Homeಮುಖಪುಟಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌'ಗೆ ತೆಲಂಗಾಣ ಸರ್ಕಾರದಿಂದ 'ಗದ್ದರ್' ಚಲನಚಿತ್ರ ಪ್ರಶಸ್ತಿ!

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

- Advertisement -
- Advertisement -

ಕೋಮು ಧ್ರುವೀಕರಣದ ನಿರೂಪಣೆಗಾಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದ ‘ರಜಾಕಾರ್: ದಿ ಸೈಲಂಟ್ ಜಿನೊಸೈಡ್ ಆಫ್ ಹೈದರಾಬಾದ್’ ಚಿತ್ರಕ್ಕೆ ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಶನಿವಾರ ಇತಿಹಾಸದ ಕುರಿತ ಅತ್ಯುತ್ತಮ ಚಲನಚಿತ್ರಕ್ಕೆ ನೀಡಲಾಗುವ ‘ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ’ಯನ್ನು ಪ್ರದಾನಿಸಿದೆ. 2024ರ ಈ ಚಿತ್ರವನ್ನು ತೆಲಂಗಾಣ ಬಿಜೆಪಿ ನಾಯಕ ಗೂಡೂರ್ ನಾರಾಯಣ ರೆಡ್ಡಿ ನಿರ್ಮಿಸಿದ್ದು, ಯಾಟಾ ಸತ್ಯನಾರಾಯಣ ನಿರ್ದೇಶಿಸಿದ್ದಾರೆ.

ತೆಲಂಗಾಣದ ಕ್ರಾಂತಿಕಾರಿ ಕವಿ ಗದ್ದರ್ ಹೆಸರಿನ ಈ ಪ್ರಶಸ್ತಿಯನ್ನು ಕಾಂಗ್ರೆಸ್ ಸರ್ಕಾರ 2025ರಲ್ಲಿ ಸ್ಥಾಪಿಸಿದ್ದು, ತೆಲುಗು ನಟಿ ಹಾಗೂ ಬಿಜೆಪಿ ನಾಯಕಿ ಜಯಸುಧಾ ಅವರು ರೇವಂತ್ ರೆಡ್ಡಿ ಸರ್ಕಾರ ರಚಿಸಿದ್ದ ಆಯ್ಕೆ ಸಮಿತಿಯ ಅಧ್ಯಕ್ಷೆಯಾಗಿದ್ದರು. ನಟ ಹಾಗೂ ಬಿಜೆಪಿಯ ಮಿತ್ರಪಕ್ಷ ಟಿಡಿಪಿಯ ಮಾಜಿ ಸಂಸದ ಮುರಳಿ ಮೋಹನ್ ಅವರೂ ಸಮಿತಿಯ ಸದಸ್ಯರಾಗಿದ್ದರು.

ರಜಾಕಾರ್ ಪರಿಸರ/ಪರಂಪರೆ/ಇತಿಹಾಸ ಕುರಿತು ಅತ್ಯುತ್ತಮ ಚಲನಚಿತ್ರ, ಭೀಮ್ಸ್ ಸೆಸಿರೊಲಿಯೊ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ಮತ್ತು ನಲ್ಲ ಶ್ರೀನು ಅವರಿಗೆ ಅತ್ಯುತ್ತಮ ಮೇಕಪ್ ಕಲಾವಿದ; ಹೀಗೆ ಮೂರು ತೆಲಂಗಾಣ ಗದ್ದರ್ ಪ್ರಶಸ್ತಿಗಳನ್ನು ಗೆದ್ದಿದೆ.

ಹಿಂದುತ್ವದ ಅಜೆಂಡಾವನ್ನು ಮುಂದುವರಿಸಲು ಮತ್ತು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ನಿರ್ಮಿಸಲಾದ ಪ್ರೊಪಗಂಡ ಚಿತ್ರ ಎಂದು ವ್ಯಾಪಕ ಟೀಕೆಗೊಳಗಾಗಿದ್ದ ‘ರಜಾಕಾರ್’ಗೆ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಶಸ್ತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷಗಳ ನಾಯಕರು ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ಚಿತ್ರವು ಭಾರತ ಒಕ್ಕೂಟದಲ್ಲಿ ಹಿಂದಿನ ಹೈದರಾಬಾದ್ ರಾಜ್ಯದ ವಿಲೀನದ ಹಿನ್ನೆಲೆಯನ್ನು ಹೊಂದಿದೆ. ರಜಾಕಾರರು ಭಾರತ ಒಕ್ಕೂಟದಲ್ಲಿ ವಿಲೀನಗೊಳ್ಳುವುದು ಇಷ್ಟವಿರದಿದ್ದ ನಿಝಾಮರ ಕ್ರಿಯಾಶೀಲ ಅರೆಸೇನಾ ಪಡೆಯಾಗಿದ್ದರು.

