Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....