Homeಕರ್ನಾಟಕಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ: ಕಾರಣ, ಪರಿಣಾಮಗಳೇನು?

- Advertisement -
- Advertisement -

ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸುವ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ, ಇಂದಿನಿಂದ (ಜೂ.16) ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಸ್ಥಗಿತಗೊಳ್ಳಲಿವೆ.

ವರದಿಗಳ ಪ್ರಕಾರ, ಹೈಕೋರ್ಟ್ ಆದೇಶದಂತೆ ಹಲವು ಬೈಕ್ ಟ್ಯಾಕ್ಸಿ ಸೇವಾ ಪೂರೈಕೆದಾರರು ತಮ್ಮ ಸೇವೆಯನ್ನು ಇಂದು (ಜೂನ್ 16 ಸೋಮವಾರ) ಸ್ಥಗಿತಗೊಳಿಸಿದ್ಧಾರೆ. ಇನ್ನೂ ಕೆಲ ಕಂಪನಿಗಳು ಸೇವೆ ಮುಂದುವರಿಸಿವೆ. ಕೆಲ ಪ್ರಯಾಣಿಕರು ಇಂದು ಬೆಳಿಗ್ಗೆ ಬೈಕ್ ಟ್ಯಾಕ್ಸಿ ಬುಕ್ ಮಾಡಿ ಪ್ರಯಾಣಿಸಿದ್ದಾರೆ. ಈ ಕಂಪನಿಗಳು ಕ್ರಮೇಣ ಸರ್ಕಾರ ಮತ್ತು ಕೋರ್ಟ್ ಆದೇಶ ಪಾಲಿಸುವ ಸಾಧ್ಯತೆ ಇದೆ.

ರ್ಯಾಪಿಡೋ, ಓಲಾ ಮತ್ತು ಊಬರ್ ಕಂಪನಿಗಳು ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿತ್ತು. ವಿದ್ಯಾರ್ಥಿಗಳು ಮತ್ತು ಬಡ, ಮಧ್ಯಮ ವರ್ಗದ ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ, ಇಚ್ಚಿಸಿದ ಸ್ಥಳಗಳಿಗೆ ತೆರಳಲು ಬೈಕ್ ಟ್ಯಾಕ್ಸಿ ನೆರವಾಗುತ್ತಿತ್ತು. ಇತರ ಟ್ಯಾಕ್ಸಿ ಚಾಲಕರಿಂದ, ಪ್ರಮುಖವಾಗಿ ಆಟೋ ಚಾಲಕರಿಂದ ಬಂದ ವಿರೋಧ, ಪ್ರಯಾಣಿಕರ ಸುರಕ್ಷತೆ ಮತ್ತು ಸಾರಿಗೆ ನಿಯಮಗಳು ಬೈಕ್ ಟ್ಯಾಕ್ಸಿ ನಿಷೇಧ ಆಗಲು ಪ್ರಮುಖ ಕಾರಣಗಳಾಗಿವೆ.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಕಾರಣಗಳು : 

