Homeಅಂತರಾಷ್ಟ್ರೀಯಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

- Advertisement -
- Advertisement -

ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್ ಮೇಲೆ ಇರಾನ್‌ ನಡೆಸಿದ ಕ್ಷಿಪಣಿ ದಾಳಿಯನ್ನು ಪ್ಯಾಲೆಸ್ತೀನಿ ಪ್ರತಿರೋಧ ಪಡೆ ಹಮಾಸ್‌ ಶನಿವಾರ ಶ್ಲಾಘಿಸಿದ್ದು, ಇಸ್ರೇಲ್ ಭಾರಿ ಪ್ರಚಾರ ಮಾಡುವ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳಾದ “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್”ನ ದೌರ್ಬಲ್ಯವನ್ನು ಈ ದಾಳಿ ಬಹಿರಂಗಪಡಿಸಿದೆ ಎಂದು ಹೇಳಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇರಾನ್‌ನ ಪರಮಾಣು ಕೇಂದ್ರ ಮತ್ತು ಇತರ ಪ್ರದೇಶಗಳನ್ನು ಗುರಿಯಾಗಿಸಿ ಶುಕ್ರವಾರ ಇಸ್ರೇಲ್ ನಡೆಸಿದ್ದ ದಾಳಿಯಲ್ಲಿ ದೇಶದ ಪರಮಾಣು ವಿಜ್ಞಾನಿಗಳು, ಹಿರಿಯ ಸೇನಾಧಿಕಾರಿಗಳು ಹಾಗೂ ನಾಗರಿಕರ ಮೃತಪಟ್ಟಿದ್ದರು. ಇರಾನ್‌ ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದ್ದು, ಈ ವರೆಗೆ ಇಬ್ಬರು ಮೃತಪಟ್ಟಿದ್ದು, 40 ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇರಾನ್‌ನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ಯಾಲೆಸ್ತೀನ್‌ನ ಪರ ಹೋರಾಟಗಾರ ಸಂಘಟನೆ ಹಮಾಸ್‌ನ ನಾಯಕ ಇಜ್ಜತ್ ಅಲ್-ರಿಷೇಕ್ ಅವರು, “ಐರನ್ ಡೋಮ್ ಮತ್ತು ಡೇವಿಡ್‌ನ ಸ್ಲಿಂಗ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬಗ್ಗೆಗಿನ ಇಸ್ರೇಲ್‌ನ ಎಲ್ಲಾ ಪ್ರಚಾರದ ಹೊರತಾಗಿಯೂ ಇರಾನ್ ಇಸ್ರೇಲ್‌ನಲ್ಲಿರುವ ತಾಣಗಳನ್ನು ಯಶಸ್ವಿಯಾಗಿ ಗುರಿಯಾಗಿಸಿಕೊಂಡಿದೆ” ಎಂದು ಶ್ಲಾಘಿಸಿದ್ದಾರೆ.

ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಗಳು ವಿಫಲವಾಗಿವೆ ಮತ್ತು ದೇಶವು ಈ ಪ್ರದೇಶದ ಜನರಲ್ಲಿ ದೀರ್ಘಕಾಲದಿಂದ ಹೊತ್ತಿಸಿರುವ ಬೆಂಕಿಯಿಂದ ಅದು ಬಳಲುತ್ತದೆ ಎಂದು ಅಲ್-ರಿಷೇಕ್ ಅವರು ಹೇಳಿದ್ದಾರೆ ಎಂದು ಸ್ಥಳೀಯ ಪ್ಯಾಲೆಸ್ತೀನಿ ಸುದ್ದಿ ತಾಣಗಳು ತಿಳಿಸಿವೆ. “ಇರಾನ್‌ನ ಬಲವಾದ ಪ್ರತಿಕ್ರಿಯೆಯು ಇದನ್ನು ಸಾಬೀತುಪಡಿಸುತ್ತದೆ. ಇರಾನ್‌ನ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಇಸ್ರೇಲ್ ನಡೆಸುತ್ತಿರುವ ವರ್ಷಗಳ ಆಕ್ರಮಣದ ವಿರುದ್ಧದ ತೀವ್ರ ಮತ್ತು ನೇರ ಪ್ರತಿಕ್ರಿಯೆ” ಎಂದು ಅವರು ಹೇಳಿದ್ದಾರೆ.

ಇರಾನ್ ಇಸ್ರೇಲ್‌ನಾದ್ಯಂತ ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ನೂರಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಒಳಗೊಂಡ ದೊಡ್ಡ ಪ್ರಮಾಣದ ಪ್ರತೀಕಾರದ ದಾಳಿ ”ಆಪರೇಷನ್ ಟ್ರೂ ಪ್ರಾಮಿಸ್ III” ಅನ್ನು ಪ್ರಾರಂಭಿಸಿದ ನಂತರ ಹಮಾಸ್ ಈ ಹೇಳಿಕೆ ನೀಡಿದೆ.

ಇರಾನಿನ ಪ್ರತಿಕ್ರಿಯೆಯನ್ನು “ಕಾನೂನುಬದ್ಧ” ಎಂದು ಬಣ್ಣಿಸಿದ ಅಲ್-ರಿಷೇಕ್ ಅವರು, ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶಗಳಲ್ಲಿ ಮತ್ತು ಅದರಾಚೆ ನಡೆಸುತ್ತಿರುವ ತನ್ನ ನಿರಂತರ ಕೃತ್ಯಗಳಿಗೆ ಇಸ್ರೇಲ್ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

“ಇರಾನ್‌ನ ಈ ತೀವ್ರ ಪ್ರತಿಕ್ರಿಯೆಯು ಯಾವುದೇ ದುರಹಂಕಾರವನ್ನು ಪ್ರಶ್ನಿಸದೆ ಬಿಡುವುದಿಲ್ಲ ಮತ್ತು ಯಾವುದೇ ಆಕ್ರಮಣಕ್ಕೆ ಶಿಕ್ಷೆಯಿಲ್ಲದೆ ಇರುವುದಿಲ್ಲ ಎಂದು ಸಾಬೀತುಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಒಳಬರುವ ಬಹುಪಾಲು ಸ್ಪೋಟಕಗಳನ್ನು ತಡೆದಿವೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿಕೊಂಡಿದ್ದರೂ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ನಿರಾಕರಿಸಿದ್ದು, ತಮ್ಮ ಕ್ಷಿಪಣಿಗಳು ಹಲವಾರು ಸೇನಾ ಗುರಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿ ಬಹು-ಪದರದ ವಾಯು ರಕ್ಷಣಾ ಗುರಾಣಿಯನ್ನು ಭೇದಿಸಿದೆ ಎಂದು ಹೇಳಿದೆ.

ಇಸ್ರೇಲಿ ನೀತಿಗಳಿಗೆ ವಿರುದ್ಧವಾಗಿ ದೀರ್ಘಕಾಲದಿಂದ ಇರಾನ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಹಮಾಸ್, ಈ ಬಲಪ್ರದರ್ಶನವನ್ನು ಪ್ರಾದೇಶಿಕ ಅಧಿಕಾರ ಸಮತೋಲನದಲ್ಲಿ ಒಂದು ಮಹತ್ವದ ತಿರುವು ಎಂದು ಶ್ಲಾಘಿಸಿದೆ. ಇಸ್ರೇಲ್ ಮೇಲೆ ಇರಾನ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...