Homeಅಂತರಾಷ್ಟ್ರೀಯಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

- Advertisement -
- Advertisement -

ಸಂಸತ್‌ನ ಅನುಮತಿಯಿಲ್ಲದೆ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಗಳಿಗೆ ಫೆಡರಲ್ ನಿಧಿಗಳನ್ನು ಬಳಸುವ ಟ್ರಂಪ್ ಅಧಿಕಾರ ತಡೆಯುವ ಮಸೂದೆಯನ್ನು ಅಮೆರಿಕದ ಸೆನೆಟರ್ ಬರ್ನಿ ಸ್ಯಾಂಡರ್ಸ್ ಸೋಮವಾರ (ಜೂ.16) ಮಂಡಿಸಿದ್ದಾರೆ.

“ಇರಾನ್ ವಿರುದ್ಧ ಯುದ್ಧ ಬೇಡ ಮಸೂದೆಯು” ಯುದ್ಧ ಅಧಿಕಾರ ಕಾಯ್ದೆ ಮತ್ತು ಅನ್ವಯವಾಗುವ ಯುಎಸ್ ಕಾನೂನಿನಲ್ಲಿ ಪ್ರತಿಪಾದಿಸಲಾದ ಸ್ವರಕ್ಷಣೆಗಾಗಿ ಒಂದು ವಿನಾಯಿತಿಯನ್ನು ಒಳಗೊಂಡಿದೆ.

ಸೆನೆಟರ್ ಪೀಟರ್ ವೆಲ್ಚ್, ಎಲಿಜಬೆತ್ ವಾರೆನ್, ಜೆಫ್ ಮರ್ಕ್ಲಿ, ಕ್ರಿಸ್ ವ್ಯಾನ್ ಹೊಲೆನ್, ಎಡ್ ಮಾರ್ಕಿ, ಟ್ಯಾಮಿ ಬಾಲ್ಡ್ವಿನ್ ಮತ್ತು ಟೀನಾ ಸ್ಮಿತ್ ಅವರು ಸ್ಯಾಂಡರ್ಸ್ ಅವರ ಮಸೂದೆಯನ್ನು ಬೆಂಬಲಿಸಿದ್ಧಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ “ಅಜಾಗರೂಕ ಮತ್ತು ಕಾನೂನುಬಾಹಿರ ದಾಳಿಗಳು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುತ್ತವೆ ಮತ್ತು ಪ್ರಾದೇಶಿಕ ಯುದ್ಧವನ್ನು ಹುಟ್ಟುಹಾಕುವ ಅಪಾಯವನ್ನುಂಟುಮಾಡುತ್ತವೆ” ಎಂದು ಸ್ಯಾಂಡರ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನೆತನ್ಯಾಹು ಅವರ ಆಯ್ಕೆಯ ಯುದ್ಧಕ್ಕೆ ಅಮೆರಿಕವನ್ನು ಎಳೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಬೇಕು” ಎಂದು ಸ್ಯಾಂಡರ್ಸ್ ಹೇಳಿದ್ದಾರೆ. ಕಾಂಗ್ರೆಸ್‌ನ ಸ್ಪಷ್ಟ ಅನುಮತಿಯಿಲ್ಲದೆ ಮತ್ತೊಂದು “ದುಬಾರಿ ಯುದ್ಧ”ವನ್ನು ಕೈಗೊಳ್ಳಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ “ಯಾವುದೇ ಅಧಿಕಾರ” ಇಲ್ಲ ಎಂದಿದ್ದಾರೆ.

“ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧವು ಲೆಕ್ಕವಿಲ್ಲದಷ್ಟು ಜೀವಗಳನ್ನು ಬಲಿ ಪಡೆಯಬಹುದು, ಟ್ರಿಲಿಯನ್‌ಗಟ್ಟಲೆ ಡಾಲರ್‌ಗಳನ್ನು ವ್ಯರ್ಥ ಮಾಡಬಹುದು ಮತ್ತು ಇನ್ನೂ ಹೆಚ್ಚಿನ ಸಾವುಗಳು, ಹೆಚ್ಚಿನ ಸಂಘರ್ಷ ಮತ್ತು ಹೆಚ್ಚಿನ ಸ್ಥಳಾಂತರಕ್ಕೆ ಕಾರಣವಾಗಬಹುದು” ಎಂದು ಸ್ಯಾಂಡರ್ಸ್ ಹೇಳಿದ್ದಾರೆ.

ಜೂನ್ 13ರಂದು ಇಸ್ರೇಲ್ ಇರಾನ್ ಮೇಲೆ ನಡೆಸಿದ ಅನೀರಿಕ್ಷಿತ ದಾಳಿಯಿಂದ ಪ್ರಾರಂಭಗೊಂಡ ಎರಡೂ ದೇಶಗಳ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ.

ಇತರ ಸಂಘರ್ಷಗಳಂತೆ ಎರಡು ದೇಶಗಳ ಈ ಸಂಘರ್ಷದಲ್ಲಿ ಅಮೆರಿಕ ತಲೆ ಹಾಕಲು ಮುಂದಾಗಿದೆ. ಒಂದೆಡೆ ಶಾಂತಿಮಂತ್ರ ಜಪಿಸುವ ಯುಎಸ್ ಅಧ್ಯಕ್ಷ ಟ್ರಂಪ್, ಮತ್ತೊಂದೆಡೆ ಇರಾನ್‌ಗೆ ಎಚ್ಚರಿಕೆ ಕೊಡುವ ಮೂಲಕ ಪರೋಕ್ಷವಾಗಿ ಯುದ್ದಕ್ಕೆ ಬೆಂಬಲ ನೀಡುತ್ತಿದ್ದಾರೆ. ಗಾಝಾ, ಸಿರಿಯಾ ಇತರ ರಾಷ್ಟ್ರಗಳ ವಿಚಾರದಲ್ಲೂ ಅಮೆರಿಕ ವಿಶೇಷವಾಗಿ ಟ್ರಂಪ್ ಮಾಡಿರುವುದು ಇದನ್ನೇ ಆಗಿದೆ.

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...