Homeಮುಖಪುಟಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

- Advertisement -
- Advertisement -

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ.

ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ.

ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಅವರ ಹಿರಿಯ ಮಗ ಧನುಷ್ (23) ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿಜಯ ಶ್ರೀ (21) ಎಂಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ದಂಪತಿ ತಲೆಮರೆಸಿಕೊಂಡಿದ್ದಾಗ, ಹುಡುಗಿಯ ಕುಟುಂಬವು ಧನುಷ್ ಅವರ ಕಿರಿಯ ಸಹೋದರ ಇಂದ್ರಚಂದ್ (16) ಅವರನ್ನು ಮೇ 10 ರಂದು ತಿರುವಲಂಗಾಡು ಬಳಿಯ ಅವರ ಮನೆಯಿಂದ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ನಂತರ ಬಾಲಕನನ್ನು ಗಾಯಗೊಂಡ ಸ್ಥಿತಿಯಲ್ಲಿ ಹೋಟೆಲೊಂದರ ಬಳಿ ಬಿಟ್ಟು ಹೋಗಿರುವುದಾಗಿ ವರದಿಯಾಗಿದೆ.

ಲೈವ್‌ಲಾ ಪ್ರಕಾರ, ದಂಪತಿಯನ್ನು ಪತ್ತೆ ಹಚ್ಚಲು ವಿಫಲವಾದ ನಂತರ ಯುವತಿಯ ಕುಟುಂಬ ಸಹಾಯಕ್ಕಾಗಿ ಶಾಸಕರನ್ನು ಸಂಪರ್ಕಿಸಿದೆ. ಶಾಸಕರು ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ನಂತರ ಪೊಲೀಸರು ಅವರನ್ನು ಪ್ರಶ್ನಿಸದಂತೆ ತಡೆದಿದ್ಧಾರೆ. ಪಕ್ಷದ ಬೆಂಬಲಿಗರು ಅವರ ಮನೆಯನ್ನು ಸುತ್ತುವರೆದಿದ್ದರು.

ಈ ನಡುವೆ, ಎಡಿಜಿಪಿ ಜಯರಾಮ್ ಅವರ ಅಧಿಕೃತ ವಾಹನವನ್ನು ಬಳಸಿಕೊಂಡು ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ಬಂಧಿತ ಇಬ್ಬರು ಶಂಕಿತರು ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರ ಜೊತೆ ಮಾಜಿ ಪೊಲೀಸ್ ಅಧಿಕಾರಿ ಮಹೇಶ್ವರಿ ಮತ್ತು ವಕೀಲ ಶರತ್ ಇದ್ದರು ಎನ್ನಲಾಗಿದೆ.

ಶಾಸಕ ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಎಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ದಾಮೋದರನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪೊಲೀಸರು ಮೊದಲು ಶಾಸಕರನ್ನು ಪ್ರಶ್ನಿಸಲು ಉದ್ದೇಶಿಸಿದ್ದರಿಂದ ಎಡಿಜಿಪಿ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ನಂತರ ನ್ಯಾಯಾಧೀಶರು ಶಾಸಕರು ಮತ್ತು ಎಡಿಜಿಪಿ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರಾಪಡಿಸುವಂತೆ ನಿರ್ದೇಶಿಸಿದ್ಧಾರೆ.

ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ವೇಲ್ಮುರುಗನ್ ಅವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ : “ನೀವು ಸಾಮಾನ್ಯ ವ್ಯಕ್ತಿಯಲ್ಲ. ನೀವು ನಾಗರಿಕರಿಗೆ ಮಾದರಿಯಾಗಿರಬೇಕು. ಬದಲಾಗಿ, ನೀವು ಮೂರನೇ ದರ್ಜೆಯ ವ್ಯಕ್ತಿಯಂತೆ ವರ್ತಿಸುತ್ತಿದ್ದೀರಿ. ಜನರು ನಿಮಗೆ ಮತ ಹಾಕಲು ಬಿಸಿಲಿನಲ್ಲಿ, ಕೆಲವೊಮ್ಮೆ ಊಟ ಮಾಡದೆ ಬಂದಿರಬಹುದು. ನೀವು ಅವರಿಗೆ ಹೀಗೆ ಸೇವೆ ಮಾಡುತ್ತೀರಾ?” ಎಂದು ಕಿಡಿಕಾರಿದ್ದಾರೆ.

“ಕಾಂಗರೂ ನ್ಯಾಯಾಲಯಗಳ” ಬಳಕೆಯನ್ನು ಟೀಕಿಸಿದ ನ್ಯಾಯಾಲಯ, ಶಾಸಕರು ಕಾನೂನಿಗೆ ಸಹಕರಿಸುವ ಬದಲು ರಾಜಕೀಯ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. “ಇಂತಹ ನಡವಳಿಕೆ  ಮುಂದುವರಿದರೆ, ಪ್ರಕರಣದಲ್ಲಿ ಸಹಕರಿಸಿರುವ ಪ್ರತಿಯೊಬ್ಬ ಬೆಂಬಲಿಗರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬಲವಾದ ಟೀಕೆಗಳ ನಂತರ, ನ್ಯಾಯಾಲಯವು ಶಾಸಕರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದೇಶಿಸಿದೆ. ನ್ಯಾಯಾಧೀಶರು ಪೊಲೀಸರಿಗೆ ಎಡಿಜಿಪಿ ಜಯರಾಮ್ ಅವರನ್ನು ‘ಕಾನೂನಿನ ಪ್ರಕಾರ’ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಅಧಿಕಾರಿ ಸೂಕ್ತ ವೇದಿಕೆಯ ಮುಂದೆ ಜಾಮೀನು ಪಡೆಯಲು ಸ್ವತಂತ್ರರು ಎಂದು ಹೇಳಿದ್ದಾರೆ.

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...