ತೆಲಂಗಾಣ ರೈತರ ಹೋರಾಟವನ್ನು ಹತ್ತಿಕ್ಕಲು ರಜಾಕಾರರನ್ನು ನಿಯೋಜಿಸಲಾಗಿತ್ತು ಮತ್ತು ಅವರು ಮುಸ್ಲಿಮರು ಸೇರಿದಂತೆ ದಬ್ಬಾಳಿಕೆಯ ನಿಝಾಮ್ ಆಡಳಿತದ ವಿರುದ್ಧ ಹೋರಾಡುತ್ತಿದ್ದವರ ವಿರುದ್ಧ ಹಲವಾರು ದೌರ್ಜನ್ಯಗಳನ್ನು ಎಸಗಿದ್ದರು.

ಇತ್ತೀಚಿನ ವರ್ಷಗಳಲ್ಲಿ ತೆಲಂಗಾಣ ಬಿಜೆಪಿಯು ರಾಜಕೀಯ ಲಾಭಕ್ಕಾಗಿ ರಜಾಕಾರರ ಸಂಕೀರ್ಣ ಇತಿಹಾಸವನ್ನು ತಪ್ಪಾಗಿ ನಿರೂಪಿಸಲು ಪ್ರಯತ್ನಿಸುತ್ತಿದೆ. ಬೆಜೆಪಿಯು ತೆಲಂಗಾಣ ರೈತ ಬಂಡಾಯದ ಸೂಕ್ಷ್ಮ ವ್ಯತ್ಯಾಸಗಳನ್ನು ಮತ್ತು ನಿಝಾಮರ ರಜಾಕಾರರು ಪ್ರಬಲ ಜಾತಿಗಳ ಭೂಮಾಲಿಕರೊಂದಿಗೆ ಸೇರಿಕೊಂಡು ಕೆಳಜಾತಿಗಳವರೇ ಹೆಚ್ಚಿದ್ದ ಕಾರ್ಮಿಕರ ಮಲೆ ನಡೆಸಿದ್ದ ದೌರ್ಜನ್ಯಗಳನ್ನು ಬದಿಗಿಟ್ಟು ಅದನ್ನು ಧಾರ್ಮಿಕ ಕಿರುಕುಳದ ನಿದರ್ಶನವನ್ನಾಗಿ ಚಿತ್ರಿಸುವ ಮೂಲಕ ಹಿಂದು-ಮಸ್ಲಿಮ್ ಬಿರುಕನ್ನು ಸೃಷ್ಟಿಸಲು ಯತ್ನಿಸುತ್ತಿದೆ.

ಆರಂಭದಲ್ಲಿ 2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆಯಾಗಬೇಕಿದ್ದ ರಜಾಕರ್ ಚಿತ್ರವು, ಇಡೀ ಮುಸ್ಲಿಂ ಸಮುದಾಯವನ್ನು ಖಳನಾಯಕರನ್ನಾಗಿ ಚಿತ್ರೀಕರಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

‘ಹಿಂದುತ್ವ ಸಿನಿಮಾ’ಗೆ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡುತ್ತಿರುವುದಕ್ಕೆ ಟೀಕೆ

ರಜಾಕಾರ್ ಚಿತ್ರಕ್ಕೆ ಪ್ರಶಸ್ತಿ ನೀಡುವ ನಿರ್ಧಾರಕ್ಕಾಗಿ ಮತ್ತು ತನ್ಮೂಲಕ ಚಿತ್ರದಲ್ಲಿನ ಮುಸ್ಲಿಮ ವಿರೋಧಿ ದೃಷ್ಟಿಕೋನಗಳನ್ನು ಮೌನವಾಗಿ ಅನುಮೋದಿಸಿದ್ದಕ್ಕಾಗಿ ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರತಿಪಕ್ಷ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ರಜಾಕರ್ ಚಿತ್ರದ ಸೋಗಿನಲ್ಲಿ ಹೈದರಾಬಾದ್ ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುವ ಬಿಜೆಪಿ ನಾಯಕರ ಪ್ರೊಪಗಂಡ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಿರುವುದು ಆಘಾತಕಾರಿಯಾಗಿದೆ. ತೆಲಂಗಾಣ ಕಾಂಗ್ರೆಸ್ ಮತ್ತು ಸಿಎಂ ರೇವಂತ್ ರೆಡ್ಡಿ ನಿರ್ದೇಶಕರ ಅಭಿಪ್ರಾಯಗಳನ್ನು ಅನುಮೋದಿಸುತ್ತಿದ್ದಾರೆ” ಎಂದು ಹೈದರಾಬಾದ್ ಮೂಲದ ನಾಗರಿಕ ಹಕ್ಕುಗಳ ಕಾರ್ಯಕರ್ತ ಎಸ್‌ಕ್ಯೂ ಮಸೂದ್ ಹೇಳಿದ್ದಾರೆ.

