Homeಕರ್ನಾಟಕಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

- Advertisement -
- Advertisement -

ಹಾವೇರಿ: ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಜೂ.7ರಂದು (ಶನಿವಾರ) ನಗರದ ಬಾರ್​ನಲ್ಲಿದ್ದ ಪೌರಕಾರ್ಮಿಕ ರಾಜು ದೊಡ್ಡಮನಿ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಬ್ಯಾಟ್ ಹಿಡಿದು ಬಂದ ಗುಂಪು ರಾಜು ಮೇಲೆ ಹಲ್ಲೆ ಮಾಡಿ ಪರಾರಿಯಾಗಿತ್ತು. ತೀವ್ರ ಗಾಯಗೊಂಡಿರುವ ರಾಜು ಹುಬ್ಬಳ್ಳಿಯ ಕಿಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಲ್ಲೆಗೆ ಮಂಗಳಮುಖಿ ಅಕ್ಷತಾ ಕಾರಣ ಎಂದು ಪೌರಕಾರ್ಮಿಕರು ಅಕ್ಷತಾ ಮತ್ತು ಆಕೆಯ 9 ಬೆಂಬಲಿಗರ ಮೇಲೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾದ ಎಫ್‌ಐಆರ್ ಪ್ರತಿ ಪ್ರಕಾರ, ಟ್ರಾನ್ಸ್‌ಜೆಂಡರ್ ಅಕ್ಷತಾ, ಶಾಂತು, ಸುಬ್ಬು, ಅರ್ಜುನ, ಪ್ರಥಮ್, ಶಿವು ಕನಕಪುರ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಅಕ್ಷತಾ ಅವರನ್ನು ಪ್ರಮುಖ ಆರೋಪಿಯನ್ನಾಗಿ ಗುರುತಿಸಲಾಗಿದೆ.

ಪೀರಪ್ಪ ಶಿರಬಾಡಗಿ ಎಂಬವರು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪೌರ ಕಾರ್ಮಿಕರಾದ ಪೀರಪ್ಪ ಮತ್ತು ಕಾಂತೇಶ್ ಕೂಡ ಪ್ರಕರಣದ ಸಂತ್ರಸ್ತರು ಎನ್ನಲಾಗಿದೆ. ಮತ್ತೊಂದು ದೂರನ್ನು ಸುರೇಶ್ ಎಂಬವರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ಸುಮಾರು 10 ಜನರ ವಿರುದ್ದ ಎಫ್‌ಐಆರ್ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಅಕ್ಷತಾ ಅವರ ಆಪ್ತ ಮಹಮ್ಮದ್ ಅವರು,  ಅಕ್ಷತಾ ಅವರು ಸಾಮಾಜಿಕ ಕಾರ್ಯಕ್ರಗಳಲ್ಲಿ ತೊಡಗಿಸಿಕೊಂಡವರು. ಹಿಂದುಳಿತ, ಶೋಷಿತ ಜನರಿಗಾಗಿ ಕೆಲಸ ಮಾಡುವವರು. ಯುವಕರನ್ನು ಒಗ್ಗೂಡಿಸಿ ಉತ್ತಮ ಕಾರ್ಯಕ್ರಮಗಳಲ್ಲಿ ತೊಡುಗುವಂತೆ ಮಾಡಿದ್ದಾರೆ. ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸುವವರು ಅಲ್ಲ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ವಿವರಿಸಿದ ಅವರು, ಶಾಂತು ಎಂಬ ಯುವಕನ ಜನ್ಮದಿನದ ಪ್ರಯುಕ್ತ ಬ್ಯಾನರ್ ಹಾಕಿದ್ದರು. ಅದನ್ನು ನಗರಸಭೆಯವರು ತೆರವು ಮಾಡಿದ್ದರು. ಈ ವೇಳೆ ಅಲ್ಲೆ ಇದ್ದ ಶಾಂತು ಪೌರ ಕಾರ್ಮಿಕರ ಜೊತೆ ವಾಗ್ವಾದ ನಡೆಸಿದ್ದರು. ಶಾಂತು ಅಕ್ಷತಾ ಅವರ ಜೊತೆ ಗುರುತಿಸಿಕೊಂಡಿದ್ದರಿಂದ ಬ್ಯಾನರ್ ತೆರವುಗೊಳಿಸಿದ ವಿಷಯವನ್ನು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಆತನಿಗೆ ಬುದ್ದಿಮಾತು ಹೇಳಿ, ನಗರಸಭೆಗೆ ತೆರಳಿ ಪೌರಾಯುಕ್ತರನ್ನು ಭೇಟಿಯಾಗಿದ್ದರು. ಅಲ್ಲಿ ಯುವಕರ ಬ್ಯಾನರ್ ವಾಪಸ್ ಕೊಡಿ, ಅವರು ಪರವಾನಿಗೆ ತೆಗೆದುಕೊಂಡು ಹಾಕುತ್ತಾರೆ ಎಂದು ಹೇಳಿ ಬಂದಿದ್ದರು. ಅಲ್ಲಿಗೆ ಒಂದು ಹಂತಕ್ಕೆ ವಿಷಯ ಮುಗಿದಿತ್ತು ಎಂದು ಮಹಮ್ಮದ್ ತಿಳಿಸಿದ್ದಾರೆ.

