Homeಮುಖಪುಟಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ರಾಜ್ಯದ ಗೋಲ್ಪಾರ ಜಿಲ್ಲೆಯಲ್ಲಿ 667 ಕ್ಕೂ ಹೆಚ್ಚು ಮನೆಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ಅಸ್ಸಾಂನ ಬಿಜೆಪಿ ಸರ್ಕಾರ ಪ್ರಾರಂಭಿಸಿದ್ದು, ತೊಂದರೆಗೊಳಗಾದ ಹೆಚ್ಚಿನವರು ಬಂಗಾಳಿ ಮೂಲದ ಮುಸ್ಲಿಮರು ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ. ಅಸ್ಸಾಂ | 600 ಕ್ಕೂ

ಹಸಿಲಾ ಬೀಲ್ ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿದೆ ಎಂದು ಹೇಳಲಾದ ಭೂಮಿಯಲ್ಲಿರುವ 45% ಮನೆಗಳನ್ನು ಸೋಮವಾರ ನೆಲಸಮ ಮಾಡಲಾಗಿದೆ ಎಂದು ಗೋಲ್‌ಪಾರ ಜಿಲ್ಲಾ ಆಯುಕ್ತ ಖಾನೀಂದ್ರ ಚೌಧರಿ ಸ್ಕ್ರೋಲ್‌ಗೆ ತಿಳಿಸಿದ್ದಾರೆ.

ಉಳಿದ ಕಟ್ಟಡಗಳನ್ನು ತೆರವುಗೊಳಿಸಲು ಮಂಗಳವಾರವೂ ನೆಲಸಮ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. “ಅತಿಕ್ರಮಣಕಾರಿಂದ ಯಾವುದೇ ಪ್ರತಿರೋಧ ಬಂದಿಲ್ಲ ಮತ್ತು ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಜಿಲ್ಲಾಡಳಿತವು 2023 ಮತ್ತು 2024 ರಲ್ಲಿ “ಜೌಗು ಪ್ರದೇಶ”ವನ್ನು ಖಾಲಿ ಮಾಡುವಂತೆ ಸೂಚಿಸಿ ಗ್ರಾಮಸ್ಥರಿಗೆ ತೆರವು ನೋಟಿಸ್‌ಗಳನ್ನು ನೀಡಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. “ನಾವು ಶುಕ್ರವಾರ ಮತ್ತೆ ಅವರಿಗೆ ನೋಟಿಸ್ ನೀಡಿದ್ದೇವೆ ಮತ್ತು ಸೋಮವಾರ ಬೆಳಿಗ್ಗೆ ಅವರ ಮನೆಗಳನ್ನು ತೆರವುಗೊಳಿಸಲು ಕೇಳಿಕೊಂಡಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಅನೇಕ ನಿವಾಸಿಗಳು ತಮ್ಮ ಸಾಮಗ್ರಿಗಳೊಂದಿಗೆ ಗ್ರಾಮವನ್ನು ತೊರೆದಿದ್ದು, ಉಳಿದ ಕುಟುಂಬಗಳು ಜಿಲ್ಲಾಡಳಿತವು ಅವರಿಗೆ ಪುನರ್ವಸತಿ ಕಲ್ಪಿಸಬೇಕೆಂದು ವಿನಂತಿಸಿದ್ದಾರೆ.

2016 ರ ವೇಳೆ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 10,620 ಕ್ಕೂ ಹೆಚ್ಚು ಕುಟುಂಬಗಳು – ಅವರಲ್ಲಿ ಹೆಚ್ಚಿನವರು ಮುಸ್ಲಿಮರು – ಸರ್ಕಾರಿ ಭೂಮಿಯಿಂದ ಹೊರಹಾಕಲ್ಪಟ್ಟಿದ್ದಾರೆ ಎಂದು ಆಗಸ್ಟ್‌ನಲ್ಲಿ ರಾಜ್ಯದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ನಲ್ಲಿ ಕೂಡಾ ಗೋಲ್‌ಪಾರ ಜಿಲ್ಲಾಡಳಿತವು ನೆಲಸಮ ಕಾರ್ಯಾಚರಣೆಯನ್ನು ನಡೆಸಿತ್ತು. ಈ ವೇಳೆ ಅಲ್ಲಿ 450 ಕುಟುಂಬಗಳು ಅಥವಾ ಸುಮಾರು 2,000 ಜನರನ್ನು ಹೊರಹಾಕಲಾಗಿತ್ತು. ಬಂದರ್‌ಮಾಥ ಮೀಸಲು ಅರಣ್ಯದ 55 ಹೆಕ್ಟೇರ್ ಪ್ರದೇಶವನ್ನು ಈ ಕುಟುಂಬಗಳು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದವು ಎಂದು ಅಧಿಕಾರಿಗಳು ಆರೋಪಿಸಿದ್ದರು. ಹೈಕೋರ್ಟ್ ಆದೇಶದ ಪ್ರಕಾರ ಈ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿತ್ತು.

ಮೋರೆಗಾಂವ್‌ನಲ್ಲಿ ನಡೆದ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಗುಂಡಿಕ್ಕಿ ಕೊಂದ ಎರಡು ವಾರಗಳೊಳಗೆ ಇದು ಸಂಭವಿಸಿತ್ತು.

ಸೆಪ್ಟೆಂಬರ್ 9 ರಂದು, ಜಿಲ್ಲಾಡಳಿತ ಸುಮಾರು 240 ಮನೆಗಳನ್ನು ಬುಲ್ಡೋಜರ್‌ನಿಂದ ಕೆಡವಿತು, ಅವರಲ್ಲಿ ಹೆಚ್ಚಿನವರು ಮೋರಿಗಾಂವ್ ಜಿಲ್ಲೆಯ ಬಂಗಾಳಿ ಮೂಲದ ಮುಸ್ಲಿಮರಾಗಿದ್ದರು. ಈ ನಿವಾಸಿಗಳು ಹಲವಾರು ದಶಕಗಳಿಂದ ಆ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನಿರ್ಮಿಸಿದ್ದರು.

ಅದಾಗಿ ಮೂರು ದಿನಗಳ ನಂತರ, ಸೆಪ್ಟೆಂಬರ್ 12 ರಂದು, ಅಧಿಕಾರಿಗಳು ಮತ್ತೆ ಬಂದು ಎರಡು ಗಂಟೆಗಳಲ್ಲಿ ಭೂಮಿಯನ್ನು ಖಾಲಿ ಮಾಡುವಂತೆ ಅವರಿಗೆ ಅಂತಿಮ ಎಚ್ಚರಿಕೆ ನೀಡಿದ್ದರು. ಇದರ ನಂತರ ನಿವಾಸಿಗಳು ಮತ್ತು ಅಧಿಕಾರಿಗಳ ನಡುವೆ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದು ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಗುಂಡು ಹಾರಿಸಿದರು.

ಘರ್ಷಣೆಯಲ್ಲಿ 22 ಸರ್ಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಮೂವತ್ಮೂರು ಜನರು ಗಾಯಗೊಂಡಿದ್ದರು. ಅಸ್ಸಾಂ | 600 ಕ್ಕೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...