Homeಮುಖಪುಟಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

- Advertisement -
- Advertisement -

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು.

“ಮಾತನಾಡುವ ಭಾಷೆಯ ಕಾರಣಕ್ಕಾಗಿ ನಿಜವಾದ ಭಾರತೀಯ ನಾಗರಿಕರನ್ನು ಬಾಂಗ್ಲಾದೇಶಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಬಂಗಾಳಿ, ಗುಜರಾತಿ, ಮರಾಠಿ, ಹಿಂದಿ ಭಾಷೆಗಳಲ್ಲಿ ಮಾತನಾಡಲು ಹೆಮ್ಮೆಪಡಬೇಕು. ನೀವು ನನ್ನನ್ನು ಕೇಳಿದರೆ, ನಾನು ಈ ಎಲ್ಲಾ ಭಾಷೆಗಳಲ್ಲಿ ಮಾತನಾಡಬಲ್ಲೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಂದೆಡೆ, ನೀವು ಮಾತನಾಡುವ ಮಾತಿಗಾಗಿ ಭಾರತೀಯರನ್ನು ಬಾಂಗ್ಲಾದೇಶಿಗಳು ಎಂದು ಬ್ರಾಂಡ್ ಮಾಡುತ್ತಿದ್ದೀರಿ ಮತ್ತು ಮತ್ತೊಂದೆಡೆ, ಮತದಾರರ ಗುರುತಿನ ಚೀಟಿ, ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಈ ಜನರಿಗೆ ನಿಮ್ಮ ರಾಜ್ಯಗಳಲ್ಲಿ ಜೀವನೋಪಾಯವನ್ನು ಗಳಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದೀರಿ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಶಾಸಕರು ಪ್ರತಿಭಟನೆ ಮುಂದಾಗಿ ಎದ್ದು ನಿಂತು ಘೋಷಣೆಗಳನ್ನು ಕೂಗಿದ್ದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿಗಳು ತಮ್ಮ ಭಾಷಣವನ್ನು ನಿಲ್ಲಿಸದೆ ಮುಂದುವರಿಸಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಕೇಂದ್ರದ ನಿಧಿಯನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿದ ಸಿಎಂ, ಬಿಜೆಪಿಯ ಮಲತಾಯಿ ಧೋರಣೆಯ ಹೊರತಾಗಿಯೂ, ರಾಜ್ಯವು ಪಾಠಶ್ರೀ ಅಡಿಯಲ್ಲಿ 69,000 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ ಮತ್ತು 11,000 ಕೋಟಿ ರೂ.ಗಳೊಂದಿಗೆ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

“ಬಂಗಾಳವು ರಸ್ತೆ ಮತ್ತು ಗ್ರಾಮೀಣ ವಸತಿ ಯೋಜನೆಗಳ ಶ್ರೇಯಾಂಕದಲ್ಲಿ ಸತತ ಐದು ಬಾರಿ ಅಗ್ರಸ್ಥಾನದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ರಾಜ್ಯದ ಜನರು ಸರಾಸರಿ 50 ದಿನಗಳ ಉದ್ಯೋಗವನ್ನು ಪಡೆಯುತ್ತಿದ್ದಾರೆ ಮತ್ತು ಅವರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಒಂದೆಡೆ ನೀವು ಬಂಗಾಳದ ಬಡ ಜನರನ್ನು ವಂಚಿತಗೊಳಿಸುತ್ತಿದ್ದರೆ, ಮತ್ತೊಂದೆಡೆ, ನಿಮ್ಮ ರಾಜ್ಯಗಳಲ್ಲಿ ವಿವಿಧ ಅಪಘಾತಗಳಲ್ಲಿ ಸಾವಿನ ಮೆರವಣಿಗೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಸಾಮಾಜಿಕ ಕಲ್ಯಾಣ ನಿರ್ದೇಶನಗಳಿಗೆ ಅನುಗುಣವಾಗಿ, ಪರಿಶಿಷ್ಟ ಜಾತಿಗಳು (ಶೇಕಡಾ 26), ಪರಿಶಿಷ್ಟ ಪಂಗಡಗಳು (ಶೇಕಡಾ 6), ಹಿಂದುಳಿದ ಜಾತಿಗಳು ಮತ್ತು ಮುಸ್ಲಿಮರ (ಶೇಕಡಾ 30) ಹಿತಾಸಕ್ತಿಗಳನ್ನು ಕಾಪಾಡಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

“ನಮ್ಮ ಹಾದಿಯಿಂದ ನಮ್ಮನ್ನು ಹಳಿತಪ್ಪಿಸಲು ಅಥವಾ ನಮ್ಮ ಕನಸುಗಳನ್ನು ನನಸಾಗಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಎಸ್‌ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ “ಶಿಕ್ಷಣ ವಲಯದಲ್ಲಿನ ಬಿಕ್ಕಟ್ಟು” ಕುರಿತು ಮುಂದೂಡಿಕೆ ನಿರ್ಣಯವನ್ನು ಸ್ವೀಕರಿಸಲು ಸ್ಪೀಕರ್ ಬಿಮನ್ ಬ್ಯಾನರ್ಜಿ ನಿರಾಕರಿಸಿದ ನಂತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಗದ್ದಲದ ಮಧ್ಯೆ, ಶಿಸ್ತು ಉಲ್ಲಂಘನೆಗಾಗಿ ಸ್ಪೀಕರ್ ಬಿಜೆಪಿ ಶಾಸಕ ಮನೋಜ್ ಒರಾವ್ ಅವರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು ಮತ್ತು ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರ ನಡವಳಿಕೆಗೆ ಎಚ್ಚರಿಕೆ ನೀಡಿದರು.

ಸಾಂಕೇತಿಕ ಪ್ರತಿಭಟನೆ ನಡೆಸಿದ ಎಲ್ಲಾ 40 ಬಿಜೆಪಿ ಶಾಸಕರು ಮಡಕೆಯಲ್ಲಿಟ್ಟ ತುಳಸಿ ಗಿಡಗಳನ್ನು ಹೊತ್ತುಕೊಂಡು ಸದನದಿಂದ ನಿರ್ಗಮಿಸಿದರು. ಬಂಗಾಳಿ ಭಾಷಿಕರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...