿದೆ. ರಾಜ್ಯ ಸರ್ಕಾರ ಎಣಿಕೆಯಿಂದ ಕೈಬಿಟ್ಟ ಅಂತಹ 26 ಕುಟುಂಬಗಳನ್ನು ಬಿಬಿಸಿ ಗುರುತಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಬಿಬಿಸಿ ವರದಿಗಳ ಹಿನ್ನಲೆ ಕಾಂಗ್ರೆಸ್ ಪಕ್ಷ ಸೇರಿದಂತೆ ವಿರೋಧ ಪಕ್ಷವು ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ನೀಡಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದುರಂತದ ನಿಜವಾದ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಟ್ವಿಟರ್‌ನಲ್ಲಿ ಆರೋಪಿಸಿದೆ.

“ಕುಂಭ ಮೇಳದಲ್ಲಿ 37 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ, ಬಿಬಿಸಿ ತನಿಖೆಯು 82 ಜನರ ಸಾವನ್ನು ದೃಢಪಡಿಸಿದೆ” ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಸರ್ಕಾರವು ಸಾವುನೋವುಗಳನ್ನು ಪರಿಹರಿಸುವುದಕ್ಕಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಯಾಕೆ ಕಾಳಜಿ ವಹಿಸುತ್ತಿದೆ ಎಂದು ಪಕ್ಷವು ಪ್ರಶ್ನಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದು, ರಾಜ್ಯ ಸರ್ಕಾರದ ಸಾವಿನ ಸಂಖ್ಯೆ ವರದಿಯನ್ನು “ದಾರಿತಪ್ಪಿಸುವ” ವರದಿ ಎಂದು ಕರೆದಿದ್ದಾರೆ. ಬಿಜೆಪಿ ನಾಯಕತ್ವದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ ಅವರ, “ಫ್ಯಾಕ್ಟ್‌ vs ಟ್ರುತ್;  37 vs 82. ಎಲ್ಲರೂ ಸತ್ಯವನ್ನು ವೀಕ್ಷಿಸಬೇಕು, ಕೇಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ಸಾವುಗಳನ್ನು ಮರೆಮಾಡಲು ಸುಳ್ಳು ಹೇಳುವವರನ್ನು ನಂಬಲು ಸಾಧ್ಯವಿಲ್ಲ, ಅವರ ಬೆಂಬಲಿಗರನ್ನೂ ನಂಬಬಾರದು” ಎಂದು ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ಟೀಕಿಸಿದ್ದಾರೆ. ಕುಂಭಮೇಳ ಕಾಲ್ತುಳಿತದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...