Homeಕರ್ನಾಟಕದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; 'ಸಂಯುಕ್ತ ಹೋರಾಟ'ದಿಂದ 'ದೇವನಹಳ್ಳಿ ಚಲೋ'ಗೆ ಕರೆ

ದೇವನಹಳ್ಳಿ: ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ‘ಸಂಯುಕ್ತ ಹೋರಾಟ’ದಿಂದ ‘ದೇವನಹಳ್ಳಿ ಚಲೋ’ಗೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 1180 ದಿನಗಳಿಂದ (ಸುಮಾರು ನಾಲ್ಕು ವರ್ಷ) ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಂಘರ್ಷದ ಸ್ಥಿತಿಗೆ ತಲುಪಿದೆ. ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ವಿರೋಧಿಸಿ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಜೂನ್‌ 25 ರಂದು ‘ದೇವನಹಳ್ಳಿ ಚಲೋ’ ಹೋರಾಟಕ್ಕೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಹೋರಾಟದ ಮುಖಂಡರು, “13 ಗ್ರಾಮಗಳ ರೈತರು ನಾಡ ಕಚೇರಿ ಮುಂದೆ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡಾ 80 ರಷ್ಟು ರೈತರು ಲಿಖಿತವಾಗಿ ಭೂಸ್ವಾಧೀನಕ್ಕೆ ತಮ್ಮ ಅಸಮೃತಿ ಹಾಗೂ ವಿರೋಧ ಸ್ಪಷ್ಟವಾಗಿ ವ್ಯಕ್ತಪಡಿಸಿದ್ದರೂ, ಬಲವಂತದ ಭೂಸ್ವಾಧೀನಕ್ಕೆ ಕ್ರಮವಹಿಸಿರುವುದು, ಭೂ ಸ್ವಾಧೀನ ಕಾಯ್ದೆ-2013 ರ ಸ್ಪಷ್ಠ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

ಭೂ ಸ್ವಾಧೀನ ಕೈಬಿಡುವಂತೆ ಬೆಂಗಳೂರಿನ ಫ್ರೀಂಡಂ ಪಾರ್ಕಿಲ್ಲಿ ರೈತರು ನಡೆಸಿದ ಪ್ರತಿಭಟನಾ ಸ್ಥಳಗಳಿಗೆ ಈಗಿನ ಮುಖ್ಯಮಂತ್ರಿ, ಹಿಂದಿನ ವಿರೋಧ ಪಕ್ಷದ ನಾಯಕರಾಗಿ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ತಾವು ಅಧಿಕಾರಕ್ಕೆ ಬಂದರೆ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ರದ್ದುಪಡಿಸುವುದಾಗಿ ಸಾರ್ವಜನಿಕ ಘೋಷಣೆ ಮಾಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಈಗ ಉಸ್ತುವಾರಿ ಸಚಿವರಾಗಿರುವ ಕೆ.ಎಚ್‌. ಮುನಿಯಪ್ಪ ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಬಲವಂತವಾಗಿ ಭೂ ಸ್ವಾಧೀನಕ್ಕೆ ಅವಕಾಶ ನೀಡುವುದಿಲ್ಲ ಎಂದು ಈ ರೈತರ ಮತ ಕೇಳಿದ್ದರು. ಆದರೆ, ಈ ಇಬ್ಬರೂ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ತಮ್ಮ ವಚನಕ್ಕೆ ವಿರುದ್ಧವಾಗಿ ವರ್ತಿಸುವ ಮೂಲಕ ವಚನಭ್ರಷ್ಟರು ಎಂದು ಸಾಬೀತು ಮಾಡಿಕೊಂಡಿದ್ದಾರೆ, ಇದು ಸಾರ್ವಜನಿಕ ಹುದ್ದೆಗೆ ಮತ್ತು ನಡವಳಿಕೆಗೆ ಯೋಗ್ಯವಲ್ಲದ್ದು ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಇತ್ತೀಚಿಗಿನ ಸಭೆಯೂ ಸೇರಿದಂತೆ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಪ್ರತಿಭಟನಾ ಒತ್ತಡ ಹೆಚ್ಚಿದ ಸಂದರ್ಭದಲ್ಲೆಲ್ಲಾ ಮುಖ್ಯಮಂತ್ರಿ ನೇತೃತ್ವದಲ್ಲಿ ನಾಲ್ಕಾರು ಸಭೆಗಳು, ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಹತ್ತಾರು ಸಭೆಗಳು ಅಲ್ಲದೇ, ಸ್ವತಃ ಉಸ್ತುವಾರಿ ಮಂತ್ರಿ ಹತ್ತಾರು ಬಾರಿ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟು ರೈತರ ಪರವಾಗಿ ತೀರ್ಮಾನ ಮಾಡುವುದಾಗಿ ಹೇಳಿ ಚಪ್ಪಾಳೆ ಗಿಟ್ಟಿಸಿಕೊ೦ಡಿದ್ದಾರೆ. ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆ ಇಲ್ಲದೇ ಭೂಸ್ವಾಧೀನ ಮುಂದುವರೆಸುವುದಿಲ್ಲ ಎಂದು ಸಾರ್ವಜನಿಕವಾಗಿ ಹಲವಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಭರವಸೆ ನೀಡಿ ಒಳಗೊಳಗೆ ಭೂಸ್ವಾಧೀನದ ಪ್ರಕ್ರಿಯೆ ಮುಂದುವರೆಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರೈತರಲ್ಲಿ ಹತಾಶೆ-ನಿರಾಶೆ ಉ೦ಟು ಮಾಡಿ, ಒಡಕು ಉ೦ಟು ಮಾಡುವ ಹೀನ ಕುತಂತ್ರವಲ್ಲದೇ ಬೇರೇನೂ ಅಲ್ಲ ಎಂದು ಹೋರಾಟಗಾರರು ಕಿಡಿಕಾರಿದ್ದಾರೆ.