ಇದಾದ ಬಳಿಕ ಕೆಲ ಸಂಘಟನೆಗಳ ಮುಖಂಡರು ಮತ್ತು ಪೌರ ಕಾರ್ಮಿಕರು ನಗರಸಭೆ ಬಳಿ ಜಮಾಯಿಸಿ ಶಾಂತು ಜೊತೆ ವಾಗ್ವಾದ ನಡೆಸಿದ್ದಾರೆ. ಅಕ್ಷತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಷಯವನ್ನು ಯುವಕರು ಅಕ್ಷತಾಗೆ ತಿಳಿಸಿದ್ದರು. ಅಕ್ಷತಾ ಸ್ಥಳಕ್ಕೆ ತೆರಳಿದಾಗ ಮತ್ತೆ ವಾಗ್ವಾದ ಜೋರಾಗಿದೆ. ಡಿಎಸ್‌ಎಸ್ ಮುಖಂಡ ಹೊನ್ನಪ್ಪ ಅವರ ನೇತೃತ್ವದಲ್ಲಿ ಸೇರಿದ್ದ ಮುಖಂಡರು ಮತ್ತು ಪೌರ ಕಾರ್ಮಿಕರು ಅಕ್ಷತಾಗೆ ನಿಂದಿಸಿದ್ದಾರೆ. ಗುಂಪು ಸೇರಿದ್ದ ಜನರು ಶಾಂತುಗೆ ಥಳಿಸಿದ್ದಾರೆ. ಬಳಿಕ ಅಕ್ಷತಾ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಕ್ಷತಾ ಬಟ್ಟೆ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ವಿಡಿಯೋವನ್ನು ನೀವು ನೋಡಿರಬಹುದು. ಬೇಕಾದರೆ ನಗರಸಭೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಿ ಎಂದು ಮಹಮ್ಮದ್ ಹೇಳಿದ್ದಾರೆ.

ಮುಂದುವರಿದು, ನಗರಸಭೆಯ ಮುಂದೆ ಇಷ್ಟೆಲ್ಲಾ ಘಟನೆಗಳು ಆದ ಬಳಿಕ, ನಗರಸಭೆಯ ಒಳಗೆ ಸಂಧಾನ ನಡೆದಿದೆ. ಅಲ್ಲಿ ನಗರಸಭೆ ಅಧ್ಯಕ್ಷರು, ಆಯುಕ್ತರು ಸೇರಿದಂತೆ ಪ್ರಮುಖರು ಇದ್ದರು. ದಲಿತ ಸಂಘಟನೆಗಳ ಪ್ರಮುಖರು ಮತ್ತು ಅಕ್ಷತಾ ಕಡೆಯವರು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಂಡಿದ್ದರು. ಅಕ್ಷತಾ ಅಲ್ಲಿಂದ ಮನೆಗೆ ತೆರಳಿದ್ದರು. ಆದರೆ, ನಗರಸಭೆ ಬಳಿ ನಡೆದ ಘಟನೆಯಿಂದ ಅವರ ಮನಸ್ಸಿಗೆ ಘಾಸಿಯಾಗಿತ್ತು. ಇನ್ನುಮುಂದೆ ಯಾವುದೇ ವಿಚಾರಕ್ಕೆ ತಲೆ ಹಾಕುವುದಿಲ್ಲ ಎಂದು ನನ್ನ ಬಳಿ ಹೇಳಿದ್ದರು. ಒಂದೆರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಾದರು ಹೋಗುತ್ತೇನೆ ಎಂದಿದ್ದರು. ಅಕ್ಷತಾ ಹೆಸರು ಹೇಳಿಕೊಂಡು ಯಾವುದೇ ಹೊಡೆದಾಟಕ್ಕೆ ಹೋಗಬೇಡಿ ಎಂದು ಆಕೆಯ ಪರವಾಗಿ ನಾನು ಯುವಕರಿಗೆ ಹೇಳಿ ಬಂದಿದ್ದೆ ಎಂದು ಮಹಮ್ಮದ್ ವಿವರಿಸಿದ್ದಾರೆ.

