Homeಮುಖಪುಟಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಭೀಕರ ಹಿಂಸೆ ಎದುರಿಸುತ್ತಿರುವಾಗ ಭಾರತ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

ಇಸ್ರೇಲ್‌ ಆಕ್ರಮಿತ ಪ್ಯಾಲೆಸ್ತೀನ್‌ನ ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಮತ್ತೆ ತಟಸ್ಥವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಭಾರತ ಮತದಾನದಿಂದ ತಟಸ್ಥವಾಗಿದೆ. ಮೋದಿ ನೇತೃತ್ವದ ಸರ್ಕಾರದ ಈ ನಿರ್ಧಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗಾಜಾ ಸಂಘರ್ಷದಲ್ಲಿ

ಈ ಬಗ್ಗೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಮ್ಮ ವಿದೇಶಾಂಗ ನೀತಿಯು ಈಗ ಹೆಚ್ಚು ಹೆಚ್ಚು ಶಿಥಿಲಗೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ. ಬಹುಶಃ, ಪ್ರಧಾನಿ ಮೋದಿ ಈಗ ತಮ್ಮ ವಿದೇಶಾಂಗ ಸಚಿವರ ಪುನರಾವರ್ತಿತ ತಪ್ಪುಗಳನ್ನು ಪರಿಗಣಿಸಿ ಕೆಲವು ಹೊಣೆಗಾರಿಕೆಯನ್ನು ಹೊಂದಿಸಬೇಕು.” ಎಂದು ಹೇಳಿದ್ದಾರೆ.

“ಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯಕ್ಕೆ 149 ದೇಶಗಳು ಮತ ಹಾಕಿದವು. ಮತದಾನದಿಂದ ದೂರವಿದ್ದ 19 ದೇಶಗಳಲ್ಲಿ ಭಾರತ ಕೂಡಾ ಒಂದಾಗಿದೆ. ಈ ಹೆಜ್ಜೆಯಿಂದ ನಾವು ವಾಸ್ತವಿಕವಾಗಿ ಒಂಟಿಯಾಗಿ ನಿಂತಿದ್ದೇವೆ.” ಎಂದು ಅವರು ಹೇಳಿದ್ದಾರ ಎ.

ಅಕ್ಟೋಬರ್ 8, 2023 ರಂದು, ಇಸ್ರೇಲ್ ಜನರ ಮೇಲೆ ಪ್ಯಾಲೆಸ್ತೀನಿ ಹೋರಾಟಗಾರರಾದ ಹಮಾಸ್ ನಡೆಸಿದ ಕ್ರೂರ ದಾಳಿಯನ್ನು ಕಾಂಗ್ರೆಸ್ ಖಂಡಿಸಿತ್ತು ಎಂದು ಹೇಳಿರುವ ಅವರು, “ಗಾಝಾದ ದಿಗ್ಭಂಧನ ಮತ್ತು ಅದರ ಮೇಲಿನ ಬಾಂಬ್ ದಾಳಿಗಳನ್ನು ಒಳಗೊಂಡಂತೆ ವಿವೇಚನಾರಹಿತ ಕೃತ್ಯಗಳನ್ನು ನಾವು ನಿರಂತರವಾಗಿ ಖಂಡಿಸಿದ್ದೇವೆ” ಎಂದು ಹೇಳಿದ್ದಾರೆ.

ಈ ದಾಳಿಯಲ್ಲಿ 60,000 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಮತ್ತು ಭಯಾನಕ ಮಾನವೀಯ ಬಿಕ್ಕಟ್ಟು ಇದೆ. ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ, ಶಾಂತಿ ಮತ್ತು ಮಾತುಕತೆಗಾಗಿ ಪ್ರತಿಪಾದಿಸುವ ಭಾರತದ ಈ ಹಿಂದಿನ ನಿಲುವನ್ನು ನಾವು ಕೈಬಿಟ್ಟಿದ್ದೇವೆಯೇ? ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ.

“ಭಾರತದ ಈ ನಿಲುವು ನಮ್ಮ ದೀರ್ಘಕಾಲದ ಅಲಿಪ್ತತೆ ಮತ್ತು ನೈತಿಕ ರಾಜತಾಂತ್ರಿಕತೆಯ ಸಂಪ್ರದಾಯದಲ್ಲಿ ತೀವ್ರವಾಗಿ ಬೇರೂರಿದೆ. ಅದರ ಮೂಲಕ ಭಾರತವು ಅಂತರರಾಷ್ಟ್ರೀಯ ಸಂಘರ್ಷಗಳಲ್ಲಿ ಯಾವಾಗಲೂ ನ್ಯಾಯ ಮತ್ತು ಶಾಂತಿಯನ್ನು ಪ್ರತಿಪಾದಿಸಿದೆ.” ಎಂದು ಹೇಳಿದ್ದಾರೆ.

“ಅಕ್ಟೋಬರ್ 19, 2023 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತಕ್ಷಣದ ಕದನ ವಿರಾಮಕ್ಕೆ ಮತ್ತು ಗಾಝಾದ ಸಂಕಷ್ಟಕ್ಕೊಳಗಾದ ಮತ್ತು ಹೊರದಬ್ಬಲ್ಪಟ್ಟ ಜನರಿಗೆ ಮಾನವೀಯ ನೆರವು ನೀಡುವಂತೆ ಕರೆ ನೀಡಿತ್ತು. ಈ ಪ್ರದೇಶವು ಭೀಕರ ಹಿಂಸೆ, ಮಾನವೀಯ ದುರಂತ ಮತ್ತು ಹೆಚ್ಚುತ್ತಿರುವ ಅಸ್ಥಿರತೆಯನ್ನು ಎದುರಿಸುತ್ತಿರುವಾಗ ಭಾರತ ಮೌನವಾಗಿ ಅಥವಾ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ. ಗಾಜಾ ಸಂಘರ್ಷದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...