Homeಕರ್ನಾಟಕಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

- Advertisement -
- Advertisement -

ಹಾವೇರಿ: ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಜೂ.7ರಂದು (ಶನಿವಾರ) ನಗರದ ಬಾರ್​ನಲ್ಲಿದ್ದ ಪೌರಕಾರ್ಮಿಕ ರಾಜು ದೊಡ್ಡಮನಿ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಬ್ಯಾಟ್ ಹಿಡಿದು ಬಂದ ಗುಂಪು ರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಿತ್ತು. ತೀವ್ರ ಗಾಯಗೊಂಡಿರುವ ರಾಜು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಗೆ ಮಂಗಳಮುಖಿ ಅಕ್ಷತಾ ಕಾರಣ ಎಂದು ಪೌರಕಾರ್ಮಿಕರು ಅಕ್ಷತಾ ಮತ್ತು ಆಕೆಯ 9 ಬೆಂಬಲಿಗರ ಮೇಲೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಕೂಡ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ. ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅಕ್ಷತಾ ಅವರ ಆಪ್ತ ಮಹಮ್ಮದ್ ಅವರು,  ಅಕ್ಷತಾ ಅವರು ಸಾಮಾಜಿಕ ಕಾರ್ಯಕ್ರಗಳಲ್ಲಿ ತೊಡಗಿಸಿಕೊಂಡವರು. ಹಿಂದುಳಿತ, ಶೋಷಿತ ಜನರಿಗಾಗಿ ಕೆಲಸ ಮಾಡುವವರು. ಯುವಕರನ್ನು ಒಗ್ಗೂಡಿಸಿ ಉತ್ತಮ ಕಾರ್ಯಕ್ರಮಗಳಲ್ಲಿ ತೊಡುಗುವಂತೆ ಮಾಡಿದ್ದಾರೆ. ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸುವವರು ಅಲ್ಲ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ವಿವರಿಸಿದ ಅವರು, ಶಾಂತು ಎಂಬ ಯುವಕನ ಜನ್ಮದಿನದ ಪ್ರಯುಕ್ತ ಬ್ಯಾನರ್ ಹಾಕಿದ್ದರು. ಅದನ್ನು ನಗರಸಭೆಯವರು ತೆರವು ಮಾಡಿದ್ದರು. ಈ ವೇಳೆ ಅಲ್ಲೆ ಇದ್ದ ಶಾಂತು ಪೌರ ಕಾರ್ಮಿಕರ ಜೊತೆ ವಾಗ್ವಾದ ನಡೆಸಿದ್ದರು. ಶಾಂತು ಅಕ್ಷತಾ ಅವರ ಜೊತೆ ಗುರುತಿಸಿಕೊಂಡಿದ್ದರಿಂದ ಬ್ಯಾನರ್ ತೆರವುಗೊಳಿಸಿದ ವಿಷಯವನ್ನು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಆತನಿಗೆ ಬುದ್ದಿಮಾತು ಹೇಳಿ, ನಗರಸಭೆಗೆ ತೆರಳಿ ಪೌರಾಯುಕ್ತರನ್ನು ಭೇಟಿಯಾಗಿದ್ದರು. ಅಲ್ಲಿ ಯುವಕರ ಬ್ಯಾನರ್ ವಾಪಸ್ ಕೊಡಿ, ಅವರು ಪರವಾನಿಗೆ ತೆಗೆದುಕೊಂಡು ಹಾಕುತ್ತಾರೆ ಎಂದು ಹೇಳಿ ಬಂದಿದ್ದರು. ಅಲ್ಲಿಗೆ ಒಂದು ಹಂತಕ್ಕೆ ವಿಷಯ ಮುಗಿದಿತ್ತು ಎಂದು ಮಹಮ್ಮದ್ ತಿಳಿಸಿದ್ದಾರೆ.

ಇದಾದ ಬಳಿಕ ಕೆಲ ಸಂಘಟನೆಗಳ ಮುಖಂಡರು ಮತ್ತು ಪೌರ ಕಾರ್ಮಿಕರು ನಗರಸಭೆ ಬಳಿ ಜಮಾಯಿಸಿ ಶಾಂತು ಜೊತೆ ವಾಗ್ವಾದ ನಡೆಸಿದ್ದಾರೆ. ಅಕ್ಷತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಷಯವನ್ನು ಯುವಕರು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಸ್ಥಳಕ್ಕೆ ತೆರಳಿದಾಗ ಮತ್ತೆ ವಾಗ್ವಾದ ಜೋರಾಗಿದೆ. ಡಿಎಸ್‌ಎಸ್ ಮುಖಂಡ ಹೊನ್ನಪ್ಪ ಅವರ ನೇತೃತ್ವದಲ್ಲಿ ಸೇರಿದ್ದ ಮುಖಂಡರು ಮತ್ತು ಪೌರ ಕಾರ್ಮಿಕರು ಅಕ್ಷತಾಗೆ ನಿಂದಿಸಿದ್ದಾರೆ. ಗುಂಪು ಸೇರಿದ್ದ ಜನರು ಶಾಂತುಗೆ ಥಳಿಸಿದ್ದಾರೆ. ಬಳಿಕ ಅಕ್ಷತಾ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಕ್ಷತಾ ಬಟ್ಟೆ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ವಿಡಿಯೋವನ್ನು ನೀವು ನೋಡಿರಬಹುದು. ಬೇಕಾದರೆ ನಗರಸಭೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಿ ಎಂದು ಮಹಮ್ಮದ್ ಹೇಳಿದ್ದಾರೆ.

