Homeಮುಖಪುಟಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

- Advertisement -
- Advertisement -

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು.

“ಮಾತನಾಡುವ ಭಾಷೆಯ ಕಾರಣಕ್ಕಾಗಿ ನಿಜವಾದ ಭಾರತೀಯ ನಾಗರಿಕರನ್ನು ಬಾಂಗ್ಲಾದೇಶಿಗಳು ಎಂದು ಹಣೆಪಟ್ಟಿ ಕಟ್ಟುತ್ತಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಬಂಗಾಳಿ, ಗುಜರಾತಿ, ಮರಾಠಿ, ಹಿಂದಿ ಭಾಷೆಗಳಲ್ಲಿ ಮಾತನಾಡಲು ಹೆಮ್ಮೆಪಡಬೇಕು. ನೀವು ನನ್ನನ್ನು ಕೇಳಿದರೆ, ನಾನು ಈ ಎಲ್ಲಾ ಭಾಷೆಗಳಲ್ಲಿ ಮಾತನಾಡಬಲ್ಲೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಒಂದೆಡೆ, ನೀವು ಮಾತನಾಡುವ ಮಾತಿಗಾಗಿ ಭಾರತೀಯರನ್ನು ಬಾಂಗ್ಲಾದೇಶಿಗಳು ಎಂದು ಬ್ರಾಂಡ್ ಮಾಡುತ್ತಿದ್ದೀರಿ ಮತ್ತು ಮತ್ತೊಂದೆಡೆ, ಮತದಾರರ ಗುರುತಿನ ಚೀಟಿ, ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಹೊಂದಿರುವ ಈ ಜನರಿಗೆ ನಿಮ್ಮ ರಾಜ್ಯಗಳಲ್ಲಿ ಜೀವನೋಪಾಯವನ್ನು ಗಳಿಸುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದೀರಿ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಶಾಸಕರು ಪ್ರತಿಭಟನೆ ಮುಂದಾಗಿ ಎದ್ದು ನಿಂತು ಘೋಷಣೆಗಳನ್ನು ಕೂಗಿದ್ದು ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿಗಳು ತಮ್ಮ ಭಾಷಣವನ್ನು ನಿಲ್ಲಿಸದೆ ಮುಂದುವರಿಸಿದರು.

ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರಬೇಕಾದ ಕೇಂದ್ರದ ನಿಧಿಯನ್ನು ನಿರ್ಬಂಧಿಸುತ್ತಿದೆ ಎಂದು ಆರೋಪಿಸಿದ ಸಿಎಂ, ಬಿಜೆಪಿಯ ಮಲತಾಯಿ ಧೋರಣೆಯ ಹೊರತಾಗಿಯೂ, ರಾಜ್ಯವು ಪಾಠಶ್ರೀ ಅಡಿಯಲ್ಲಿ 69,000 ಕಿ.ಮೀ ರಸ್ತೆಗಳನ್ನು ನಿರ್ಮಿಸಿದೆ ಮತ್ತು 11,000 ಕೋಟಿ ರೂ.ಗಳೊಂದಿಗೆ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

“ಬಂಗಾಳವು ರಸ್ತೆ ಮತ್ತು ಗ್ರಾಮೀಣ ವಸತಿ ಯೋಜನೆಗಳ ಶ್ರೇಯಾಂಕದಲ್ಲಿ ಸತತ ಐದು ಬಾರಿ ಅಗ್ರಸ್ಥಾನದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ, ರಾಜ್ಯದ ಜನರು ಸರಾಸರಿ 50 ದಿನಗಳ ಉದ್ಯೋಗವನ್ನು ಪಡೆಯುತ್ತಿದ್ದಾರೆ ಮತ್ತು ಅವರ ಸರ್ಕಾರವು ವಿವಿಧ ಯೋಜನೆಗಳ ಅಡಿಯಲ್ಲಿ 1.5 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.

“ಒಂದೆಡೆ ನೀವು ಬಂಗಾಳದ ಬಡ ಜನರನ್ನು ವಂಚಿತಗೊಳಿಸುತ್ತಿದ್ದರೆ, ಮತ್ತೊಂದೆಡೆ, ನಿಮ್ಮ ರಾಜ್ಯಗಳಲ್ಲಿ ವಿವಿಧ ಅಪಘಾತಗಳಲ್ಲಿ ಸಾವಿನ ಮೆರವಣಿಗೆ ಮುಂದುವರೆದಿದೆ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಸಾಮಾಜಿಕ ಕಲ್ಯಾಣ ನಿರ್ದೇಶನಗಳಿಗೆ ಅನುಗುಣವಾಗಿ, ಪರಿಶಿಷ್ಟ ಜಾತಿಗಳು (ಶೇಕಡಾ 26), ಪರಿಶಿಷ್ಟ ಪಂಗಡಗಳು (ಶೇಕಡಾ 6), ಹಿಂದುಳಿದ ಜಾತಿಗಳು ಮತ್ತು ಮುಸ್ಲಿಮರ (ಶೇಕಡಾ 30) ಹಿತಾಸಕ್ತಿಗಳನ್ನು ಕಾಪಾಡಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

“ನಮ್ಮ ಹಾದಿಯಿಂದ ನಮ್ಮನ್ನು ಹಳಿತಪ್ಪಿಸಲು ಅಥವಾ ನಮ್ಮ ಕನಸುಗಳನ್ನು ನನಸಾಗಿಸುವುದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಎಸ್‌ಎಸ್‌ಸಿ ಹಗರಣಕ್ಕೆ ಸಂಬಂಧಿಸಿದ “ಶಿಕ್ಷಣ ವಲಯದಲ್ಲಿನ ಬಿಕ್ಕಟ್ಟು” ಕುರಿತು ಮುಂದೂಡಿಕೆ ನಿರ್ಣಯವನ್ನು ಸ್ವೀಕರಿಸಲು ಸ್ಪೀಕರ್ ಬಿಮನ್ ಬ್ಯಾನರ್ಜಿ ನಿರಾಕರಿಸಿದ ನಂತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

ಗದ್ದಲದ ಮಧ್ಯೆ, ಶಿಸ್ತು ಉಲ್ಲಂಘನೆಗಾಗಿ ಸ್ಪೀಕರ್ ಬಿಜೆಪಿ ಶಾಸಕ ಮನೋಜ್ ಒರಾವ್ ಅವರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು ಮತ್ತು ಬಿಜೆಪಿ ಮುಖ್ಯ ಸಚೇತಕ ಶಂಕರ್ ಘೋಷ್ ಅವರ ನಡವಳಿಕೆಗೆ ಎಚ್ಚರಿಕೆ ನೀಡಿದರು.

ಸಾಂಕೇತಿಕ ಪ್ರತಿಭಟನೆ ನಡೆಸಿದ ಎಲ್ಲಾ 40 ಬಿಜೆಪಿ ಶಾಸಕರು ಮಡಕೆಯಲ್ಲಿಟ್ಟ ತುಳಸಿ ಗಿಡಗಳನ್ನು ಹೊತ್ತುಕೊಂಡು ಸದನದಿಂದ ನಿರ್ಗಮಿಸಿದರು. ಬಂಗಾಳಿ ಭಾಷಿಕರನ್ನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಅರೋಪಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...