Homeಅಂತರಾಷ್ಟ್ರೀಯಇಸ್ರೇಲ್ ರಕ್ಷಿಸುವ ರಾಷ್ಟ್ರಗಳನ್ನು ಗುರಿಯಾಗಿಸುತ್ತೇವೆ: ಇರಾನ್

ಇಸ್ರೇಲ್ ರಕ್ಷಿಸುವ ರಾಷ್ಟ್ರಗಳನ್ನು ಗುರಿಯಾಗಿಸುತ್ತೇವೆ: ಇರಾನ್

- Advertisement -
- Advertisement -

ಇಸ್ರೇಲ್ ಅನ್ನು ರಕ್ಷಿಸಲು ಪ್ರಯತ್ನಿಸುವ ದೇಶಗಳ ಪ್ರಾದೇಶಿಕ ನೆಲೆಗಳನ್ನು ಇರಾನ್ ಗುರಿಯಾಗಿಸುತ್ತದೆ ಎಂದು ಇರಾನಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಅಮೆರಿಕದ ಮಾಧ್ಯಮ ಸಿಎನ್‌ಎನ್‌ ಅನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ. ಈ ಮೂಲಕ, ಇಸ್ರೇಲ್ ಅನ್ನು ರಕ್ಷಿಸಲು ಮುಂದಾಗುವ ರಾಷ್ಟ್ರಗಳಿಗೆ ಇರಾನ್ ಶುಕ್ರವಾರ ತೀಕ್ಷ್ಣ ಎಚ್ಚರಿಕೆ ನೀಡಿದೆ. ಇಸ್ರೇಲ್ ರಕ್ಷಿಸುವ

ಇಸ್ರೇಲ್‌ಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುವ ಹಕ್ಕನ್ನು ಇರಾನ್ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಕಾಯ್ದಿರಿಸಿದೆ ಎಂದು ಇರಾನ್‌ನ ಅಧಿಕಾರಿ ಹೇಳಿದ್ದು, “ಇರಾನ್‌ನ ಕಾರ್ಯಾಚರಣೆಗಳ ವಿರುದ್ಧ ಇಸ್ರೇಲ್‌ನ ಆಡಳಿತವನ್ನು ರಕ್ಷಿಸಲು ಪ್ರಯತ್ನಿಸುವ ಯಾವುದೇ ದೇಶವು ಪ್ರತಿಯಾಗಿ, ಅದರ ಪ್ರಾದೇಶಿಕ ನೆಲೆಗಳು ಮತ್ತು ಸ್ಥಾನಗಳು ಹೊಸ ಗುರಿಗಳಾಗುತ್ತವೆ” ಎಂದು ಅಧಿಕಾರಿ ಹೇಳಿದ್ದಾರೆ.

ಇಸ್ರೇಲ್ ತನ್ನ “ಇತಿಹಾಸದಲ್ಲಿಯೇ ಅತ್ಯಂತ ಶ್ರೇಷ್ಠ ಮಿಲಿಟರಿ ಕಾರ್ಯಾಚರಣೆ” ಎಂದು ಕರೆದ “ಆಪರೇಷನ್ ರೈಸಿಂಗ್ ಲಯನ್” ಇರಾನ್‌ನ ಪರಮಾಣು ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಪ್ರಾರಂಭಿಸಿದ ನಂತರ ಇರಾನ್‌ ಈ ಘೋಷಣೆ ಮಾಡಿದೆ. ಇಸ್ರೇಲ್‌ನ ದಾಳಿಗೆ ಪ್ರತಿಕ್ರಿಯೆಯಾಗಿ, ಇರಾನ್ ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆ ರಾಜಧಾನಿ ಟೆಲ್ ಅವೀವ್ ಸೇರಿದಂತೆ ಮಧ್ಯ ಇಸ್ರೇಲಿ ನಗರಗಳನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿ ನಡೆಸಿತು.

