Homeಮುಖಪುಟಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಭೀಕರ ಹಿಂಸೆ ಎದುರಿಸುತ್ತಿರುವಾಗ ಭಾರತ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

ಇಸ್ರೇಲ್‌ ಆಕ್ರಮಿತ ಪ್ಯಾಲೆಸ್ತೀನ್‌ನ ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಮತ್ತೆ ತಟಸ್ಥವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಭಾರತ ಮತದಾನದಿಂದ ತಟಸ್ಥವಾಗಿದೆ. ಮೋದಿ ನೇತೃತ್ವದ ಸರ್ಕಾರದ ಈ ನಿರ್ಧಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗಾಜಾ ಸಂಘರ್ಷದಲ್ಲಿ

ಈ ಬಗ್ಗೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಮ್ಮ ವಿದೇಶಾಂಗ ನೀತಿಯು ಈಗ ಹೆಚ್ಚು ಹೆಚ್ಚು ಶಿಥಿಲಗೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ. ಬಹುಶಃ, ಪ್ರಧಾನಿ ಮೋದಿ ಈಗ ತಮ್ಮ ವಿದೇಶಾಂಗ ಸಚಿವರ ಪುನರಾವರ್ತಿತ ತಪ್ಪುಗಳನ್ನು ಪರಿಗಣಿಸಿ ಕೆಲವು ಹೊಣೆಗಾರಿಕೆಯನ್ನು ಹೊಂದಿಸಬೇಕು.” ಎಂದು ಹೇಳಿದ್ದಾರೆ.

“ಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯಕ್ಕೆ 149 ದೇಶಗಳು ಮತ ಹಾಕಿದವು. ಮತದಾನದಿಂದ ದೂರವಿದ್ದ 19 ದೇಶಗಳಲ್ಲಿ ಭಾರತ ಕೂಡಾ ಒಂದಾಗಿದೆ. ಈ ಹೆಜ್ಜೆಯಿಂದ ನಾವು ವಾಸ್ತವಿಕವಾಗಿ ಒಂಟಿಯಾಗಿ ನಿಂತಿದ್ದೇವೆ.” ಎಂದು ಅವರು ಹೇಳಿದ್ದಾರ ಎ.

ಅಕ್ಟೋಬರ್ 8, 2023 ರಂದು, ಇಸ್ರೇಲ್ ಜನರ ಮೇಲೆ ಪ್ಯಾಲೆಸ್ತೀನಿ ಹೋರಾಟಗಾರರಾದ ಹಮಾಸ್ ನಡೆಸಿದ ಕ್ರೂರ ದಾಳಿಯನ್ನು ಕಾಂಗ್ರೆಸ್ ಖಂಡಿಸಿತ್ತು ಎಂದು ಹೇಳಿರುವ ಅವರು, “ಗಾಝಾದ ದಿಗ್ಭಂಧನ ಮತ್ತು ಅದರ ಮೇಲಿನ ಬಾಂಬ್ ದಾಳಿಗಳನ್ನು ಒಳಗೊಂಡಂತೆ ವಿವೇಚನಾರಹಿತ ಕೃತ್ಯಗಳನ್ನು ನಾವು ನಿರಂತರವಾಗಿ ಖಂಡಿಸಿದ್ದೇವೆ” ಎಂದು ಹೇಳಿದ್ದಾರೆ.

ಈ ದಾಳಿಯಲ್ಲಿ 60,000 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಮತ್ತು ಭಯಾನಕ ಮಾನವೀಯ ಬಿಕ್ಕಟ್ಟು ಇದೆ. ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ, ಶಾಂತಿ ಮತ್ತು ಮಾತುಕತೆಗಾಗಿ ಪ್ರತಿಪಾದಿಸುವ ಭಾರತದ ಈ ಹಿಂದಿನ ನಿಲುವನ್ನು ನಾವು ಕೈಬಿಟ್ಟಿದ್ದೇವೆಯೇ? ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ.

“ಭಾರತದ ಈ ನಿಲುವು ನಮ್ಮ ದೀರ್ಘಕಾಲದ ಅಲಿಪ್ತತೆ ಮತ್ತು ನೈತಿಕ ರಾಜತಾಂತ್ರಿಕತೆಯ ಸಂಪ್ರದಾಯದಲ್ಲಿ ತೀವ್ರವಾಗಿ ಬೇರೂರಿದೆ. ಅದರ ಮೂಲಕ ಭಾರತವು ಅಂತರರಾಷ್ಟ್ರೀಯ ಸಂಘರ್ಷಗಳಲ್ಲಿ ಯಾವಾಗಲೂ ನ್ಯಾಯ ಮತ್ತು ಶಾಂತಿಯನ್ನು ಪ್ರತಿಪಾದಿಸಿದೆ.” ಎಂದು ಹೇಳಿದ್ದಾರೆ.

“ಅಕ್ಟೋಬರ್ 19, 2023 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತಕ್ಷಣದ ಕದನ ವಿರಾಮಕ್ಕೆ ಮತ್ತು ಗಾಝಾದ ಸಂಕಷ್ಟಕ್ಕೊಳಗಾದ ಮತ್ತು ಹೊರದಬ್ಬಲ್ಪಟ್ಟ ಜನರಿಗೆ ಮಾನವೀಯ ನೆರವು ನೀಡುವಂತೆ ಕರೆ ನೀಡಿತ್ತು. ಈ ಪ್ರದೇಶವು ಭೀಕರ ಹಿಂಸೆ, ಮಾನವೀಯ ದುರಂತ ಮತ್ತು ಹೆಚ್ಚುತ್ತಿರುವ ಅಸ್ಥಿರತೆಯನ್ನು ಎದುರಿಸುತ್ತಿರುವಾಗ ಭಾರತ ಮೌನವಾಗಿ ಅಥವಾ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ. ಗಾಜಾ ಸಂಘರ್ಷದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...