Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...