Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...