Homeಮುಖಪುಟಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

- Advertisement -
- Advertisement -

ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಕುಂಭ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ರಾಜ್ಯ ಸರ್ಕಾರ ಒದಗಿಸಿದ ಅಧಿಕೃತ ಅಂಕಿ ಅಂಶಕ್ಕಿಂತ ವಾಸ್ತವದಲ್ಲಿ ತೀವ್ರವಾಗಿ ಹೆಚ್ಚಾಗಿದೆ ಎಂದು ಬಿಬಿಸಿ ನ್ಯೂಸ್ ಹಿಂದಿ ನಡೆಸಿದ ತನಿಖಾ ವರದಿಯಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರ 37 ಸಾವುಗಳನ್ನು ವರದಿ ಮಾಡಿದ್ದರೂ, ಬಿಬಿಸಿಯ ತನಿಖೆಯ ವೇಳೆ ಕನಿಷ್ಠ 82 ಸಾವುಗಳನ್ನು ದೃಢಪಡಿಸಿದೆ. ಕುಂಭಮೇಳ ಕಾಲ್ತುಳಿತದಲ್ಲಿ

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಪ್ರೀತಿಪಾತ್ರರನ್ನು ಕಳೆದುಕೊಂಡ ಕೆಲವು ಕುಟುಂಬಗಳಿಗೆ ಸುಮಾರು 5 ಲಕ್ಷಗಳ ನಗದು ಪರಿಹಾರವನ್ನು ನೀಡಲಾಯಿತಾದರೂ, ಅಧಿಕೃತ ಸಾವಿನ ಸಂಖ್ಯೆಯಿಂದ ಅವರನ್ನು ಹೊರಗಿಡಲಾಗಿದೆ ಎಂದು ತನಿಖಾ ವರದಿ ಹೇಳಿದೆ. ರಾಜ್ಯ ಸರ್ಕಾರ ಎಣಿಕೆಯಿಂದ ಕೈಬಿಟ್ಟ ಅಂತಹ 26 ಕುಟುಂಬಗಳನ್ನು ಬಿಬಿಸಿ ಗುರುತಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಬಿಬಿಸಿ ವರದಿಗಳ ಹಿನ್ನಲೆ ಕಾಂಗ್ರೆಸ್ ಪಕ್ಷ ಸೇರಿದಂತೆ ವಿರೋಧ ಪಕ್ಷವು ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ನೀಡಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದುರಂತದ ನಿಜವಾದ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಟ್ವಿಟರ್‌ನಲ್ಲಿ ಆರೋಪಿಸಿದೆ.

“ಕುಂಭ ಮೇಳದಲ್ಲಿ 37 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ, ಬಿಬಿಸಿ ತನಿಖೆಯು 82 ಜನರ ಸಾವನ್ನು ದೃಢಪಡಿಸಿದೆ” ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಸರ್ಕಾರವು ಸಾವುನೋವುಗಳನ್ನು ಪರಿಹರಿಸುವುದಕ್ಕಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಯಾಕೆ ಕಾಳಜಿ ವಹಿಸುತ್ತಿದೆ ಎಂದು ಪಕ್ಷವು ಪ್ರಶ್ನಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದು, ರಾಜ್ಯ ಸರ್ಕಾರದ ಸಾವಿನ ಸಂಖ್ಯೆ ವರದಿಯನ್ನು “ದಾರಿತಪ್ಪಿಸುವ” ವರದಿ ಎಂದು ಕರೆದಿದ್ದಾರೆ. ಬಿಜೆಪಿ ನಾಯಕತ್ವದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ ಅವರ, “ಫ್ಯಾಕ್ಟ್‌ vs ಟ್ರುತ್;  37 vs 82. ಎಲ್ಲರೂ ಸತ್ಯವನ್ನು ವೀಕ್ಷಿಸಬೇಕು, ಕೇಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ಸಾವುಗಳನ್ನು ಮರೆಮಾಡಲು ಸುಳ್ಳು ಹೇಳುವವರನ್ನು ನಂಬಲು ಸಾಧ್ಯವಿಲ್ಲ, ಅವರ ಬೆಂಬಲಿಗರನ್ನೂ ನಂಬಬಾರದು” ಎಂದು ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ಟೀಕಿಸಿದ್ದಾರೆ. ಕುಂಭಮೇಳ ಕಾಲ್ತುಳಿತದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...