ನಗರಸಭೆಯ ಬಳಿ ನಡೆದ ಘಟನೆಯ ಬಳಿಕ ಅಕ್ಷತಾ ಯಾವುದೇ ವಿಚಾರಕ್ಕೆ ತಲೆ ಹಾಕಿರಲಿಲ್ಲ. ಆದರೆ, ಆಕೆ ಬುದ್ದಿವಾದ ಹೇಳಿದ ಬಳಿಕವೂ, ಮರುದಿನ ಶಾಂತು ನೇತೃತ್ವದಲ್ಲಿ ಯುವಕರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೂ ಅಕ್ಷತಾಗೂ ಯಾವುದೇ ಸಂಬಂಧ ಇಲ್ಲ. ಆದರೆ, ಸಂಘಟನೆಗಳ ಮುಖಂಡರು ಅಕ್ಷತಾಳೆ ಹಲ್ಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಯುವಕರಿಗೂ ಮತ್ತು ಪೌರ ಕಾರ್ಮಿಕರಿಗೆ  ಕೆಲಸ ವಿಚಾರಗಳಿಗೆ ಆಗಾಗ ವಾಗ್ವಾದಗಳು ನಡೆಯುತ್ತಿತ್ತು. ಅದರ ಮುಂದುವರಿದ ಭಾಗವಾಗಿ ಹಲ್ಲೆ ಮಾಡಿರಬಹುದು. ಅಲ್ಲದೆ ಅಕ್ಷತಾ ಯಾವುದೇ ಕಾರಣಕ್ಕೂ ಹಲ್ಲೆ ಮಾಡಿಸಿಲ್ಲ. ಆಕೆ ಪೌರ ಕಾರ್ಮಿಕರ ಪರವಾಗಿಯೇ ಕೆಲಸ ಮಾಡುವವರು ಎಂದು ಮಹಮ್ಮದ್ ಹೇಳಿದ್ದಾರೆ.

