Homeಮುಖಪುಟದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

ದ್ವೇಷ ಭಾಷಣ ಆರೋಪ: ನ್ಯಾಯಾಧೀಶ ಯಾದವ್ ವಿರುದ್ಧ ಕ್ರಮಕ್ಕೆ ವಿಳಂಬ ಖಂಡಿಸಿದ ವಕೀಲರ ಗುಂಪು

- Advertisement -
- Advertisement -

ನವದೆಹಲಿ: 2024ರ ಡಿಸೆಂಬರ್ ನಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ವಿರುದ್ಧ ಆಂತರಿಕ ತನಿಖೆಯನ್ನು ಪ್ರಾರಂಭಿಸದ ಸುಪ್ರೀಂ ಕೋರ್ಟ್ ನಿರ್ಧಾರದ ಬಗ್ಗೆ ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಕಳವಳ ವ್ಯಕ್ತಪಡಿಸಿದೆ.

ರಾಜ್ಯಸಭಾ ಸಚಿವಾಲಯವು ಈ ವಿಷಯದಲ್ಲಿ ವಿಶೇಷ ನ್ಯಾಯವ್ಯಾಪ್ತಿಯನ್ನು ಪ್ರತಿಪಾದಿಸಿ ನ್ಯಾಯಮೂರ್ತಿ ಯಾದವ್ ವಿರುದ್ಧದ ತನಿಖೆಯನ್ನು ಸುಪ್ರೀಂ ಕೋರ್ಟ್ ಸ್ಥಗಿತಗೊಳಿಸಿದೆ ಎಂದು ವರದಿಗಳು ಸೂಚಿಸಿದ ನಂತರ   ಅಖಿಲ ಭಾರತ ನ್ಯಾಯವಾದಿಗಳ ಸಂಘ (ಎಐಎಲ್‌ಎಜೆ) ಶುಕ್ರವಾರದಂದು ಖಂಡಿಸಿವೆ.

ದ್ವೇಷ ಭಾಷಣವು ಭ್ರಾತೃತ್ವದ ವಿರುದ್ಧವಾಗಿದೆ ಮತ್ತು ನ್ಯಾಯಾಂಗವು ತನ್ನ ಶ್ರೇಣಿಯೊಳಗೆ ಅದನ್ನು ಸಹಿಸಬಾರದು ಎಂದು ಎಐಎಲ್‌ಎಜೆ ಹೇಳಿಕೆಯಲ್ಲಿ ಹೇಳಲಾಗಿದೆ.

ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯ”ದ ಕುರಿತು ಮಾತನಾಡಿದ ನ್ಯಾಯಮೂರ್ತಿ ಯಾದವ್, ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ ಆರೋಪ ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರಿಗೆ ಕ್ಷಮೆಯಾಚಿಸಲು ಸೂಚಿಸಿದೆ ಎಂದು ವರದಿಯಾಗಿದೆ. ಆದರೆ ಅವರು ಕ್ಷಮೆಯಾಚನೆಗೆ ನಿರಾಕರಿಸಿದ್ದಾರೆ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರರಿಂದ ರಾಜಕೀಯ ಬೆಂಬಲ ಇದೆ ಹೇಳಿಕೆಯಲ್ಲಿ ಆರೋಪಿಸಲಾಗಿದೆ.

2024ರ  ಡಿಸೆಂಬರ್ 13ರಂದು ಸಲ್ಲಿಸಲಾದ ದೋಷಾರೋಪಣೆ ಪ್ರಸ್ತಾವನೆಯನ್ನು ಅಂಗೀಕರಿಸದಿದ್ದಕ್ಕಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಎಐಎಲ್‌ಎಜೆ ಟೀಕಿಸಿದೆ ಮತ್ತು ಸಂಸತ್ತು ನ್ಯಾಯಾಧೀಶರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದೆ. ಆಂತರಿಕ ನ್ಯಾಯಾಂಗ ತನಿಖಾ ಪ್ರಕ್ರಿಯೆಯು ದೋಷಾರೋಪಣೆಗಿಂತ ಭಿನ್ನವಾಗಿದೆ ಮತ್ತು ಸ್ವತಂತ್ರವಾಗಿ ಮುಂದುವರಿಯಬೇಕಿತ್ತು ಎಂದು ಎಐಎಲ್‌ಎಜೆ ವಾದಿಸಿದೆ.

ಇದು ಕೇವಲ ವಿಳಂಬದ ಪ್ರಶ್ನೆಯಲ್ಲ, ಆದರೆ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ರಕ್ಷಿಸುವ ಕ್ರಿಯೆಯಾಗಿದೆ ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ. ಈ ವಿಳಂಬವು ವಿಭಜಕ ಮನಸ್ಥಿತಿ ಹೊಂದಿರುವ ಇತರ ನ್ಯಾಯಾಧೀಶರನ್ನು ಇದೇ ರೀತಿ ವರ್ತಿಸಲು ಪ್ರೇರೇಪಿಸಬಹುದು ಎಂದು ಸಂಘವು ಹೇಳಿಕೆಯಲ್ಲಿ ತಿಳಿಸಿದೆ.

ಈ ಬಿಕ್ಕಟ್ಟನ್ನು “ಪ್ರಜ್ಞಾಪೂರ್ವಕವಾದುದ್ದು” ಎಂದು ಕರೆದ ಎಐಎಲ್‌ಎಜೆ, ತನಿಖೆ ಮುಗಿಯುವವರೆಗೆ ನ್ಯಾಯಮೂರ್ತಿ ಯಾದವ್ ಅವರ ನ್ಯಾಯಾಂಗ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ನ್ಯಾಯಾಧೀಶರಿಂದ ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚನೆಗಾಗಿ ಸಂಘವು ತನ್ನ ಕರೆಯನ್ನು ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಅದರ ನಿಷ್ಪಕ್ಷಪಾತತೆಯ ಬಗ್ಗೆ ಸಾರ್ವಜನಿಕ ನಂಬಿಕೆ ಅಪಾಯದಲ್ಲಿದೆ ಎಂದು ಸಂಘವು ಎಚ್ಚರಿಸಿದೆ.

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ: ಏಳು ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...