Homeಮುಖಪುಟಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

- Advertisement -
- Advertisement -

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು.

“ಮಾತನಾಡುವ ಭಾಷೆಯ ಕಾರಣಕ್ಕಾಗಿ ನಿಜವಾದ ಭಾರತೀಯ ನಾಗರಿಕರನ್ನು ಬಾಂಗ್ಲಾದೇಶಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಬಂಗಾಳಿ, ಗುಜರಾತಿ, ಮರಾಠಿ, ಹಿಂದಿ ಭಾಷೆಗಳಲ್ಲಿ ಮಾತನಾಡಲು ಹೆಮ್ಮೆಪಡಬೇಕು. ನೀವು ನನ್ನನ್ನು ಕೇಳಿದರೆ, ನಾನು ಈ ಎಲ್ಲಾ ಭಾಷೆಗಳಲ್ಲಿ ಮಾತನಾಡಬಲ್ಲೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಂದೆಡೆ, ನೀವು ಮಾತನಾಡುವ ಮಾತಿಗಾಗಿ ಭಾರತೀಯರನ್ನು ಬಾಂಗ್ಲಾದೇಶಿಗಳು ಎಂದು ಬ್ರಾಂಡ್ ಮಾಡುತ್ತಿದ್ದೀರಿ ಮತ್ತು ಮತ್ತೊಂದೆಡೆ, ಮತದಾರರ ಗುರುತಿನ ಚೀಟಿ, ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಈ ಜನರಿಗೆ ನಿಮ್ಮ ರಾಜ್ಯಗಳಲ್ಲಿ ಜೀವನೋಪಾಯವನ್ನು ಗಳಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದೀರಿ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಶಾಸಕರು ಪ್ರತಿಭಟನೆ ಮುಂದಾಗಿ ಎದ್ದು ನಿಂತು ಘೋಷಣೆಗಳನ್ನು ಕೂಗಿದ್ದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿಗಳು ತಮ್ಮ ಭಾಷಣವನ್ನು ನಿಲ್ಲಿಸದೆ ಮುಂದುವರಿಸಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಕೇಂದ್ರದ ನಿಧಿಯನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿದ ಸಿಎಂ, ಬಿಜೆಪಿಯ ಮಲತಾಯಿ ಧೋರಣೆಯ ಹೊರತಾಗಿಯೂ, ರಾಜ್ಯವು ಪಾಠಶ್ರೀ ಅಡಿಯಲ್ಲಿ 69,000 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ ಮತ್ತು 11,000 ಕೋಟಿ ರೂ.ಗಳೊಂದಿಗೆ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

“ಬಂಗಾಳವು ರಸ್ತೆ ಮತ್ತು ಗ್ರಾಮೀಣ ವಸತಿ ಯೋಜನೆಗಳ ಶ್ರೇಯಾಂಕದಲ್ಲಿ ಸತತ ಐದು ಬಾರಿ ಅಗ್ರಸ್ಥಾನದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ರಾಜ್ಯದ ಜನರು ಸರಾಸರಿ 50 ದಿನಗಳ ಉದ್ಯೋಗವನ್ನು ಪಡೆಯುತ್ತಿದ್ದಾರೆ ಮತ್ತು ಅವರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಒಂದೆಡೆ ನೀವು ಬಂಗಾಳದ ಬಡ ಜನರನ್ನು ವಂಚಿತಗೊಳಿಸುತ್ತಿದ್ದರೆ, ಮತ್ತೊಂದೆಡೆ, ನಿಮ್ಮ ರಾಜ್ಯಗಳಲ್ಲಿ ವಿವಿಧ ಅಪಘಾತಗಳಲ್ಲಿ ಸಾವಿನ ಮೆರವಣಿಗೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಸಾಮಾಜಿಕ ಕಲ್ಯಾಣ ನಿರ್ದೇಶನಗಳಿಗೆ ಅನುಗುಣವಾಗಿ, ಪರಿಶಿಷ್ಟ ಜಾತಿಗಳು (ಶೇಕಡಾ 26), ಪರಿಶಿಷ್ಟ ಪಂಗಡಗಳು (ಶೇಕಡಾ 6), ಹಿಂದುಳಿದ ಜಾತಿಗಳು ಮತ್ತು ಮುಸ್ಲಿಮರ (ಶೇಕಡಾ 30) ಹಿತಾಸಕ್ತಿಗಳನ್ನು ಕಾಪಾಡಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

“ನಮ್ಮ ಹಾದಿಯಿಂದ ನಮ್ಮನ್ನು ಹಳಿತಪ್ಪಿಸಲು ಅಥವಾ ನಮ್ಮ ಕನಸುಗಳನ್ನು ನನಸಾಗಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಎಸ್‌ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ “ಶಿಕ್ಷಣ ವಲಯದಲ್ಲಿನ ಬಿಕ್ಕಟ್ಟು” ಕುರಿತು ಮುಂದೂಡಿಕೆ ನಿರ್ಣಯವನ್ನು ಸ್ವೀಕರಿಸಲು ಸ್ಪೀಕರ್ ಬಿಮನ್ ಬ್ಯಾನರ್ಜಿ ನಿರಾಕರಿಸಿದ ನಂತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಗದ್ದಲದ ಮಧ್ಯೆ, ಶಿಸ್ತು ಉಲ್ಲಂಘನೆಗಾಗಿ ಸ್ಪೀಕರ್ ಬಿಜೆಪಿ ಶಾಸಕ ಮನೋಜ್ ಒರಾವ್ ಅವರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು ಮತ್ತು ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರ ನಡವಳಿಕೆಗೆ ಎಚ್ಚರಿಕೆ ನೀಡಿದರು.

ಸಾಂಕೇತಿಕ ಪ್ರತಿಭಟನೆ ನಡೆಸಿದ ಎಲ್ಲಾ 40 ಬಿಜೆಪಿ ಶಾಸಕರು ಮಡಕೆಯಲ್ಲಿಟ್ಟ ತುಳಸಿ ಗಿಡಗಳನ್ನು ಹೊತ್ತುಕೊಂಡು ಸದನದಿಂದ ನಿರ್ಗಮಿಸಿದರು. ಬಂಗಾಳಿ ಭಾಷಿಕರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...