  1. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ: ಕರ್ನಾಟಕ ಮೋಟಾರು ಕಾಯ್ದೆಯ ಪ್ರಕಾರ, ರಾಜ್ಯದಲ್ಲಿ ಬಿಳಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಖಾಸಗಿ ಬಳಕೆಗೆ ಸೀಮಿತವಾಗಿವೆ. ಅವುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವಂತಿಲ್ಲ. ಇಲ್ಲಿ ಬೈಕ್ ಖಾಸಗಿ ವಾಹನವಾದ್ದರಿಂದ, ಅದು ಮೋಟಾರು ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸುತ್ತದೆ ಎನ್ನಲಾಗಿದೆ.
  2. ಸುರಕ್ಷತಾ ಕಾಳಜಿಗಳು: ಇತರ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಹೋಲಿಸಿದರೆ ಕಟ್ಟುನಿಟ್ಟಾದ ನಿಯಮಗಳು ಮತ್ತು ಮೇಲ್ವಿಚಾರಣೆಯ ಕೊರತೆಯಿಂದಾಗಿ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು, ವಿಶೇಷವಾಗಿ ಮಹಿಳೆಯರಿಗೆ ಅಸುರಕ್ಷಿತವೆಂದು ಗುರುತಿಸಿದೆ.
  3. ಆಟೋ ಮತ್ತು ಕ್ಯಾಬ್ ಚಾಲಕರಿಂದ ವಿರೋಧ: ಆಟೋ-ರಿಕ್ಷಾ ಮತ್ತು ಕ್ಯಾಬ್ ಚಾಲಕರ-ಮಾಲಕರ ಸಂಘಗಳು ಬೈಕ್ ಟ್ಯಾಕ್ಸಿಗಳಿಗೆ ವಿರೋಧ ವ್ಯಕ್ತಪಡಿಸಿರುವುದು ಅವುಗಳು ನಿಷೇಧಕ್ಕೊಳಗಾಗಲು ಪ್ರಮುಖ ಕಾರಣವಾಗಿದೆ. ಬೈಕ್ ಟ್ಯಾಕ್ಸಿಗಳು ಪ್ರಯಾಣ ದರವನ್ನು ಕಡಿಮೆ ಮಾಡಿ ತಮ್ಮ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಆಟೋ ಚಾಲಕರು ವಾದಿಸಿದ್ದಾರೆ. ಆಟೋ ಚಾಲಕರ ಸಂಘಗಳು ಗಮನಾರ್ಹ ಪ್ರಭಾವವನ್ನು ಹೊಂದಿವೆ. ಅವುಗಳ ಪ್ರತಿಭಟನೆಗಳು ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿವೆ.
  4. ನಿಯಮಗಳ ಅಡೆ-ತಡೆ: ಗೋವಾದಂತಹ ಇತರ ಕೆಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಸಾರಿಗೆ ಕಾನೂನುಗಳ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ ಎಂದು ಕರ್ನಾಟಕ ಸಾರಿಗೆ ಇಲಾಖೆ ಒತ್ತಿ ಹೇಳಿದೆ.

ಹೈಕೋರ್ಟ್ ತೀರ್ಪು : ಜೂನ್ 13, 2025 ರಂದು, ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿಗಳ ಮೇಲಿನ ರಾಜ್ಯ ಸರ್ಕಾರದ ನಿಷೇಧವನ್ನು ತಡೆಯಲು ನಿರಾಕರಿಸಿದೆ. ಇದು ಜೂನ್ 16, 2025 ರಿಂದ ಸೇವೆಗಳನ್ನು ಸ್ಥಗಿತಗೊಳಿಸಲು ಕಾರಣವಾಗಿದೆ. ರ್ಯಾಪಿಡೊ, ಓಲಾ ಮತ್ತು ಉಬರ್ ಮೋಟೋದಂತಹ ಕಂಪನಿಗಳಿಗೆ ಯಾವುದೇ ಗ್ರೇಸ್ ಅವಧಿ ನೀಡದೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ನಿರ್ದೇಶಿಸಿದೆ.

ಕಾನೂನು ಕ್ರಮಗಳು: ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಾಗ ಕಟ್ಟುನಿಟ್ಟಿನ ಕಾನೂನು ಕ್ರಮಗಳ ಎಚ್ಚರಿಕೆ ನೀಡಿದೆ. ಇದರಲ್ಲಿ ವಾಹನ ಜಪ್ತಿ, ₹10,000 ವರೆಗೆ ದಂಡ ಮತ್ತು ಬೈಕ್ ಟ್ಯಾಕ್ಸಿ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುವ ನಿರ್ವಾಹಕರಿಗೆ ಸಂಭಾವ್ಯ ಜೈಲು ಶಿಕ್ಷೆಗಳು ಸೇರಿವೆ.

ಕಂಪನಿಗಳ ಪ್ರತಿಕ್ರಿಯೆ: ಪ್ರಮುಖ ಬೈಕ್ ಟ್ಯಾಕ್ಸಿ ಆಪರೇಟರ್ ಆಗಿರುವ ರಾಪಿಡೊ ಹೈಕೋರ್ಟ್ ಆದೇಶವನ್ನು ಪಾಲಿಸುವ ಮೂಲಕ ಜೂನ್ 16, 2025 ರಿಂದ ಕರ್ನಾಟಕದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಓಲಾ ಮತ್ತು ಉಬರ್ ಮೋಟೋ ಕೂಡ ಇದೇ ರೀತಿಯ ಘೋಷಣೆಗಳನ್ನು ಮಾಡಿವೆ ಎಂದು ವರದಿಗಳು ಹೇಳಿವೆ.

