Homeಅಂತರಾಷ್ಟ್ರೀಯಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

ಇರಾನ್ ಮೇಲೆ ಇಸ್ರೇಲ್ ದಾಳಿ; ಭಾರತೀಯರಿಗೆ ತುರ್ತು ಪ್ರಯಾಣ ಸಲಹೆ ನೀಡಿದ ಭಾರತ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಹಿನ್ನಲೆ ಪ್ರಾದೇಶಿಕ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಗಿದ್ದು, ಭಾರತವು ಶುಕ್ರವಾರ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ತನ್ನ ನಾಗರಿಕರಿಗೆ ತುರ್ತು ಪ್ರಯಾಣ ಸಲಹೆಗಳನ್ನು ನೀಡಿದೆ. ಅದಾಗ್ಯೂ, ಇರಾನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದು, ಅದರ ನಂತರ ಏರ್ ಇಂಡಿಯಾ ತನ್ನ 15 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ.ಇರಾನ್ ಮೇಲೆ ಇಸ್ರೇಲ್

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ತೀವ್ರ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

“ಇರಾನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್‌ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಲು, ಎಲ್ಲಾ ಅನಗತ್ಯ ಚಲನೆಗಳನ್ನು ತಪ್ಪಿಸಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅನುಸರಿಸಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ” ಎಂದು ರಾಯಭಾರ ಕಚೇರಿ ಎಕ್ಸ್‌ನಲ್ಲಿ ತಿಳಿಸಿದೆ.

ಅದೇ ವೇಳೆ, ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುವ ಭೀತಿಯ ನಡುವೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದೆ, .

“ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಇಸ್ರೇಲ್ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಸೂಚಿಸಿದಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಪಾಲಿಸಲು ಸೂಚಿಸಲಾಗಿದೆ” ಎಂದು ಅದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ‘ಆಪರೇಷನ್ ರೈಸಿಂಗ್ ಲಯನ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ ನಂತರ ಈ ಎರಡು ಸಲಹೆಗಳನ್ನು ನೀಡಲಾಗಿದೆ. ಈ ಆಪರೇಷನ್‌ ಇರಾನ್‌ನ ಪರಮಾಣು ಸಾಮರ್ಥ್ಯಗಳನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಇಸ್ರೇಲ್ ದಾಳಿಗಳು ನಟಾಂಜ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಸೌಲಭ್ಯ ಸೇರಿದಂತೆ ಪ್ರಮುಖ ಪರಮಾಣು ಮೂಲಸೌಕರ್ಯದ ಮೇಲೆ ಪರಿಣಾಮ ಬೀರಿವೆ ಎಂದು ನೆತನ್ಯಾಹು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದಾಗಿ ಇರಾನ್ ತನ್ನ ವಾಯುಪ್ರದೇಶದ ಕೆಲವು ಭಾಗಗಳನ್ನು ಮುಚ್ಚಿದ್ದು, ವಾಣಿಜ್ಯ ವಾಯು ಸಂಚಾರಕ್ಕೂ ಅಡ್ಡಿಯಾಗಿದೆ. ಏರ್ ಇಂಡಿಯಾದ ಹಲವಾರು ದೀರ್ಘ-ಪ್ರಯಾಣದ ವಿಮಾನಗಳನ್ನು ಮಾರ್ಗಮಧ್ಯದಲ್ಲಿ ತಿರುಗುವಂತೆ ಅಥವಾ ಹಿಂತಿರುಗುವಂತೆ ಆಯಿದೆ.

ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳುವಾಗ, ಪ್ರದೇಶದಲ್ಲಿನ ತನ್ನ ಕಾರ್ಯಾಚರಣೆಗಳ ಮೂಲಕ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಭಾರತ ಸರ್ಕಾರ ಹೇಳಿದೆ. ಇರಾನ್ ಮೇಲೆ ಇಸ್ರೇಲ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ಏರ್ ಇಂಡಿಯಾ ಪತನ: ಮೃತಪಟ್ಟ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಸಾವಿನ ಸಂಖ್ಯೆ ಕನಿಷ್ಠ 265

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...