“ತೆಲಂಗಾಣ ರೈತ ಸಶಸ್ತ್ರ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಈ ಚಿತ್ರ ಅವಹೇಳನ ಮಾಡುತ್ತದೆ. ಭೂಮಾಲೀಕರು ಮತ್ತು ಜಮೀನ್ದಾರರ ವಿರುದ್ದದ ಭೂಮಿ, ಆಹಾರ ಮತ್ತು ಗುಲಾಮಗಿರಿಯಿಂದ ಸ್ವಾತಂತ್ರ್ಯಕ್ಕಾಗಿ ರೈತರು ಹೋರಾಟ ನಡೆಸಿದ್ದರು. ಆದರೆ, ರಜಾಕರ್ ಚಿತ್ರವು ಅದನ್ನು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಸಂಘರ್ಷ ಎಂದು ಚಿತ್ರಿಸಿದೆ” ಎಂದು ತೆಲಂಗಾಣದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ತಕಲ್ಲಪಲ್ಲಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.

ಮಜ್ಲಿಸ್ ಬಚಾವೋ ತೆಹ್ರೀಕ್ ವಕ್ತಾರ ಅಮ್ಜದುಲ್ಲಾ ಖಾನ್ ಅವರು ಕಾಂಗ್ರೆಸ್‌ನ ಜಾತ್ಯತೀತತೆ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೌನವನ್ನು ಪ್ರಶ್ನಿಸಿದ್ದಾರೆ.

‘ರಜಾಕರ್ ‘ಚಿತ್ರವು ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ಕೇರಳ ಸ್ಟೋರಿ’ ಪ್ರೊಪಗಂಡ ಚಿತ್ರಗಳ ವರ್ಗಕ್ಕೆ ಸೇರುತ್ತದೆ. ಇವೆರಡೂ, ಇತಿಹಾಸಲ್ಲಿ ಆಗಿ ಹೋದ ನೈಜ ಘಟನೆಗಳ ಸೋಗಿನಲ್ಲಿ ಇಡೀ ಭಾರತದ ಮುಸ್ಲಿಮರನ್ನು ಖಳನಾಯಕರಂತೆ ಚಿತ್ರಿಸುವ ಪ್ರಯತ್ನ ಮಾಡಿತ್ತು.

ಈ ಹಿಂದೆ ಇಂತಹ ಚಿತ್ರಗಳು ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳಿಂದ ಪ್ರಶಸ್ತಿಗಳು, ತೆರಿಗೆ ರಿಯಾಯಿತಿ ಮತ್ತು ಪಕ್ಷದ ನಾಯಕರಿಂದ ಪ್ರಶಂಸೆಯ ರೂಪದಲ್ಲಿ ಅನುಮೋದನೆ ಪಡೆದಿವೆ. ಆದರೆ, ಕೋಮು ಸಂಘರ್ಷಗಳನ್ನು ಪ್ರಚೋದಿಸುವ ಬಿಜೆಪಿಯನ್ನು ಆಗಾಗ್ಗೆ ಟೀಕಿಸುವ ಸಿಎಂ ರೇವಂತ್ ರೆಡ್ಡಿ ಅವರು ರಜಾಕರ್‌ಗೆ ಬೆಂಬಲ ನೀಡಿರುವುದು ಹಲವರಿಗೆ ಆಶ್ಚರ್ಯವನ್ನುಂಟು ಮಾಡಿದೆ.

