Homeಮುಖಪುಟನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ನಾಲ್ವರು ಮಕ್ಕಳ ಜೊತೆಗೆ ರೈಲಿನ ಹಳಿಗಳ ಮೇಲೆ ಸಾವಿಗೀಡಾದ ವಲಸೆ ಕಾರ್ಮಿಕ

ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿರುವುದನ್ನು ನೋಡಿ ತಮ್ಮನ್ನು ಬಿಡುವಂತೆ ಕೇಳಿಕೊಂಡರೂ ಬಿಡಲು ನಿರಾಕರಿಸಿದ ತಂದೆ!

- Advertisement -
- Advertisement -

36 ವರ್ಷದ ವ್ಯಕ್ತಿಯೊಬ್ಬ ತನ್ನ ನಾಲ್ವರು ಗಂಡು ಮಕ್ಕಳನ್ನು ರೈಲ್ವೆ ಹಳಿಗಳಿಗೆ ಕರೆದೊಯ್ದು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯಾಹ್ನ ಹರಿಯಾಣದ ಫರಿದಾಬಾದ್‌ನ ಬಲ್ಲಭಗಢದಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳಲ್ಲಿ ಅತ್ಯಂತ ಕಿರಿಯ ಮಗುವಿಗೆ ಮೂರು ವರ್ಷವಾಗಿದ್ದರೆ, ಹಿರಿಯ ಮಗನಿಗೆ ಒಂಬತ್ತು ವರ್ಷವಾಗಿತ್ತು. ವ್ಯಕ್ತಿಯು ಎಕ್ಸ್‌ಪ್ರೆಸ್ ರೈಲು ಹಾದು ಹೋಗುವವರೆಗೂ ಮಕ್ಕಳ ತೋಳುಗಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ನಾಲ್ವರು ಮಕ್ಕಳ ಜೊತೆಗೆ

ವ್ಯಕ್ತಿಯನ್ನು ಬಿಹಾರ ಮೂಲದ ಮನೋಜ್ ಮೆಹ್ತೋ ಎಂದು ಗುರುತಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ ಹಳಿಗಳ ಮೇಲೆ ವೇಗವಾಗಿ ಬರುತ್ತಿರುವುದನ್ನು ಕಂಡು, ತಮ್ಮನ್ನು ಬಿಡುವಂತೆ ಮಕ್ಕಳು ಕೇಳಿಕೊಂಡರೂ ಮನೋಜ್ ಅವರನ್ನು ಬಿಡಲು ನಿರಾಕರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ವರದಿ ಹೇಳಿದೆ. ದಿನಗೂಲಿ ಕಾರ್ಮಿಕನಾಗಿದ್ದ ಮನೋಜ್‌ ತನ್ನ ಮತ್ತು ತನ್ನ ಮಕ್ಕಳ ಜೀವನವನ್ನು ಕೊನೆಗೊಳಿಸಲು ಏಕೆ ನಿರ್ಧರಿಸಿದನೆಂದು ಸ್ಪಷ್ಟವಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ.

“ಮುಂಬೈನಿಂದ ಬರುತ್ತಿದ್ದ ರೈಲು ಮಧ್ಯಾಹ್ನ 1.10 ರ ಸುಮಾರಿಗೆ ಐವರನ್ನು ಬಲಿ ಪಡೆದಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಘಟಕದ ಎಸ್‌ಎಚ್‌ಒ ರಾಜ್‌ಪಾಲ್ ಹೇಳಿದ್ದಾರೆ. ಸುಭಾಷ್ ಕಾಲೋನಿ ಬಳಿ ವಾಸಿಸುತ್ತಿದ್ದ ಮನೋಜ್‌ ಮಧ್ಯಾಹ್ನ 12.15 ರ ಸುಮಾರಿಗೆ ಮನೆಯಿಂದ ಹೊರಡುವಾಗ ತನ್ನ ಪತ್ನಿ ಪ್ರಿಯಾಗೆ ಮಕ್ಕಳನ್ನು ಆಟವಾಡಲು ಹತ್ತಿರದ ಉದ್ಯಾನವನಕ್ಕೆ ಕರೆದೊಯ್ಯುತ್ತಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳನ್ನು ಫ್ಲೈಓವರ್ ಕೆಳಗೆ ನಿಲ್ಲಿಸಿ ಅವರಿಗೆ ಚಿಪ್ಸ್, ಕೋಲಾ ಕೂಡಾ ಖರೀದಿಸಿದ್ದರು. ಅದಾಗ್ಯೂ, ತನ್ನ ನಾಲ್ವರು ಮಕ್ಕಳನ್ನು ಆಟವಾಡಲು ಉದ್ಯಾನವನಕ್ಕೆ ಕರೆದೊಯ್ಯುವ ಬದಲು ಮನೋಜ್ ಅವರನ್ನು ರೈಲ್ವೆ ಹಳಿಗಳ ಬಳಿಗೆ ಕರೆದೊಯ್ದಿದ್ದನು. ಅಷ್ಟೆ ಅಲ್ಲದೆ, ಎಲ್ಸನ್ ಚೌಕ್ ಫ್ಲೈಓವರ್ ಕೆಳಗೆ ಸುಮಾರು ಒಂದು ಗಂಟೆ ಕುಳಿತು ರೈಲು ಬರುವವರೆಗೆ ಅವರಿಗೆ ಕಾಯುತ್ತಿದ್ದರು ಎಂದು ವರದಿಗಳು ಹೇಳಿವೆ.

