Homeಕರ್ನಾಟಕಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

- Advertisement -
- Advertisement -

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ಈ ಸಾವಿನ ನಂತರ ಜಿಲ್ಲಾಡಳಿತವು ಗುಡ್ಡ ಕುಸಿತಕ್ಕೆ ಒಳಗಾಗಬಹುದಾದ 88 ಪ್ರದೇಶಗಳ 21,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಿದೆ. ಜೊತೆಗೆ ಜಿಲ್ಲೆಯಾದ್ಯಂತ 135 ರಿಲೀಫ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಹಾಯಕರಾಗಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದೆವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕರಾರು ಪತ್ರ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ನಾನುಗೌರಿ.ಕಾಂಗೆ ಕಚೇರಿಯ ಮೂಲಗಳು ತಿಳಿಸಿವೆ. ಬಂಟ್ವಾಳ | ಭೂ ಕುಸಿತದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು ದಿನಗಳ ಇರಾನ್-ಇಸ್ರೇಲ್ ಸಂಘರ್ಷ: 238 ಜನರು ಸಾವು, 1,500ಕ್ಕೂ ಹೆಚ್ಚು ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....