ಜೂನ್ 14 ರಂದು ಹೈದರಾಬಾದ್‌ನ ಹೈಟೆಕ್ಸ್ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಅವರು ರಜಾಕರ್ ಚಿತ್ರದ ನಿರ್ಮಾಪಕ ಮತ್ತು ಬಿಜೆಪಿ ನಾಯಕ ಗುಡೂರ್ ನಾರಾಯಣ ರೆಡ್ಡಿ ಅವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಇತರ ನಾಯಕರಿಗೆ ಧನ್ಯವಾದ ಹೇಳಿದ ನಾರಾಯಣ ರೆಡ್ಡಿ, “ಅವರೆಲ್ಲರೂ ಇತಿಹಾಸವನ್ನು ಗೌರವಿಸಿದ್ದಾರೆ ಮತ್ತು ನಮ್ಮ ಪ್ರಯತ್ನಗಳನ್ನು ನಿರ್ಲಕ್ಷಿಸಿಲ್ಲ. ರಜಾಕರಂತಹ ಗುಂಪುಗಳು ಮತ್ತೆ ಕಾಣಿಸಿಕೊಳ್ಳದಂತೆ ನೋಡಿಕೊಳ್ಳಲು ನಾವು ಇತಿಹಾಸದ ಚಲನಚಿತ್ರವನ್ನು ಪ್ರಚಾರ ಮಾಡಲು ಸಮರ್ಪಿತರಾಗಿದ್ದೇವೆ… ಉದಾಹರಣೆಗೆ ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ಏನಾಯಿತು ಎಂಬುದನ್ನು ನಾವು ನೋಡಿದ್ದೇವೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ವಿವಾದ

ಗದ್ದರ್ ತೆಲಂಗಾಣ ಚಲನಚಿತ್ರ ಪ್ರಶಸ್ತಿಗಳ (ಜಿಟಿಎಫ್‌ಎ) ನಿಯಮಗಳ ಷರತ್ತು 9(a) ಪ್ರಕಾರ, ತೆಲಂಗಾಣ ಸರ್ಕಾರವು ಅಯ್ಕೆ ಸಮಿತಿಯನ್ನು ರಚಿಸಬೇಕಾಗಿತ್ತು. ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷರು ಪ್ರಶಸ್ತಿಗಳ ಆಯ್ಕೆಗೆ ಸದಸ್ಯ-ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ತೆಲಂಗಾಣ ಸರ್ಕಾರವು ಪ್ರಸಿದ್ಧ ತೆಲುಗು ನಟಿ ಮತ್ತು ರಾಜಕಾರಣಿ ಜಯಸುಧಾ ಅವರನ್ನು ಅಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಜಯಸುಧಾ, ನಂತರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಪಿಗೆ) ಗೆ ಸೇರಿದ್ದರು. ಆಗಸ್ಟ್ 2023ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಿಯಮಾವಳಿಗಳ 21ನೇ ಷರತ್ತು ಪ್ರಕಾರ, ಕೋಮು ಸಾಮರಸ್ಯವನ್ನು ಭಂಗಗೊಳಿಸುವ ವಿಷಯಗಳನ್ನು ಹೊಂದಿರುವ ಯಾವುದೇ ಚಲನಚಿತ್ರ ಶಿಫಾರಸ್ಸನ್ನು ಆಯ್ಕೆ ಸಮಿತಿ ಪರಿಗಣಿಸಬಾರದು.

ಪ್ರಶಸ್ತಿ ಪ್ರದಾನ ಸಮಾರಂಭದ ಒಂದು ದಿನ ಮೊದಲು ಜೂನ್ 13 ರಂದು, ಆಯ್ಕೆ ಸಮಿತಿಯ ರಚನೆ ಪ್ರಕ್ರಿಯೆಯ ಸಿಂಧುತ್ವವನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

“ಜಿಟಿಎಫ್‌ಎ ನಿಯಮಾವಳಿಗಳ ನಿಯಮ 9(ಎ) ಅಡಿಯಲ್ಲಿ ಎರಡು ಆಯ್ಕೆ ಸಮಿತಿಗಳನ್ನು ರಚಿಸಲಾಗಿದೆ ಮತ್ತು ಆಯ್ಕೆ ಸಮಿತಿಯ ಹಲವು ಸದಸ್ಯರು ಪ್ರಶಸ್ತಿ ವಿಜೇತ ಕೆಲವು ಚಿತ್ರಗಳಲ್ಲಿ ನೇರ ಹಿತಾಸಕ್ತಿಗಳನ್ನು ಹೊಂದಿದ್ದಾರೆ” ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನ್ಯಾಯಮೂರ್ತಿಗಳಾದ ಸ್ಯಾಮ್ ಕೋಶಿ ಮತ್ತು ನರಸಿಂಗ್ ರಾವ್ ನಂದಿಕೊಂಡ ಅವರ ಪೀಠವು ಪ್ರತಿವಾದಿಗಳಾದ ಜಿಟಿಎಫ್‌ಎ ಆಯ್ಕೆ ಸಮಿತಿ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದೆ.

ಸೌಜನ್ಯ : thenewsminute.com
https://naanugauri.com/hate-speech-allegations-lawyers-group-condemns-delay-in-action-against-judge-yadav/
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...