ಇರಾನ್ ದಾಳಿಯ ನಂತರ ದೇಶಾದ್ಯಂತ ವಾಯುದಾಳಿಯ ಸೈರನ್‌ಗಳು ಮೊಳಗುತ್ತಿದ್ದಂತೆ ಸ್ಫೋಟಗಳು ನಡೆದಿವೆ. ಇಸ್ರೇಲಿ ಸೇನೆಯು ಅನೇಕ ಕ್ಷಿಪಣಿಗಳನ್ನು ತಡೆಹಿಡಿದಿರುವುದಾಗಿ ಹೇಳಿಕೊಂಡರೂ, ಕೆಲವು ಪರಿಣಾಮ ಬೀರಿವೆ ಎಂದು ಅದು ಒಪ್ಪಿಕೊಂಡಿದೆ.

ಅದೇ ನಿಲುವನ್ನು ಪ್ರತಿಧ್ವನಿಸಿರುವ ಇರಾನ್‌ನ ಮಿಲಿಟರಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ, “ಎರಡು ವರ್ಷಗಳ ಪ್ಯಾಲೆಸ್ತೀನಿ ಹತ್ಯಾಕಾಂಡಗಳು ಮತ್ತು ನಿನ್ನೆ ರಾತ್ರಿ ಇರಾನ್ ಮೇಲಿನ ದಾಳಿಯ ಸಮಯದಲ್ಲಿ ನೀವು ಮೌನವಾಗಿದ್ದರೆ, ಈಗ ಸಂಯಮಕ್ಕೆ ಕರೆ ನೀಡಬೇಡಿ. ಸುಮ್ಮನಿರಿ.” ಎಂದು ಹೇಳಿದೆ.

ಆಪರೇಷನ್ ರೈಸಿಂಗ್ ಲಯನ್ ಮೂಲಕ ಇಸ್ರೇಲ್‌ ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳು, ಪರಮಾಣು ಕೇಂದ್ರಗಳು ಮತ್ತು ಮಿಲಿಟರಿ ಕಮಾಂಡ್ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿತ್ತು. ಇರಾನಿನ ವರದಿಗಳ ಪ್ರಕಾರ, ಹಲವಾರು ಉನ್ನತ ಶ್ರೇಣಿಯ ಪರಮಾಣು ವಿಜ್ಞಾನಿಗಳು ಮತ್ತು ಉನ್ನತ ಮಿಲಿಟರಿ ಕಮಾಂಡರ್‌ಗಳು ಕೊಲ್ಲಲ್ಪಟ್ಟರು.

ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಶನಿವಾರದಂದು ಉಗ್ರ ಭಾಷಣದೊಂದಿಗೆ ಪ್ರತಿಕ್ರಿಯಿಸಿದ್ದು, “ಅವರು ಮಾಡಿರುವ ಈ ಭಾರಿ ತಪ್ಪಿನ ಪರಿಣಾಮಗಳಿಂದ ತಪ್ಪಿಸಿಕೊಳ್ಳಲು ನಾವು ಅವರಿಗೆ ಅವಕಾಶ ನೀಡುವುದಿಲ್ಲ” ಎಂದು ಅವರು ಸಾರ್ವಜನಿಕರಿಗೆ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ.

“ಅವರು ದಾಳಿ ಮಾಡಿದರು ಮತ್ತು ಅದು ಮುಗಿದಿದೆ ಎಂದು ಭಾವಿಸಬೇಡಿ. ಇಲ್ಲ, ಅವರು ಕ್ರಮಗಳನ್ನು ಪ್ರಾರಂಭಿಸಿದರು ಮತ್ತು ಸಂಘರ್ಷವನ್ನು ಪ್ರಾರಂಭಿಸಿದರು” ಎಂದು ಅವರು ಹೇಳಿದ್ದು, ಇರಾನ್‌ನ ಮಿಲಿಟರಿ ಪ್ರತಿಕ್ರಿಯಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಹೇಳಿದ್ದರು. ಇಸ್ರೇಲ್ ರಕ್ಷಿಸುವ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ಇಸ್ರೇಲ್ ಮೇಲೆ ಇರಾನ್ ದಾಳಿ | ಶ್ಲಾಘಿಸಿದ ಪ್ಯಾಲೆಸ್ತೀನ್‌ ಹೋರಾಟಗಾರರ ಪಡೆ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...