Homeಅಂತರಾಷ್ಟ್ರೀಯಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

- Advertisement -
- Advertisement -

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. ಇರಾನ್‌ ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದ್ದು, ಈ ವರೆಗೆ ಇಬ್ಬರು ಮೃತಪಟ್ಟಿದ್ದು, 40 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇರಾನ್‌ನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ಯಾಲೆಸ್ತೀನ್‌ನ ಪರ ಹೋರಾಟಗಾರ ಸಂಘಟನೆ ಹಮಾಸ್‌ನ ನಾಯಕ ಇಜ್ಜತ್ ಅಲ್-ರಿಷೇಕ್ ಅವರು, “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬಗ್ಗೆಗಿನ ಇಸ್ರೇಲ್‌ನ ಎಲ್ಲಾ ಪ್ರಚಾರದ ಹೊರತಾಗಿಯೂ ಇರಾನ್ ಇಸ್ರೇಲ್‌ನಲ್ಲಿರುವ ತಾಣಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.

ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ ಮತ್ತು ದೇಶವು ಈ ಪ್ರದೇಶದ ಜನರಲ್ಲಿ ದೀರ್ಘಕಾಲದಿಂದ ಹೊತ್ತಿಸಿರುವ ಬೆಂಕಿಯಿಂದ ಅದು ಬಳಲುತ್ತದೆ ಎಂದು ಅಲ್-ರಿಷೇಕ್ ಅವರು ಹೇಳಿದ್ದಾರೆ ಎಂದು ಸ್ಥಳೀಯ ಪ್ಯಾಲೆಸ್ತೀನಿ ಸುದ್ದಿ ತಾಣಗಳು ತಿಳಿಸಿವೆ. “ಇರಾನ್‌ನ ಬಲವಾದ ಪ್ರತಿಕ್ರಿಯೆಯು ಇದನ್ನು ಸಾಬೀತುಪಡಿಸುತ್ತದೆ. ಇರಾನ್‌ನ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇಸ್ರೇಲ್ ನಡೆಸುತ್ತಿರುವ ವರ್ಷಗಳ ಆಕ್ರಮಣದ ವಿರುದ್ಧದ ತೀವ್ರ ಮತ್ತು ನೇರ ಪ್ರತಿಕ್ರಿಯೆ” ಎಂದು ಅವರು ಹೇಳಿದ್ದಾರೆ.

ಇರಾನ್ ಇಸ್ರೇಲ್‌ನಾದ್ಯಂತ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಪ್ರತೀಕಾರದ ದಾಳಿ ”ಆಪರೇಷನ್ ಟ್ರೂ ಪ್ರಾಮಿಸ್ III” ಅನ್ನು ಪ್ರಾರಂಭಿಸಿದ ನಂತರ ಹಮಾಸ್ ಈ ಹೇಳಿಕೆ ನೀಡಿದೆ.

ಇರಾನಿನ ಪ್ರತಿಕ್ರಿಯೆಯನ್ನು “ಕಾನೂನುಬದ್ಧ” ಎಂದು ಬಣ್ಣಿಸಿದ ಅಲ್-ರಿಷೇಕ್ ಅವರು, ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶಗಳಲ್ಲಿ ಮತ್ತು ಅದರಾಚೆ ನಡೆಸುತ್ತಿರುವ ತನ್ನ ನಿರಂತರ ಕೃತ್ಯಗಳಿಗೆ ಇಸ್ರೇಲ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಇರಾನ್‌ನ ಈ ತೀವ್ರ ಪ್ರತಿಕ್ರಿಯೆಯು ಯಾವುದೇ ದುರಹಂಕಾರವನ್ನು ಪ್ರಶ್ನಿಸದೆ ಬಿಡುವುದಿಲ್ಲ ಮತ್ತು ಯಾವುದೇ ಆಕ್ರಮಣಕ್ಕೆ ಶಿಕ್ಷೆಯಿಲ್ಲದೆ ಇರುವುದಿಲ್ಲ ಎಂದು ಸಾಬೀತುಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಬಹುಪಾಲು ಸ್ಪೋಟಕಗಳನ್ನು ತಡೆದಿವೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿಕೊಂಡಿದ್ದರೂ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ನಿರಾಕರಿಸಿದ್ದು, ತಮ್ಮ ಕ್ಷಿಪಣಿಗಳು ಹಲವಾರು ಸೇನಾ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿ ಬಹು-ಪದರದ ವಾಯು ರಕ್ಷಣಾ ಗುರಾಣಿಯನ್ನು ಭೇದಿಸಿದೆ ಎಂದು ಹೇಳಿದೆ.

ಇಸ್ರೇಲಿ ನೀತಿಗಳಿಗೆ ವಿರುದ್ಧವಾಗಿ ದೀರ್ಘಕಾಲದಿಂದ ಇರಾನ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಹಮಾಸ್, ಈ ಬಲಪ್ರದರ್ಶನವನ್ನು ಪ್ರಾದೇಶಿಕ ಅಧಿಕಾರ ಸಮತೋಲನದಲ್ಲಿ ಒಂದು ಮಹತ್ವದ ತಿರುವು ಎಂದು ಶ್ಲಾಘಿಸಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...