Homeಮುಖಪುಟಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

- Advertisement -
- Advertisement -

ಛತ್ತೀಸ್‌ಗಢದ ಬಿಜೆಪಿ ಸರ್ಕಾರವು ಪೊಲೀಸ್ ದಾಖಲೆಗಳಲ್ಲಿ ಬಳಸಲಾಗುವ ಉರ್ದು ಮತ್ತು ಪರ್ಷಿಯನ್ ಪದಗಳನ್ನು ಕಿತ್ತು ಹಾಕಿ ಹಿಂದಿ ಪದಗನ್ನು ಪರಿಚಯಿಸಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ವ್ಯಕ್ತಿಗೆ ಸುಲಭವಾಗಿ ಅರ್ಥವಾಗುವ ಹಿಂದಿ ಪದಗಳೊಂದಿಗೆ ಇದನ್ನು ಬದಲಾಯಿಸಲಾಗಿದ್ದು, ಇದು ಪೊಲೀಸ್ ಸೇವೆಯನ್ನು ಹೆಚ್ಚು ಸುಲಭವಾಗಿ, ಪಾರದರ್ಶಕ ಮತ್ತು ಸಂವಹನಶೀಲವಾಗಿಸುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

‘ಹಲಾಫ್‌ನಾಮಾ’ ಬದಲಿಗೆ ‘ಶಪತ್ ಪತ್ರ’ (ಅಫಿಡವಿಟ್), ‘ದಫಾ’ ಬದಲಿಗೆ ‘ಧಾರಾ’ (ವಿಭಾಗ), ‘ಫರಿಯಾದಿ’ ಬದಲಿಗೆ ‘ಶಿಕಾಯತ್ಕರ್ತಾ’ (ದೂರುದಾರ) ಮತ್ತು ‘ಚಸ್ಮ್‌ದಿದ್’ ಬದಲಿಗೆ ‘ಪ್ರತ್ಯಕ್ಷದರ್ಶಿ’ ಪದಗಳನ್ನು ಬಳಸಲಾಗಿದೆ.

ಗೃಹ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರ ಸೂಚನೆಯ ಮೇರೆಗೆ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್‌ಪಿ) ಪತ್ರ ಬರೆದಿದ್ದು, ಪೊಲೀಸ್ ಕಾರ್ಯದಲ್ಲಿ ಬಳಸುವ ಕಠಿಣ ಮತ್ತು ಸಾಂಪ್ರದಾಯಿಕ ಪದಗಳನ್ನು ಸರಳ ಮತ್ತು ಸ್ಪಷ್ಟ ಹಿಂದಿ ಪದಗಳೊಂದಿಗೆ ಬದಲಾಯಿಸಬೇಕು ಎಂದು ಹೇಳಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಹಳೆಯ ಕಠಿಣ ಪದಗಳ ಬದಲಿಗೆ ಹಿಂದಿ ಪರ್ಯಾಯಗಳನ್ನು ಹೊಂದಿರುವ 109 ಪದಗಳ ಪಟ್ಟಿಯನ್ನು ಪತ್ರದೊಂದಿಗೆ ನೀಡಲಾಗಿದೆ ಎಂದು ಅದು ತಿಳಿಸಿದೆ. “ಪೊಲೀಸರ ಉದ್ದೇಶ ನಾಗರಿಕರಿಗೆ ಸಹಾಯ ಮಾಡುವುದು ಮತ್ತು ರಕ್ಷಿಸುವುದಾಗಿದ್ದರೆ, ಅದರ ಭಾಷೆ ನಾಗರಿಕರಿಗೆ ಅರ್ಥವಾಗುವ ಮತ್ತು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಿರಬೇಕು” ಉಪ ಮುಖ್ಯಮಂತ್ರಿ ಶರ್ಮಾ ಶುಕ್ರವಾರ ಹೇಳಿದ್ದಾರೆ.

“ಸಾಮಾನ್ಯ ನಾಗರಿಕರು ಯಾವುದೇ ದೂರು, ಅಪರಾಧ ಮಾಹಿತಿ ಅಥವಾ ಇತರ ಕೆಲಸಕ್ಕಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ, ಅವರು / ಅವಳು ಆಗಾಗ್ಗೆ ಎಫ್‌ಐಆರ್ ಅಥವಾ ಪೊಲೀಸರ ಇತರ ದಾಖಲೆಗಳಲ್ಲಿ ಬಳಸಲಾದ ಭಾಷೆಯ ಬಗ್ಗೆ ಗೊಂದಲಕ್ಕೊಳಗಾಗುತ್ತಾರೆ. ಇತರ ಭಾಷೆಗಳ ಪದಗಳು ಸಾಮಾನ್ಯ ಜನರಿಗೆ ತಿಳಿದಿಲ್ಲ, ಇದರಿಂದಾಗಿ ಅವರು ತಮ್ಮ ವಿಚಾರವನ್ನು ಸರಿಯಾಗಿ ವಿವರಿಸಲು ಅಥವಾ ಸಂಪೂರ್ಣ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಎಲ್ಲಾ ಅಧೀನ ಅಧಿಕಾರಿಗಳಿಗೆ ಬದಲಾವಣೆಯ ಬಗ್ಗೆ ಅರಿವು ಮೂಡಿಸಬೇಕು ಮತ್ತು ಆದೇಶವು ಕೇವಲ ಔಪಚಾರಿಕವಾಗಿ ಉಳಿಯಬಾರದು, ಬದಲಾಗಿ ಅದರ ನಿಜವಾದ ಅನುಷ್ಠಾನವನ್ನು ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆ ಮತ್ತು ಕಚೇರಿಗಳಲ್ಲಿ ಮಾಡಬೇಕೆಂದು ಪತ್ರದಲ್ಲಿ ನಿರ್ದೇಶಿಸಲಾಗಿದೆ ಎಂದು ಹೇಳಿಕೆಯು ತಿಳಿಸಿದೆ.

ಛತ್ತೀಸ್‌ಗಢ ಪೊಲೀಸರು ಈಗ ಕಾನೂನನ್ನು ಜಾರಿಗೊಳಿಸುವ ಸಂಸ್ಥೆಯಾಗುವುದಲ್ಲದೆ ಸಾರ್ವಜನಿಕ ಸಂವಹನ ಮಾಧ್ಯಮವೂ ಆಗಲಿದ್ದಾರೆ. ಭಾಷೆಯ ಈ ಸರಳೀಕರಣವು ದೂರುದಾರರು ತಮ್ಮ ಪ್ರಕರಣವನ್ನು ಸ್ಪಷ್ಟವಾಗಿ ಹೇಳಲು, ಕೇಳಲು ಮತ್ತು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದುವರೆಗೆ ವಕೀಲರು ಅಥವಾ ಪೊಲೀಸ್ ಸಿಬ್ಬಂದಿ ಮಾತ್ರ ಅರ್ಥಮಾಡಿಕೊಳ್ಳುತ್ತಿದ್ದ ಎಫ್‌ಐಆರ್‌ನಂತಹ ಕಾರ್ಯವಿಧಾನಗಳು ಈಗ ಸಾಮಾನ್ಯ ನಾಗರಿಕರಿಗೂ ಅರ್ಥವಾಗಲಿವೆ ಎಂದು ಅದು ಹೇಳಿದೆ. ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...