Homeಅಂತರಾಷ್ಟ್ರೀಯಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

ಸುದ್ದಿ ಓದುತ್ತಿರುವಾಗಲೇ ಇರಾನ್ ಸರ್ಕಾರಿ ಚಾನೆಲ್‌ ಮೇಲೆ ಇಸ್ರೇಲ್ ದಾಳಿ; ನೇರ ಪ್ರಸಾರದಲ್ಲಿ ದಾಖಲು

- Advertisement -
- Advertisement -

ಇರಾನ್ ಸರ್ಕಾರಿ ಟಿವಿ ನಿರೂಪಕಿಯೊಬ್ಬರು ಸೋಮವಾರ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿರುವಾಗಲೇ ಇಸ್ರೇಲ್ ವಾಯುದಾಳಿ ನಡೆಸಿದ್ದು, ನೇರಪ್ರಸಾದಲ್ಲಿ ದಾಳಿ ಭೀಕರತೆ ದಾಖಲಾಗಿದೆ. ಟೆಹ್ರಾನ್ ಪ್ರದೇಶವನ್ನು ಸ್ಥಳಾಂತರಿಸುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿರೂಪಕಿ ಸ್ಟುಡಿಯೋ ತೊರೆದಿರುವುದುನ್ನು ಕಾಣಬಹುದು.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ್ಯೂಸ್ ನೆಟ್‌ವರ್ಕ್‌ನ ವರದಿಗಾರ್ತಿ ಮಾತನಾಡುತ್ತಾ, “ತಾಯ್ನಾಡಿನ ವಿರುದ್ಧ ಆಕ್ರಮಣದ ಶಬ್ದ, ಸತ್ಯ ಮತ್ತು ಸದಾಚಾರದ ವಿರುದ್ಧ ಆಕ್ರಮಣದ ಶಬ್ದ” ಎಂದು ಹೇಳುತ್ತಿದ್ದಂತೆಯೇ ದಾಳಿ ನಡೆದಿದದ್ದು, ಇಡೀ ಸ್ಟುಡಿಯೋ ಧೂಳಿನಿಂದ ಆವೃತವಾಯಿತು.

ನಿರೂಪಕಿ ಸಹರ್ ಎಮಾಮಿ ಅವರು ನೇರಪ್ರಸಾರದಿಂದ ಹೊರಗೆ ಓಡಿಹೋದರು. ಈ ಸಂದರ್ಭದಲ್ಲಿ ಚಾನೆಲ್ ಸಿಬ್ಬಂದಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿಕೊಂಡು ಪ್ರಾಣರಕ್ಷಣೆಗೆ ಓಡಿದ್ದಾರೆ.

ಚಾನೆಲ್‌ನ ಪ್ರಸಾರವು ಕೂಡಲೇ ರೆಕಾರ್ಡ್ ಮಾಡಿದ ಕಾರ್ಯಕ್ರಮಗಳಿಗೆ ಬದಲಾಯಿತು. ಶೀಘ್ರದಲ್ಲೇ, ಎಮಾಮಿ ಮತ್ತೊಂದು ಸ್ಟುಡಿಯೋದಿಂದ ನೇರ ಪ್ರಸಾರಕ್ಕೆ ಹಿಂತಿರುಗಿದರು. ಮತ್ತೋರ್ವ ನಿರೂಪಕನೊಂದಿಗೆ ಕುಳಿತು ಮಾತನಾಡುತ್ತಿರುವುದು ಕಂಡುಬಂದಿತು.

ದಾಳಿಯ ಹೊಣೆಯನ್ನು ಇಸ್ರೇಲ್‌ನ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿದೆ. “ದಾಳಿ ಪ್ರದೇಶದ ನಿವಾಸಿಗಳನ್ನು ವ್ಯಾಪಕವಾಗಿ ಸ್ಥಳಾಂತರಿಸಿದ ನಂತರ ಇರಾನಿನ ಆಡಳಿತದ ಪ್ರಚಾರ ಮತ್ತು ಪ್ರಚೋದನೆ ಪ್ರಸಾರ ಪ್ರಾಧಿಕಾರದ ಮೇಲೆ ಐಡಿಎಫ್ ದಾಳಿ ಮಾಡಿದೆ” ಎಂದು ಇಸ್ರೇಲ್ ಕಾಟ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾವು ಎಲ್ಲೆಡೆ ಇರಾನಿನ ಸರ್ವಾಧಿಕಾರಿಯನ್ನು ಹೊಡೆಯುತ್ತೇವೆ” ಎಂದು ಘೋಷಿಸಿದ್ದಾರೆ.

ಚಾನೆಲ್‌ ಮೇಲಿನ ದಾಳಿಯ ಒಂದು ಗಂಟೆಯ ಮೊದಲು, ಇಸ್ರೇಲಿ ಮಿಲಿಟರಿ ದೇಶದ ರಾಜ್ಯ ಟಿವಿ ಮತ್ತು ಪೊಲೀಸ್ ಪ್ರಧಾನ ಕಚೇರಿ ಮತ್ತು ಮೂರು ದೊಡ್ಡ ಆಸ್ಪತ್ರೆಗಳನ್ನು ಒಳಗೊಂಡಿರುವ ಮಧ್ಯ ಟೆಹ್ರಾನ್‌ನ ಒಂದು ಭಾಗದಲ್ಲಿ ಸುಮಾರು 330,000 ಜನರ ಮೇಲೆ ಪರಿಣಾಮ ಬೀರುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿತ್ತು.

ಸಂಘರ್ಷದ ನಾಲ್ಕನೇ ದಿನದಂದು ಇಸ್ರೇಲಿ ಮಿಲಿಟರಿ ಇರಾನಿನ ರಾಜಧಾನಿಯ ಮೇಲೆ ವಾಯು ಪ್ರಾಬಲ್ಯವನ್ನು ಸಾಧಿಸಿದೆ.

ಇರಾನ್ ವಿರುದ್ಧ ಯುದ್ಧ | ಟ್ರಂಪ್ ಅಧಿಕಾರ ತಡೆಯುವ ಮಸೂದೆ ಮಂಡಿಸಿದ ಯುಎಸ್ ಸೆನೆಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...