Homeಮುಖಪುಟಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಮುಂಬರುವ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ಕೈ ಬಿಡಬೇಕು ಎಂಬ ಬಿಜೆಪಿ ಬೇಡಿಕೆಯನ್ನು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಮತ್ತು ವಿರೋಧ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಟೀಕೆಗೆ ಗುರಿಯಾಗಿದೆ. ಬಿಜೆಪಿಯ ಈ ಬೇಡಿಕೆಯು ಸಾಂಸ್ಕೃತಿಕ ಅಸ್ಮಿತೆಯನ್ನು ಅಳಿಸುವಂತಿದೆ ಎಂದು ಈ ಪಕ್ಷಗಳು ಆರೋಪಿಸಿವೆ ಎಂದು ದಿ ಹಿಂದೂ ಶನಿವಾರ ವರದಿ ಮಾಡಿದೆ. ಜಮ್ಮು ಕಾಶ್ಮೀರ ಕಂದಾಯ

75 ಕಂದಾಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೋಮವಾರ ಹೊರಡಿಸಲಾದ ಅಧಿಸೂಚನೆಯ ಮೂಲಕ, ಜಮ್ಮು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಯು ಅಭ್ಯರ್ಥಿಗಳ “ಉರ್ದುವಿನಲ್ಲಿ ಕೆಲಸ ಮಾಡುವ ಅರಿವು” ಅನ್ನು ಒಂದು ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ ಎಂದು ತಿಳಿಸಿತ್ತು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಉರ್ದು ಭಾಷೆಯನ್ನು ಸಾಮಾನ್ಯವಾಗಿ ಕಂದಾಯ ದಾಖಲೆಗಳು, ಭೂ ವ್ಯವಹಾರಗಳು, ನ್ಯಾಯಾಲಯದ ತೀರ್ಪುಗಳು ಮತ್ತು ಕಾನೂನು ಪತ್ರವ್ಯವಹಾರಗಳಲ್ಲಿ ಬಳಸುವುದರಿಂದ, ಆದಾಯಕ್ಕೆ ಸಂಬಂಧಿಸಿದ ಹುದ್ದೆಗಳಿಗೆ ಭಾಷೆಯ ಮೂಲಭೂತ ತಿಳುವಳಿಕೆ ಅತ್ಯಗತ್ಯ ಎಂದು ಪರಿಗಣಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಬಿಜೆಪಿ ಶಾಸಕ ಸುನಿಲ್ ಶರ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸತ್ ಶರ್ಮಾ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಗುರುವಾರ ಭೇಟಿಯಾಗಿ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ತೆಗೆದುಹಾಕುವ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಕೋರಿದ್ದಾರೆ.

ಜಮ್ಮು ಕಾಶ್ಮೀರವು ಐದು ಅಧಿಕೃತ ಭಾಷೆಗಳನ್ನು ಹೊಂದಿರುವುದರಿಂದ, ಅವುಗಳಲ್ಲಿ ಒಂದನ್ನು ಮಾತ್ರ ಪರೀಕ್ಷೆಗೆ ಕಡ್ಡಾಯಗೊಳಿಸುವುದು “ಸಮಾನ ಅವಕಾಶ ಮತ್ತು ಆಡಳಿತಾತ್ಮಕ ನಿಷ್ಪಕ್ಷಪಾತದ ಸಾಂವಿಧಾನಿಕ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಸುನಿಲ್ ಶರ್ಮಾ ಸಿನ್ಹಾಗೆ ಹೇಳಿರುವುದಾಗಿ ವರದಿಯಾಗಿದೆ.

“ಇದು ಅನ್ಯಾಯದ ತಡೆಗೋಡೆಯನ್ನು ಸೃಷ್ಟಿಸುತ್ತದೆ. ವಿಶೇಷವಾಗಿ ಜಮ್ಮು ವಿಭಾಗದ ಆಕಾಂಕ್ಷಿಗಳಿಗೆ ಇದು ಅನನುಕೂಲಕರ  ಆಗಿದೆ” ಎಂದು ಅವರು ಹೇಳಿದ್ದಾಗಿ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅದಾಗ್ಯೂ, ಬಿಜೆಪಿಯ ಈ ಬೇಡಿಕೆಗೆ ಆಡಳಿತರೂಢ ನ್ಯಾಷನಲ್ ಕಾನ್ಫರೆನ್ಸ್‌ ಮತ್ತು ಮತ್ತು ವಿಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ವಿರೋಧಿಸಿವೆ.