ಮಲ್ಲು ಕುಂಬಾರ್ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರರು

ಟ್ರಾನ್ಸ್‌ಜೆಂಡರ್ ಅಕ್ಷತಾ ಅವರು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಪರ ಹೋರಾಟಗಾರ ಮಲ್ಲು ಕಂಬಾರ್, “ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ನಾನು ಖಂಡಿಸುತ್ತೇನೆ. ಅದು ನಾಗರಿಕ ಸಮಾಜ ಒಪ್ಪುವಂತದ್ದಲ್ಲ. ಈ ಪ್ರಕರಣದಲ್ಲಿ ಅಕ್ಷತಾ ಅವರ ವಿರುದ್ದ ಆರೋಪ ಕೇಳಿ ಬಂದಿದೆ. ಆದರೆ, ಅವರ ಕಡೆಯವರು ಅಕ್ಷತಾ ಅವರ ಪಾತ್ರವಿಲ್ಲ ಎನ್ನುತ್ತಿದ್ದಾರೆ. ಆದ್ದರಿಂದ ಘಟನೆಯ ಹಿಂದಿನ ಸತ್ಯಾಸತ್ಯಾತೆ ಏನು ಎಂದು ನನಗೆ ಗೊತ್ತಿಲ್ಲ. ಸರಿಯಾದ ತನಿಖೆಯಿಂದ ಅದು ತಿಳಿದು ಬರಬೇಕಿದೆ. ಸದ್ಯಕ್ಕೆ ನಾನು ಪೌರ ಕಾರ್ಮಿಕರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇನೆ. ಇದನ್ನು ಹೊರತು ಪ್ರಕರಣದಲ್ಲಿ ತಲೆ ಹಾಕಲು ಹೋಗುದಿಲ್ಲ. ನನ್ನ ಸಮುದಾಯವಾಗಲೀ, ಪೌರ ಕಾರ್ಮಿಕರಾಗಲಿ ಯಾರನ್ನೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಹಾವೇರಿ ಪೌರ ಕಾರ್ಮಿಕರ ಮೇಲಿನ ಮಾರಣಾಂತಿಕ ಹಲ್ಲೆ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸುರೇಶ್ ಅವರ ಪತ್ನಿ” ಶಾಂತು ಎಂಬಾತನ ಜನ್ಮದಿನದ ಹಿನ್ನೆಲೆ ಬ್ಯಾನರ್ ಹಾಕಲಾಗಿತ್ತು. ಪೌರ ಕಾರ್ಮಿಕರಾದ ಸುರೇಶ್ ಮತ್ತು ಪೀರಪ್ಪ ಪೌರಾಯುಕ್ತರ ಸೂಚನೆ ಮೇರೆಗೆ ಬ್ಯಾನರ್ ತೆರವುಗೊಳಿಸಿದ್ದರು. ಈ ಕಾರಣಕ್ಕೆ ಆರೋಪಿ ಅಕ್ಷತಾ ನಗರಸಭೆಗೆ ತೆರಳಿ ಪೌರಾಯುಕ್ತರ ಜೊತೆ ವಾಗ್ವಾದ ನಡೆಸಿದ್ದರು. ಈ ವೇಳೆ ಪೌರ ಕಾರ್ಮಿಕರೆಲ್ಲ ಪೌರಾಯುಕ್ತರ ಬೆಂಬಲಕ್ಕೆ ನಿಂತು ಅಕ್ಷತಾ ಜೊತೆ ವಾಗ್ವಾದ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಮುಂದುವರಿದು, ಶನಿವಾರ ನಗರಸಭೆ ಸಮೀಪದ ಬಾರ್ ಒಂದರಲ್ಲಿ ಸುರೇಶ್ ಮತ್ತು ಪೀರಪ್ಪ ಕುಳಿತಿದ್ದಾಗ, ಏಕಾಏಕಿ ನುಗ್ಗಿದ ಕೆಲವರು ಪೀರಪ್ಪ ಮೇಲೆ ಮಾರಣಾಂತಿಕ ಹಲ್ಲೆ (ವೈರಲ್ ವಿಡಿಯೋದಲ್ಲಿ ಇರುವಂತೆ) ನಡೆಸಿದ್ದಾರೆ. ಅದನ್ನು ನೋಡಿ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಮೂರ್ಚೆರೋಗ ಇತ್ತು. ಪ್ರಸ್ತುತ ಅವರು ಮನೆಯಲ್ಲೇ ಇದ್ದು, ಆಸ್ಪತ್ರೆಗೆ ಹೋಗಿ ಬರುವ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಸುರೇಶ್ ಮೇಲೆ ಹಲ್ಲೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಶ್ ಅವರ ಸಂಬಂಧಿ ಗುರುರಾಜ್ ಎಂಬವರು ಮಾತನಾಡಿ, “ಬ್ಯಾನರ್ ತೆರವುಗೊಳಿಸಿದ ಕಾರಣಕ್ಕೇ ಹಲ್ಲೆ ನಡೆದಿದೆ. ಸುರೇಶ್ ಪೌರ ಕಾರ್ಮಿಕರಾಗಿ ಅವರ ಕೆಲಸ ಮಾಡಿದ್ದಾರೆ. ಆರೋಪಿಗಳಿಗೂ ಅವರಿಗೂ ಯಾವುದೇ ಹಳೆ ದ್ವೇಷ ಇರಲಿಲ್ಲ ಎಂದಿದ್ದಾರೆ. ಆರೋಪಿ ಅಕ್ಷತಾ ಬಗ್ಗೆ ವಿವರಿಸಿದಾಗ, “ಅವರು ಇಲ್ಲೇ ಓಡಾಡಿಕೊಂಡು ಇದ್ದರು. ಇದುವರೆಗೆ ಈ ರೀತಿ ಗೂಂಡಾಗಿರಿ ಮಾಡಿರುವುದು ನಮಗೆ ಗೊತ್ತಿಲ್ಲ. ಇದೇ ಮೊದಲ ಬಾರಿಗೆ ಹೀಗಾಗಿದೆ” ಎಂದಿದ್ದಾರೆ.

ಆಗಿದ್ದೇನು?

ಮಾಧ್ಯಮ ವರದಿಗಳ ಪ್ರಕಾರ, “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ

ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತದಿಂದ 300ಕ್ಕೂ ಅಧಿಕ ಜನರು ಬಾಂಗ್ಲಾಕ್ಕೆ ಗಡೀಪಾರು: ಧ್ವನಿ ಎತ್ತಿದ ಮಾನವ ಹಕ್ಕು ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...