ನಿಷೇಧದ ಪರಿಣಾಮಗಳು : ಬೈಕ್ ಟ್ಯಾಕ್ಸಿಯ ನಿಷೇಧದ ಪರಿಣಾಮಗಳನ್ನು ಬಹು ಆಯಾಮಗಳಲ್ಲಿ ನೋಡಬಹುದು. ಇದು ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದವರು, ಸೇವಾ ಪೂರೈಕೆ ಕಂಪನಿಗಳು ಮತ್ತು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.

ಪ್ರಯಾಣಿಕರು : ಒಬ್ಬರೇ ಎಲ್ಲಾದರು ಪ್ರಯಾಣಿಸುವುದಾದರೆ ಆಟೋದ ಅವಶ್ಯಕತೆ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಜನರು ಬೈಕ್ ಟ್ಯಾಕ್ಸಿ ಮೂಲಕ ಪ್ರಯಾಣಿಸುತ್ತಿದ್ದರು. ಇದರಿಂದ ಕಡಿಮೆ ಖರ್ಚಿನಲ್ಲಿ, ಅತ್ಯಂತ ವೇಗವಾಗಿ ನಿಗದಿತ ಸ್ತಳಗಳಿಗೆ ತೆರಳಲು ಜನರಿಗೆ ಸಹಾಯವಾಗುತ್ತಿತ್ತು.

ಒಬ್ಬರೇ ಪ್ರಯಾಣಿಸುವಾಗ ಆಟೋ ಆದರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಅಲ್ಲದೆ ಬೈಕ್‌ಗೆ ಹೋಲಿಸಿದರೆ ಹೆಚ್ಚಿನ ಇಂಧನವು ಖರ್ಚಾಗುತ್ತದೆ. ಈ ಎರಡೂ ಕೂಡ ಬೈಕ್ ಟ್ಯಾಕ್ಸಿಯಿಂದ ಉಳಿತಾಯ ಆಗುತ್ತಿತ್ತು.

ಚಾಲಕರು/ ರೈಡರ್ಸ್: ಬೈಕ್ ಟ್ಯಾಕ್ಸಿ ಚಾಲನೆಯನ್ನು ಅನೇಕ ವಿದ್ಯಾರ್ಥಿಗಳು ಸೇರಿದಂತೆ ಬಡ, ಮಧ್ಯಮ ವರ್ಗದ ಯುವಜನರು ತಮ್ಮ ಪ್ರಾಥಮಿಕ ಅಥವಾ ಪೂರಕ ಆದಾಯದ ಮೂಲವಾಗಿ ಅವಲಂಬಿಸಿದ್ದರು. ಅವರು ಉದ್ಯೋಗ ನಷ್ಟವನ್ನು ಎದುರಿಸಲಿದ್ದಾರೆ. ಈ ನಿಷೇಧವು ಅವರ ಜೀವನೋಪಾಯವನ್ನು ಅಸ್ತವ್ಯಸ್ತಗೊಳಿಸಲಿದೆ. ಇದು ಈಗಾಗಲೇ ಆಕ್ರೋಶಕ್ಕೆ ಕಾರಣವಾಗಿದೆ.

“ಪದವಿ ಮುಗಿಸಿ ಬೆಂಗಳೂರು ಮಹಾನಗರಕ್ಕೆ ಕೆಲಸ ಹುಡುಕಲು ಬಂದ ನನಗೆ ಆರಂಭದಲ್ಲಿ ಎಷ್ಟೇ ಹುಡುಕಿದರೂ ಕೆಲಸ ಸಿಕ್ಕಿರಲಿಲ್ಲ. ಆದರೆ, ನಾನು ಉಳಿದುಕೊಂಡಿದ್ದ ರೂಮ್ ಬಾಡಿಗೆ, ಊಟ ತಿಂಡಿ ಖರ್ಚು ಮತ್ತು ಬಸ್ ಖರ್ಚಿಗೆ ಹಣ ಬೇಕಿತ್ತು. ಆಗ ನಾನು ನನ್ನಲ್ಲಿದ್ದ ಬೈಕ್‌ನಲ್ಲಿ ರ್ಯಾಪಿಡೋ ಸೇವೆ ನೀಡಿ ಖರ್ಚು ನಿಭಾಯಿಸುತ್ತಿದ್ದೆ” ಎನ್ನುತ್ತಾರೆ ಚಿಕ್ಕಮಗಳೂರು ಮೂಲದ ಆರ್‌.ಟಿ ನಗರದಲ್ಲಿ ವಾಸ್ತವ್ಯ ಇರುವ ರಾಶಿದ್ ಅಹ್ಮದ್.