ಜಮ್ಮು ಕಾಶ್ಮೀರದ ಆದಾಯ, ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಗಳಲ್ಲಿ ಉರ್ದುವಿನ ಪಾತ್ರವು “ಐತಿಹಾಸಿಕವಾಗಿ ಸ್ಥಾಪಿತವಾಗಿದೆ” ಮತ್ತು “ಯಾವುದೇ ರಾಜಕೀಯ ಅಥವಾ ಪಂಥೀಯ ಕಾರ್ಯಸೂಚಿಯಲ್ಲಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ತನ್ವೀರ್ ಸಾದಿಕ್ ಹೇಳಿರುವುದಾಗಿ ಶನಿವಾರ ದಿ ಹಿಂದೂ ಉಲ್ಲೇಖಿಸಿದೆ. ಭಾಷೆಯ ಪಾತ್ರವನ್ನು ದುರ್ಬಲಗೊಳಿಸುವುದು “ಐತಿಹಾಸಿಕವಾಗಿ ಅಪ್ರಾಮಾಣಿಕ” ಎಂದು ಅವರು ಹೇಳಿದ್ದು, ಇದು ಭಾರಿ ಆಡಳಿತಾತ್ಮಕ ಮತ್ತು ಕಾನೂನು ಅಡಚಣೆಗಳಿಗೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

“ಜಮ್ಮು ಕಾಶ್ಮೀರದ ಐತಿಹಾಸಿಕ ಸಂಸ್ಥೆಗಳು, ಸಾಂಸ್ಕೃತಿಕ ಗುರುತು ಮತ್ತು ಆಡಳಿತಾತ್ಮಕ ನಿರಂತರತೆಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಲ್ಪಾವಧಿಯ ಲಾಭಕ್ಕಾಗಿ ಉರ್ದುವಿನ ಸ್ಥಾನಮಾನವನ್ನು ರಾಜಕೀಯಗೊಳಿಸುವ ಅಥವಾ ಕೋಮುವಾದೀಕರಿಸುವ ಯಾವುದೇ ಪ್ರಯತ್ನವನ್ನು ನಾವು ತಿರಸ್ಕರಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ಪುಲ್ವಾಮಾ ಶಾಸಕ ವಹೀದ್-ಉರ್-ರೆಹಮಾನ್ ಪರ್ರಾ ಪ್ರತಿಕ್ರಿಯಿಸಿ, ಬಿಜೆಪಿಯ ಬೇಡಿಕೆಯನ್ನು ಜಮ್ಮು ಕಾಶ್ಮೀರದ ಶ್ರೀಮಂತ ದಾಖಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಳಿಸಿಹಾಕುವ ಅಪಾಯಕಾರಿ ನಡೆ ಎಂದು ಬಣ್ಣಿಸಿದ್ದಾರೆ.

“ಉರ್ದು ಒಂದು ಭಾಷೆ ಮಾತ್ರವಲ್ಲ, ಅದು ಈ ಪ್ರದೇಶದ ಪರಂಪರೆಯ ಪ್ರಮುಖ ಭಾಗವಾಗಿದೆ. ಅದನ್ನು ದುರ್ಬಲಗೊಳಿಸುವುದು ಸಮುದಾಯಗಳನ್ನು ವಿಭಜಿಸುತ್ತದೆ ಮತ್ತು ಸ್ಮರಣೆಯನ್ನು ಪುನಃ ಬರೆಯುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ. ಪಿಡಿಪಿ ಮತ್ತೊಬ್ಬ ಶಾಸಕ ನಯೀಮ್ ಅಖ್ತರ್, ಉರ್ದು ಶತಮಾನಗಳಿಂದ ಜಮ್ಮು ಕಾಶ್ಮೀರದ ಅಧಿಕೃತ ಭಾಷೆಯಾಗಿದೆ. ಜಮ್ಮು ಕಾಶ್ಮೀರ ಕಂದಾಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...