Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...