Homeಮುಖಪುಟಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

- Advertisement -
- Advertisement -

ಜನವರಿ 29 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ ಯಾತ್ರಾ ಸ್ಥಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಸಂಖ್ಯೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮರೆಮಾಚಿದೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಆರೋಪಿಸಿದ್ದಾರೆ. ಕಾಲ್ತುಳಿತದಲ್ಲಿ 82 ಜನರು ಸಾವನ್ನಪ್ಪಿದ್ದು, ಆದರೆ ರಾಜ್ಯ ಸರ್ಕಾರ 37 ಜನರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳಿದೆ ಎಂದು ಬಿಬಿಸಿ ಹಿಂದಿ ಮಾಡಿದ್ದ ತನಿಖಾ ವರದಿ ಹೇಳಿದೆ. ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಬಿಬಿಸಿ ಹಿಂದಿ ವರದಿಯು ಕಾಲ್ತುತದಲ್ಲಿ ಸಾವನ್ನಪ್ಪಿದವರನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿದೆ. ಮೊದಲನೆಯದು ಅಧಿಕೃತ ಸಂಖ್ಯೆಯಲ್ಲಿ ಸೇರಿದ ಮತ್ತು ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ದೊರೆತಿದೆ. ಎರಡನೇ ಗುಂಪಿನಲ್ಲಿ ಅಧಿಕೃತ ಸಂಖ್ಯೆಯಲ್ಲಿ ಎಣಿಕೆಯಾಗಿಲ್ಲ, ಆದರೆ ಅವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ದೊರೆತಿದೆ ಎಂದು ವರದಿ ಹೇಳಿದೆ.

ಮೂರನೇ ಗುಂಪಿನಲ್ಲಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಅಧಿಕೃತ ಸಂಖ್ಯೆಯಲ್ಲೂ ದಾಖಲಾಗಿಲ್ಲ, ಜೊತೆಗೆ ಅವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರವನ್ನೂ ನೀಡಿಲ್ಲ ಎಂದು ಬಿಬಿಸಿ ವರದಿ ತಿಳಿಸಿದೆ. ಕಾಲ್ತುಳಿತದ ನಿಜವಾದ ಸಂಖ್ಯೆ ತೀವ್ರವಾಗಿ ಹೆಚ್ಚಿರಬಹುದು ಎಂದು ಮಾಧ್ಯಮ ವರದಿಗಳು ಈ ಹಿಂದೆಯೂ ತಿಳಿಸಿತ್ತು.

ಬಿಬಿಸಿ ವರದಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, “ಯಾವುದೇ ಮಾಹಿತಿ ನಿರ್ವಹಣೆಯು ಸತ್ಯ ಹೊರಬರುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಸುಳ್ಳು ಅಂಕಿಅಂಶಗಳನ್ನು” ಒದಗಿಸುವವರನ್ನು ಸಾರ್ವಜನಿಕ ನಂಬಿಕೆಗೆ ಅರ್ಹರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಹೇಳಿದ್ದಾರೆ.

“ಸಮಸ್ಯೆ, ಅಂಕಿಅಂಶಗಳನ್ನು ಮರೆಮಾಡುವುದರ ಬಗ್ಗೆ ಮಾತ್ರವಲ್ಲ, ಸದನದಲ್ಲಿ ಸುಳ್ಳು ಹೇಳುವುದು ಕೂಡಾ ಸಮಸ್ಯೆಯಾಗಿದೆ” ಎಂದು ಅಖೀಲೇಶ್ ಅವರು ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ”30 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಫೆಬ್ರವರಿ 19 ರಂದು ರಾಜ್ಯದ ವಿಧಾನಸಭೆಯಲ್ಲಿ ಹೇಳಿದ್ದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯ ಬಗ್ಗೆಯೂ ಅಖಿಲೇಶ್ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಪರಿಹಾರವನ್ನು ನಗದು ರೂಪದಲ್ಲಿ ಏಕೆ ನೀಡಲಾಯಿತು?. ನಗದಿನ ಮೂಲ ಯಾವುದು? ವಿತರಿಸದ ನಗದು ಎಲ್ಲಿಗೆ ಹೋಯಿತು? ಯಾವ ನಿಯಮದ ಅಡಿಯಲ್ಲಿ ನಗದು ವಿತರಣೆಯನ್ನು ಅನುಮೋದಿಸಲಾಗಿದೆ? ನಗದು ಪಾವತಿಗಳಿಗೆ ಯಾರು ಅಧಿಕಾರ ನೀಡಿದರು? ವಿತರಣೆಯನ್ನು ಬೆಂಬಲಿಸುವ ಯಾವುದೇ ಲಿಖಿತ ಆದೇಶವಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಕೂಡ ಬಿಬಿಸಿಯ ವರದಿಯನ್ನು ಹಂಚಿಕೊಂಡಿದ್ದು, ಬಿಜೆಪಿ ಸರ್ಕಾರವು “ಮೃತ ದೇಹಗಳ ಮೇಲೆ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದೆ. “ಅವರು ತಮ್ಮ ಇಮೇಜ್ ಅನ್ನು ರಕ್ಷಿಸಿಕೊಳ್ಳಲು ಮತ್ತು ತಮ್ಮ ಕ್ರಿಮಿನಲ್ ನಿರ್ಲಕ್ಷ್ಯವನ್ನು ಮುಚ್ಚಿಕೊಳ್ಳಲು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಚಿದ್ದಾರೆ” ಎಂದು ಪಕ್ಷವು ಎಕ್ಸ್‌ನಲ್ಲಿ ತಿಳಿಸಿದೆ.

ಬಿಜೆಪಿ ಜನರ ಸಾವಿನಿಗಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಕಾಂಗ್ರೆಸ್ ಕೇಳಿದೆ. “ಈ ಬಿಬಿಸಿ ವರದಿಯು ಸರ್ಕಾರದ ಅಸಂವೇದನಾಶೀಲತೆಯನ್ನು ತೋರಿಸುತ್ತದೆ. ಸರ್ಕಾರ ಜನರ ಜೀವಗಳನ್ನು ಪಣಕ್ಕಿಟ್ಟು, ತನ್ನ ಟೊಳ್ಳಾದ ಇಮೇಜ್ ಅನ್ನು ಉಳಿಸಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್  ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...