“ಬೆಂಗಳೂರಿನ ನೆಲಮಂಗಲ ಕ್ರಾಸ್ ಬಳಿ ಇದ್ದ ನನ್ನ ಸಣ್ಣ ಹೋಟೆಲ್ ನಷ್ಟದಿಂದ ಮುಚ್ಚಿದಾಗ, ಅತ್ತ ಮನೆಗೂ ಹೋಗಲಾಗದೆ, ಇತ್ತ ಖರ್ಚಿಗೂ ಹಣವಿಲ್ಲದೆ ಚಿಂತೆಯಲ್ಲಿ ಕುಳಿತಿದ್ದಾಗ ನನಗೆ ರ್ಯಾಪಿಡೋ ಬೈಕ್ ಟ್ಯಾಕ್ಸಿ ಜೀವನ ನಡೆಸಲು ನೆರವಾಗಿತ್ತು. ಪ್ರಸ್ತುತ ಅದನ್ನೇ ನಂಬಿ ಕುಳಿತಿದ್ದೇನೆ. ಈಗ ಬಂದಿರುವ ನಿಷೇಧ ಸುದ್ದಿಯಿಂದ ಮತ್ತೆ ನಾನು ಸಂಕಷ್ಟ ಅನುಭವಿಸಬೇಕಿದೆ. ಮುಂದೇನು ಗೊತ್ತಿಲ್ಲ” ಎಂದು ಮಂಗಳೂರು ಮೂಲದ ಪ್ರಸ್ತುತ ಜಯಮಹಲ್‌ನಲ್ಲಿ ನೆಲೆಸಿರುವ ಝೈನುದ್ದೀನ್ ಆತಂಕ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಇಕೋ ಸಿಸ್ಟಮ್ : ಈ ನಿಷೇಧವು ಆಟೋ-ರಿಕ್ಷಾಗಳು ಮತ್ತು ಕ್ಯಾಬ್‌ಗಳಿಗೆ ಬೇಡಿಕೆಯನ್ನು ಹೆಚ್ಚಿಸಬಹುದು. ಚಾಲಕರಿಗೆ ಪ್ರಯೋಜನವನ್ನು ನೀಡಬಹುದು. ಆದರೆ ಪ್ರಯಾಣಿಕರು ಹೆಚ್ಚಿನ ದರ ಪಾವತಿಸಬೇಕಿದೆ ಮತ್ತು ದೀರ್ಘ ಸಮಯ ಕಾಯಬೇಕಾಗುತ್ತದೆ.

ಕಂಪನಿಗಳು: ಬೈಕ್ ಟ್ಯಾಕ್ಸಿ ನಿಷೇಧದಿಂದ ರಾಪಿಡೊ, ಓಲಾ ಮತ್ತು ಉಬರ್‌ನಂತಹ ಕಂಪನಿಗಳು ಪ್ರಮುಖ ಮಾರುಕಟ್ಟೆಯಾದ ಕರ್ನಾಟಕದಲ್ಲಿ ಕಾರ್ಯಾಚರಣೆ ಮತ್ತು ಆರ್ಥಿಕ ಹಿನ್ನಡೆಯನ್ನು ಎದುರಿಸಬಹುದು. ಈ ಕಂಪನಿಗಳು ಭವಿಷ್ಯದಲ್ಲಿ ಇತರ ಸೇವೆಗಳಿಗೆ ಬದಲಾಯಿಸಿಕೊಳ್ಳಬೇಕಿದೆ ಅಥವಾ ನಿಷೇಧವನ್ನು ಕಾನೂನುಬದ್ಧವಾಗಿ ಪ್ರಶ್ನಿಸಬೇಕಾಗಿದೆ.