ಮುಂದುವರಿದು, ನಗರಸಭೆಯ ಮುಂದೆ ಇಷ್ಟೆಲ್ಲಾ ಘಟನೆಗಳು ಆದ ಬಳಿಕ, ನಗರಸಭೆಯ ಒಳಗೆ ಸಂಧಾನ ನಡೆದಿದೆ. ಅಲ್ಲಿ ನಗರಸಭೆ ಅಧ್ಯಕ್ಷರು, ಆಯುಕ್ತರು ಸೇರಿದಂತೆ ಪ್ರಮುಖರು ಇದ್ದರು. ದಲಿತ ಸಂಘಟನೆಗಳ ಪ್ರಮುಖರು ಮತ್ತು ಅಕ್ಷತಾ ಕಡೆಯವರು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಂಡಿದ್ದರು. ಅಕ್ಷತಾ ಅಲ್ಲಿಂದ ಮನೆಗೆ ತೆರಳಿದ್ದರು. ಆದರೆ, ನಗರಸಭೆ ಬಳಿ ನಡೆದ ಘಟನೆಯಿಂದ ಅವರ ಮನಸ್ಸಿಗೆ ಘಾಸಿಯಾಗಿತ್ತು. ಇನ್ನುಮುಂದೆ ಯಾವುದೇ ವಿಚಾರಕ್ಕೆ ತಲೆ ಹಾಕುವುದಿಲ್ಲ ಎಂದು ನನ್ನ ಬಳಿ ಹೇಳಿದ್ದರು. ಒಂದೆರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಾದರು ಹೋಗುತ್ತೇನೆ ಎಂದಿದ್ದರು. ಅಕ್ಷತಾ ಹೆಸರು ಹೇಳಿಕೊಂಡು ಯಾವುದೇ ಹೊಡೆದಾಟಕ್ಕೆ ಹೋಗಬೇಡಿ ಎಂದು ಆಕೆಯ ಪರವಾಗಿ ನಾನು ಯುವಕರಿಗೆ ಹೇಳಿ ಬಂದಿದ್ದೆ ಎಂದು ಮಹಮ್ಮದ್ ವಿವರಿಸಿದ್ದಾರೆ.

ನಗರಸಭೆಯ ಬಳಿ ನಡೆದ ಘಟನೆಯ ಬಳಿಕ ಅಕ್ಷತಾ ಯಾವುದೇ ವಿಚಾರಕ್ಕೆ ತಲೆ ಹಾಕಿರಲಿಲ್ಲ. ಆದರೆ, ಆಕೆ ಬುದ್ದಿವಾದ ಹೇಳಿದ ಬಳಿಕವೂ, ಮರುದಿನ ಶಾಂತು ನೇತೃತ್ವದಲ್ಲಿ ಯುವಕರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೂ ಅಕ್ಷತಾಗೂ ಯಾವುದೇ ಸಂಬಂಧ ಇಲ್ಲ. ಆದರೆ, ಸಂಘಟನೆಗಳ ಮುಖಂಡರು ಅಕ್ಷತಾಳೆ ಹಲ್ಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಯುವಕರಿಗೂ ಮತ್ತು ಪೌರ ಕಾರ್ಮಿಕರಿಗೆ  ಕೆಲಸ ವಿಚಾರಗಳಿಗೆ ಆಗಾಗ ವಾಗ್ವಾದಗಳು ನಡೆಯುತ್ತಿತ್ತು. ಅದರ ಮುಂದುವರಿದ ಭಾಗವಾಗಿ ಹಲ್ಲೆ ಮಾಡಿರಬಹುದು. ಅಲ್ಲದೆ ಅಕ್ಷತಾ ಯಾವುದೇ ಕಾರಣಕ್ಕೂ ಹಲ್ಲೆ ಮಾಡಿಸಿಲ್ಲ. ಆಕೆ ಪೌರ ಕಾರ್ಮಿಕರ ಪರವಾಗಿಯೇ ಕೆಲಸ ಮಾಡುವವರು ಎಂದು ಮಹಮ್ಮದ್ ಹೇಳಿದ್ದಾರೆ.

ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರರು

ಟ್ರಾನ್ಸ್‌ಜೆಂಡರ್ ಅಕ್ಷತಾ ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಪರ ಹೋರಾಟಗಾರ ಮಲ್ಲು ಕಂಬಾರ್, “ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ನಾನು ಖಂಡಿಸುತ್ತೇನೆ. ಅದು ನಾಗರಿಕ ಸಮಾಜ ಒಪ್ಪುವಂತದ್ದಲ್ಲ. ಈ ಪ್ರಕರಣದಲ್ಲಿ ಅಕ್ಷತಾ ಅವರ ವಿರುದ್ದ ಆರೋಪ ಕೇಳಿ ಬಂದಿದೆ. ಆದರೆ, ಅವರ ಕಡೆಯವರು ಅಕ್ಷತಾ ಅವರ ಪಾತ್ರವಿಲ್ಲ ಎನ್ನುತ್ತಿದ್ದಾರೆ. ಆದ್ದರಿಂದ ಘಟನೆಯ ಹಿಂದಿನ ಸತ್ಯಾಸತ್ಯಾತೆ ಏನು ಎಂದು ನನಗೆ ಗೊತ್ತಿಲ್ಲ. ಸರಿಯಾದ ತನಿಖೆಯಿಂದ ಅದು ತಿಳಿದು ಬರಬೇಕಿದೆ. ಸದ್ಯಕ್ಕೆ ನಾನು ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ. ಇದನ್ನು ಹೊರತು ಪ್ರಕರಣದಲ್ಲಿ ತಲೆ ಹಾಕಲು ಹೋಗುದಿಲ್ಲ. ನನ್ನ ಸಮುದಾಯವಾಗಲೀ, ಪೌರ ಕಾರ್ಮಿಕರಾಗಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಹಾವೇರಿ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ” ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...