ಸಾರ್ವಜನಿಕವಾಗಿ ಒಂದು ಮುಖ ತೋರಿ, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಇನ್ನೊಂದು ರೀತಿಯಲ್ಲಿ ಆದೇಶ ನೀಡುವ ಮೂಲಕ ರೈತ ಸಮುದಾಯವನ್ನು ಹಾಗೂ ರೈತ ಹೋರಾಟವನ್ನು ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಅಪಮಾನಿಸಿದೆ. ಚನ್ನರಾಯಪಟ್ಟಣ ಹೋಬಳಿ ರೈತರ ಧರಣಿ ಸ್ಥಳಕ್ಕೆ ಈ ನಾಲ್ಕು ವರ್ಷಗಳಲ್ಲಿ ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷರು, ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕರೂ ಆಗಿರುವ ಡಾ.ಅಶೋಕ್‌ ಧವಳೆ, ಅಖಿಲ ಭಾರತ ಕಿಸಾನ್‌ ಸಭಾದ ಅಖಿಲ ಭಾರತ ಹಣಕಾಸು ಕಾರ್ಯದರ್ಶಿ ಮಾಜಿ ಶಾಸಕ ಕೃಷ್ಣಪ್ರಸಾದ್‌, ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ರಾಷ್ಟ್ರೀಯ ರೈತ ನೇತಾರರು ಭೇಟಿ ಕೊಟ್ಟು ಹೋರಾಟಕ್ಕೆ ಬೆ೦ಬಲ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದ ಎಲ್ಲ ರೈತ ಚಳವಳಿಗಳ ಹಾಗೂ ಬುದ್ಧಿಜೀವಿ, ಸಾಹಿತಿಗಳ ಬೆ೦ಬಲ ಮತ್ತು ಅನುಕಂಪ ಈ ಭೂ ಸ್ವಾಧೀನ ವಿರೋಧಿ ರೈತರ ಮೇಲೆ ಇದೆ ಎಂದು ವಿವರಿಸಿದರು.

ತಮ್ಮ ತೀವ್ರ ಅನಾರೋಗ್ಯದ ನಡುವೆಯೂ ಈ ರೈತರ ಹೋರಾಟಕ್ಕೆ ನೇತೃತ್ವ ನೀಡುತ್ತಿದ್ದ ಜಿ.ಸಿ. ಬಯ್ಯಾರೆಡ್ಡಿರವರು ಈ ಹೋರಾಟದ ಬೇಡಿಕೆಯನ್ನು ಪುನರುಚರಿಸುತ್ತಾ ಮರಣವನ್ನಪ್ಪಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಹುರಾಷ್ಟ್ರೀಯ ಸಂಸ್ಥೆಗಳು, ರಿಯಲ್‌ ಎಸ್ಟೇಟ್‌ ಮಾಫಿಯಾಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮಾಡೇತೀರುವ ಹಠ ಸರ್ವಾಧಿಕಾರಿ ಮನೋಭಾವದ್ದು. ಇಂತಹ ಭೂಸ್ವಾಧೀನ ವಿರೋಧಿ ಹೋರಾಟವನ್ನು ರಾಜ್ಯಾದ್ಯಂತ ಸಂಪೂರ್ಣ ಮಟ್ಟ ಹಾಕುವ ಫ್ಯಾಸಿಸ್ಟ್‌ ದುರುದ್ದೇಶದ್ದು. ಈ ದುರುದ್ದೇಶ ಈಡೇರುವುದಕ್ಕೆ ರಾಜ್ಯದ ರೈತ ಸಮುದಾಯ ಅವಕಾಶ ನೀಡುವುದಿಲ್ಲ. ಚನ್ನರಾಯಪಟ್ಟಣ ರೈತರ ಹೋರಾಟಕ್ಕೆ ಬೆ೦ಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯದ ಎಲ್ಲಾ ಭೂಸ್ವಾಧೀನದ ಭೀತಿ ಎದುರಿಸುತ್ತಿರುವ ರೈತರನ್ನು ಒಗ್ಗೂಡಿಸಿ ಚನ್ನರಾಯಪಟ್ಟಣ ಭೂ ಸ್ವಾಧೀನಕ್ಕೆ ಪ್ರಬಲ ವಿರೋಧವನ್ನು ಇನ್ನೂ ಹೆಚ್ಚಿನ ಹೋರಾಟದ ಶಕ್ತಿಯೊಂದಿಗೆ ಮುಂದುವರೆಸಿ, ರೈತ ಹೋರಾಟ ಜಯಗಳಿಸುವಂತೆ ಮಾಡಲು ಜೂನ್‌ 25, 2025 ರಂದು ದೇವನಹಳ್ಳಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, ರೈತ ಸಂಘದ ಮುಖಂಡರಾದ ವೀರಸಂಗಯ್ಯ, ಪ್ರಾಂತ ರೈತ ಸಂಘದ ಯಶವಂತ್ ಸೇರಿದಂತೆ ಸಂಯುಕ್ತ ಹೋರಾಟದ ಹಲವರು ಇದ್ದರು.

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಆಡಳಿತದಲ್ಲಿ ವಿಪರೀತ ಭ್ರಷ್ಟಾಚಾರ, ಶಾಸಕ ರಾಜೇಗೌಡ ವಿರುದ್ಧ ಪ್ರತಿಭಟನೆ; ಕೆ.ಎಲ್.ಅಶೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...