ಜನರ ಅಭಿಪ್ರಾಯ : ಬೈಕ್ ಟ್ಯಾಕ್ಸಿಗಳ ನಿಷೇಧದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇತರ ರೀತಿಯಲ್ಲಿ ಜನರಿಂದ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಹಲವರು ನಿಷೇಧವನ್ನು ವಿರೋಧಿಸಿದರೆ, ಕೆಲವರು ಸುರಕ್ಷತೆ ಮತ್ತು ಇತರ ಕಾರಣಗಳನ್ನು ನೀಡಿ ಸಮರ್ಥಿಸಿಕೊಂಡಿದ್ದಾರೆ.

ಹಿಂದಿನ ಪ್ರತಿಭಟನೆಗಳು: ಆಟೋ ಚಾಲಕರ ಸಂಘಗಳು ಕಳೆದ ಕೆಲ ವರ್ಷಗಳಿಂದ ಬೈಕ್ ಟ್ಯಾಕ್ಸಿಗಳ ವಿರುದ್ಧ ಧ್ವನಿ ಎತ್ತುತ್ತಿವೆ. 2023ರ ಬಳಿಕ ಆಗಾಗ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಜುಲೈ 2024ರಲ್ಲಿ ಕರ್ನಾಟಕ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ 133 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿತ್ತು ಎಂದು ವರದಿಯಾಗಿದೆ. ಹಲವೆಡೆ ಆಟೋ ಚಾಲಕರು ಬೈಕ್ ಟ್ಯಾಕ್ಸಿ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಮತ್ತು ಹಲ್ಲೆಗೆ ಮುಂದಾದ ಉದಾಹರಣೆಗಳಿವೆ. ಸರ್ಕಾರ ಹಲವು ಬಾರಿ ಆಟೋ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರೂ, ಹಗ್ಗಜಗ್ಗಾಟ ಮುಂದುವರಿದಿತ್ತು.

ಇತರ ರಾಜ್ಯಗಳೊಂದಿಗೆ ಹೋಲಿಕೆ: ಗೋವಾದಂತಹ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾನೂನುಬದ್ಧವಾಗಿವೆ. ಅಲ್ಲಿ ನಿಯಮಗಳು ಅವುಗಳ ಕಾರ್ಯಾಚರಣೆಯನ್ನು ಅನುಮತಿಸುತ್ತವೆ. ಕರ್ನಾಟಕದಲ್ಲಿ ಬೈಕ್ಸ್ ಟ್ಯಾಕ್ಸಿಗೆ ಅವಕಾಶವಿಲ್ಲ. ಇದರ ಹಿಂದೆ ಆಟೋ ಚಾಲಕರ ಸಂಘಗಳ ಪ್ರಭಾವ ಇದೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

ಬೈಕ್ ಟ್ಯಾಕ್ಸಿ ನಿಷೇಧದ ಹಿನ್ನೆಲೆ, ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಕರ್ನಾಟಕದಾದ್ಯಂತ ದೈನಂದಿನ ಆದಾಯಕ್ಕಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಅವಲಂಬಿಸಿರುವ ಒಂದು ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರ ಜೀವನೋಪಾಯವನ್ನು ರಕ್ಷಿಸಲು ಮಧ್ಯಪ್ರವೇಶಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ಸಂಪೂರ್ಣ ನಿಷೇಧದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ 1,00,000 ಕ್ಕೂ ಹೆಚ್ಚು ಗಿಗ್ ಕಾರ್ಮಿಕರು ಸಂಪಾದಿಸಿ ತಮ್ಮ ಕುಟುಂಬವನ್ನು ಪೋಷಿಸುವ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಈ ನಿಷೇಧವನ್ನು ತೆಗೆದುಹಾಕಿ ಅವರ ದೈನಂದಿನ ಸಂಪಾದನೆಯನ್ನು ಘನತೆಯಿಂದ ಮಾಡಲು ಸಹಾಯ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕುಸಿದ ಮಾವು ದರ; ರೈತರ ನೆರವಿಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...