Homeಮುಖಪುಟಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

- Advertisement -
- Advertisement -

ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ತಿರುವಲ್ಲೂರು ಪೊಲೀಸರು ಸೋಮವಾರ, 16 ವರ್ಷದ ಬಾಲಕನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಚ್‌ಎಂ ಜಯರಾಮ್ ಅವರನ್ನು ಬಂಧಿಸಿದ್ದಾರೆ.

ತನಿಖೆಯನ್ನು ತಡೆದಿದ್ದಕ್ಕಾಗಿ ನ್ಯಾಯಾಲಯವು ಕೆ.ವಿ. ಕುಪ್ಪಂ ಶಾಸಕ ಮತ್ತು ಪುಥಿಯಾ ಭಾರತಮ್ ‘ಪೂವೈ’ ಅಧ್ಯಕ್ಷ ಜಗನ್ ಮೂರ್ತಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಕಿಡಿಕಾರಿದೆ.

ಬಾಲಕನ ತಾಯಿ ಲಕ್ಷ್ಮಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದ್ದು, ಅವರ ಹಿರಿಯ ಮಗ ಧನುಷ್ (23) ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿಜಯ ಶ್ರೀ (21) ಎಂಬ ಯುವತಿಯನ್ನು ಮದುವೆಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ದಂಪತಿ ತಲೆಮರೆಸಿಕೊಂಡಿದ್ದಾಗ, ಹುಡುಗಿಯ ಕುಟುಂಬವು ಧನುಷ್ ಅವರ ಕಿರಿಯ ಸಹೋದರ ಇಂದ್ರಚಂದ್ (16) ಅವರನ್ನು ಮೇ 10 ರಂದು ತಿರುವಲಂಗಾಡು ಬಳಿಯ ಅವರ ಮನೆಯಿಂದ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ನಂತರ ಬಾಲಕನನ್ನು ಗಾಯಗೊಂಡ ಸ್ಥಿತಿಯಲ್ಲಿ ಹೋಟೆಲೊಂದರ ಬಳಿ ಬಿಟ್ಟು ಹೋಗಿರುವುದಾಗಿ ವರದಿಯಾಗಿದೆ.

ಲೈವ್‌ಲಾ ಪ್ರಕಾರ, ದಂಪತಿಯನ್ನು ಪತ್ತೆ ಹಚ್ಚಲು ವಿಫಲವಾದ ನಂತರ ಯುವತಿಯ ಕುಟುಂಬ ಸಹಾಯಕ್ಕಾಗಿ ಶಾಸಕರನ್ನು ಸಂಪರ್ಕಿಸಿದೆ. ಶಾಸಕರು ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ನಂತರ ಪೊಲೀಸರು ಅವರನ್ನು ಪ್ರಶ್ನಿಸದಂತೆ ತಡೆದಿದ್ಧಾರೆ. ಪಕ್ಷದ ಬೆಂಬಲಿಗರು ಅವರ ಮನೆಯನ್ನು ಸುತ್ತುವರೆದಿದ್ದರು.

ಈ ನಡುವೆ, ಎಡಿಜಿಪಿ ಜಯರಾಮ್ ಅವರ ಅಧಿಕೃತ ವಾಹನವನ್ನು ಬಳಸಿಕೊಂಡು ಬಾಲಕನನ್ನು ಅಪಹರಣ ಮಾಡಲಾಗಿದೆ ಎಂದು ಬಂಧಿತ ಇಬ್ಬರು ಶಂಕಿತರು ಒಪ್ಪಿಕೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅವರ ಜೊತೆ ಮಾಜಿ ಪೊಲೀಸ್ ಅಧಿಕಾರಿ ಮಹೇಶ್ವರಿ ಮತ್ತು ವಕೀಲ ಶರತ್ ಇದ್ದರು ಎನ್ನಲಾಗಿದೆ.

ಶಾಸಕ ಜಗನ್ ಮೂರ್ತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ವೇಲ್ಮುರುಗನ್, ಎಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ದಾಮೋದರನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪೊಲೀಸರು ಮೊದಲು ಶಾಸಕರನ್ನು ಪ್ರಶ್ನಿಸಲು ಉದ್ದೇಶಿಸಿದ್ದರಿಂದ ಎಡಿಜಿಪಿ ವಿರುದ್ಧ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ. ನಂತರ ನ್ಯಾಯಾಧೀಶರು ಶಾಸಕರು ಮತ್ತು ಎಡಿಜಿಪಿ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರಾಪಡಿಸುವಂತೆ ನಿರ್ದೇಶಿಸಿದ್ಧಾರೆ.

ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ವೇಲ್ಮುರುಗನ್ ಅವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ : “ನೀವು ಸಾಮಾನ್ಯ ವ್ಯಕ್ತಿಯಲ್ಲ. ನೀವು ನಾಗರಿಕರಿಗೆ ಮಾದರಿಯಾಗಿರಬೇಕು. ಬದಲಾಗಿ, ನೀವು ಮೂರನೇ ದರ್ಜೆಯ ವ್ಯಕ್ತಿಯಂತೆ ವರ್ತಿಸುತ್ತಿದ್ದೀರಿ. ಜನರು ನಿಮಗೆ ಮತ ಹಾಕಲು ಬಿಸಿಲಿನಲ್ಲಿ, ಕೆಲವೊಮ್ಮೆ ಊಟ ಮಾಡದೆ ಬಂದಿರಬಹುದು. ನೀವು ಅವರಿಗೆ ಹೀಗೆ ಸೇವೆ ಮಾಡುತ್ತೀರಾ?” ಎಂದು ಕಿಡಿಕಾರಿದ್ದಾರೆ.

“ಕಾಂಗರೂ ನ್ಯಾಯಾಲಯಗಳ” ಬಳಕೆಯನ್ನು ಟೀಕಿಸಿದ ನ್ಯಾಯಾಲಯ, ಶಾಸಕರು ಕಾನೂನಿಗೆ ಸಹಕರಿಸುವ ಬದಲು ರಾಜಕೀಯ ಶಕ್ತಿಯನ್ನು ಪ್ರದರ್ಶಿಸಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದೆ. “ಇಂತಹ ನಡವಳಿಕೆ  ಮುಂದುವರಿದರೆ, ಪ್ರಕರಣದಲ್ಲಿ ಸಹಕರಿಸಿರುವ ಪ್ರತಿಯೊಬ್ಬ ಬೆಂಬಲಿಗರ ವಿರುದ್ಧವೂ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಬಲವಾದ ಟೀಕೆಗಳ ನಂತರ, ನ್ಯಾಯಾಲಯವು ಶಾಸಕರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದೇಶಿಸಿದೆ. ನ್ಯಾಯಾಧೀಶರು ಪೊಲೀಸರಿಗೆ ಎಡಿಜಿಪಿ ಜಯರಾಮ್ ಅವರನ್ನು ‘ಕಾನೂನಿನ ಪ್ರಕಾರ’ ಬಂಧಿಸುವಂತೆ ನಿರ್ದೇಶಿಸಿದ್ದಾರೆ. ಅಧಿಕಾರಿ ಸೂಕ್ತ ವೇದಿಕೆಯ ಮುಂದೆ ಜಾಮೀನು ಪಡೆಯಲು ಸ್ವತಂತ್ರರು ಎಂದು ಹೇಳಿದ್ದಾರೆ.

ಅಸ್ಸಾಂ | 600 ಕ್ಕೂ ಹೆಚ್ಚು ಮನೆಗಳನ್ನು ಕೆಡವಲು ಪ್ರಾರಂಭಿಸಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...