ಘಟನೆಯ ನಂತರ, ಲೋಕೋ ಪೈಲಟ್ ಬಲ್ಲಭಗಢ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಅವರ ಆಧಾರ್ ಕಾರ್ಡ್ ಮೂಲಕ ಗುರುತಿಸಿದ್ದರು. ಅವರ ಜೇಬಿನಲ್ಲಿರುವ ಚಿಟ್‌ನಲ್ಲಿ ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬರೆದಿರುವುದು ಕಂಡುಬಂದಿತ್ತು. ಈ ಎಲ್ಲಾ ಮಾಹಿತಿಗಳು ಅವರ ಕೃತ್ಯಗಳು ಪೂರ್ವಯೋಜಿತವೆಂದು ಸೂಚಿಸುತ್ತದೆ ಎಂದು ವರದಿ ಹೇಳಿದೆ.

“ಒಬ್ಬ ಮಹಿಳೆ ಮತ್ತು ಆಕೆಯ ಮಕ್ಕಳು ರೈಲಿನ ಮುಂದೆ ಹಾರಿದ್ದಾರೆ ಎಂದು ನಮಗೆ ಆರಂಭದಲ್ಲಿ ಮಾಹಿತಿ ಬಂದಿತು. ಆದರೆ ನಾವು ಸ್ಥಳಕ್ಕೆ ತಲುಪಿದಾಗ, ತಂದೆ ಮತ್ತು ಅವರ ಪುತ್ರರು ಹಳಿಗಳ ಮೇಲೆ ಸಿಲುಕಿದ್ದಾರೆ ಎಂದು ನಮಗೆ ತಿಳಿದುಬಂದಿದೆ” ಎಂದು ಜಿಆರ್‌ಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮನೋಜ್ ಪತ್ನಿ ಪ್ರಿಯಾ ಅವರಿಗೆ ಕರೆ ಮಾಡಿದಾಗ, ತನ್ನ ಪತಿ ಮಕ್ಕಳನ್ನು ಉದ್ಯಾನವನಕ್ಕೆ ಕರೆದೊಯ್ದಿದ್ದು, ಶೀಘ್ರದಲ್ಲೇ ಮನೆಗೆ ಹಿಂತಿರುಗುತ್ತಾರೆ ಎಂದು ಜಿಆರ್‌ಪಿ ಸಿಬ್ಬಂದಿಗೆ ತಿಳಿಸಿದ್ದಾರೆ. ನಂತರ ಅವರನ್ನು ಸ್ಥಳಕ್ಕೆ ಬರುವಂತೆ ಕೇಳಿಕೊಂಡಿದ್ದು, ಅಲ್ಲಿ ಅವರು ಗಂಡ ಮತ್ತು ಮಕ್ಕಳ ಶವಗಳನ್ನು ನೋಡಿ ಮೂರ್ಛೆ ಹೋದರು ಎಂದು ವರದಿ ತಿಳಿಸಿದೆ.

ಶವಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ಕೊಂಡೊಯ್ಯಲಾಗಿದೆ.

ಮನೋಜ್ ಏಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿವಾಹದ ವೇಳೆ ತೊಂದರೆಯಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಆದರೆ ಅದಕ್ಕೂ ಇದಕ್ಕೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

“ಮನೋಜ್ ಅವರ ಮನಸ್ಥಿತಿ ಮತ್ತು ಅಂತಹ ನಿರ್ಧಾರ ಕೈಗೊಳ್ಳಲು ಏನು ಕಾರಣ ಎಂಬುವುದು ಕಂಡುಕೊಳ್ಳುವುದು ಈಗ ಆದ್ಯತೆಯಾಗಿದೆ. ಜೊತೆಗೆ ದುಃಖಿತ ಕುಟುಂಬದ ಜೊತೆಗೆ ನಿಲ್ಲುವುದು ಕೂಡಾ ಸಹ ಮುಖ್ಯವಾಗಿದೆ.” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಾಲ್ವರು ಮಕ್ಕಳ ಜೊತೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....