Homeಚಳವಳಿತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

ತಮಿಳುನಾಡಿನಲ್ಲಿ 17 ಜನ ದಲಿತರನ್ನು ಬಲಿತೆಗೆದುಕೊಂಡ ಜಾತಿಗೋಡೆ : ಎಲ್ಲೆಡೆ ಆಕ್ರೋಶ, ನ್ಯಾಯಕ್ಕೆ ಆಗ್ರಹ

- Advertisement -
- Advertisement -

ನಮ್ಮ ದೇಶದಲ್ಲಿ ಯಾವ ಕಾಯಿಲೆಗೆ ಮದ್ದು ಸಿಕ್ಕರೂ ಜಾತಿ ಕಾಯಿಲೆಗೆ ಮಾತ್ರ ಮದ್ದ ಸಿಗಲಾರದು. ಜಾತಿಯ ಕಾರಣಕ್ಕೆ ಜೀವನದ ಪ್ರತಿ ಕ್ಷಣವು ಅವಮಾನಿತರಾಗುವ ದಲಿತರು ಇಂದು ತಮ್ಮ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ. ತಮಿಳುನಾಡಿನಲ್ಲಿ ಅನ್ಯಾಯವಾಗಿ ಮೃತಪಟ್ಟ 17 ಜನ ದಲಿತರ ಉದಾಹರಣೆ ಭಾರತಕ್ಕಂಟಿರುವ ಜಾತಿಜಾಢ್ಯವನ್ನು ಎತ್ತಿ ಎತ್ತಿ ತೋರಿಸುತ್ತಿದೆ.

ತಮಿಳುನಾಡಿನ ಮೆಟ್ಟುಪಳ್ಳಾಯಂನಲ್ಲಿ ಮೇಲ್ಜಾತಿಯ ಜನ ದಲಿತರು ತಮ್ಮ ಮನೆ ಪ್ರವೇಶಿಸಬಾರದೆಂಬ ಕಾರಣಕ್ಕೆ ನಿರ್ಮಿಸಿದ್ದ ಕಾಂಪೌಂಡ್ ಗೋಡೆ ಕುಸಿದು ಹದಿನೇಳು ಜನ ದಲಿತರು ದುರ್ಮರಣ ಹೊಂದಿದ್ದಾರೆ. ಇಲ್ಲಿನ ಕಣ್ಣಪ್ಪನ್ ನಗರದಲ್ಲಿ 300 ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ಬಡವರ ಮನೆಗಳು ಪ್ರತಿ ಮಳೆಗಲಾದಲ್ಲೂ  ಭೀಕರ ಸಮಸ್ಯೆಗಳನ್ನ ಎದುರಿಸುತ್ತಿವೆ.

ಇಂಥ ಸಂದರ್ಭದಲ್ಲಿ ಆ ಊರಿನ ಶಿವ ಸುಬ್ರಮಣ್ಯಂ ಎಂಬ ಟೆಕ್ಸ್ ಟೈಲ್ಸ್ ಅಂಗಡಿಯ ಮಾಲೀಕ ತನ್ನ ಮನೆಯ ಹಿಂದೆ ಇರುವ ದಲಿತರು ಮನೆಯ ಹತ್ತಿರ ಬರಬಾರದೆಂದು ತಡೆಗೋಡೆ ನಿರ್ಮಿಸಿದ್ದಾನೆ. ದಲಿತ ಕುಟುಂಬಗಳು ಎಂಟುವರ್ಷಗಳಿಂದಲೂ ಈ ಗೋಡೆಯ ಬಗ್ಗೆ ಭಯಭೀತರಾಗಿ ಬದುಕು ಸಾಗಿಸುತ್ತಿದ್ದಾರೆ. ಈ ಹಿಂದೆ 12 ಅಡಿ ಇದ್ದ ಗೋಡೆಯನ್ನು ದಲಿತ ಸಂಘಟನೆಗಳ ಸತತ ಪ್ರತಿಭಟನೆಯ ಹೊರತಾಗಿಯೂ ಆತ 20ಅಡಿಗೆ ಎತ್ತರಿಸಿದ್ದಾನೆ.

ಶಿವಸುಬ್ರಮಣ್ಯಂ ಮನೆಯ ಗೋಡೆಯೂ ಸಹ ಅಷ್ಟು ಎತ್ತರಕ್ಕೆ ಇಲ್ಲ ಆದರೆ ದಲಿತರ ಓಡಾಡುವ ಮನೆಯ ಹಿಂದೆ ಮಾತ್ರ ಅಷ್ಟು ದೊಡ್ಡ ಗೋಡೆ ಕಟ್ಟಿದ್ದಾನೆ. ಈ ಗೋಡೆಯನ್ನು ಅತ್ಯಂತ ಕಳಪೆಯಾಗಿ ಬರೀ ಮಣ್ಣು ಮತ್ತು ಕಲ್ಲಿನಿಂದ ನಿರ್ಮಸಿದ್ದು ಸೋಮವಾರ  ಬಂದ ಮಳೆಗೆ ಇಡೀ ಗೋಡೆ ದಲಿತರ ಮನೆಗಳ ಮೇಲೆ ಕುಸಿದುಬಿದ್ದಿದೆ. ಒಂದೇ ಕುಟುಂಬದ ಐವರು ಸೇರಿದಂತೆ ಬೇರೆ ಕುಟುಂಬಗಳ 17 ಜನ ಸಾವನ್ನಪ್ಪಿದ್ದಾರೆ. ತಮ್ಮದಲ್ಲದ ತಪ್ಪಿಗೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಳ್ಳಲು ಬಹಿರಂತ ಅಸ್ಪೃಶ್ಯತೆಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಬೃಹತ್ ಪ್ರತಿಭಟನೆ ಮಾಡಿದ ದಲಿತ ಸಂಘಟನೆಗಳು ಇದನ್ನು ‘ಜಾತಿ ಗೋಡೆ’ ಎಂದು ಕರೆದಿದ್ದಾರೆ. ಈ ಮನುಷ್ಯರನ್ನು ಮನುಷ್ಯರಂತೆ ನೋಡದ ಜಾತಿ ವ್ಯವಸ್ಥೆ ಭಾರತ ದೇಶಕ್ಕೆ ಅಂಟಿದ ಅತಿ ದೊಡ್ಡ ಕಾಯಿಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯನ್ನು ಕಾಲ ಸಿನೆಮಾದ ನಿರ್ದೇಶಕ ಪ.ರಂಜಿತ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸದ ಡಿ.ರವಿಕುಮಾರ್ ಕೇಂದ್ರದ ಸಾಮಾಜಿಕ ನ್ಯಾಯ ಮತ್ತ ಸಬಲೀಕರಣ ಸಚಿವರಿಗೆ ಪತ್ರ ಬರೆದು ಈ ಅಸ್ಪೃಶ್ಯತೆಯ ಕುರಿತು ಸಮಗ್ರ ತನಿಖೆಯಾಗಬೇಕು, ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸಾಮಾಜಿಕ ತಾಲತಾಣದಲ್ಲಿ ಯುವಜನಾಂಗದ ಆಕ್ರೋಶಕ್ಕೆ ಜಾತಿಗೋಡೆ ತುತ್ತಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಪಳನಿಸ್ವಾಮಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಈ ಘಟನೆಯ ಕುರಿತು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಘಟನೆಗೆ ಕಾರಣನಾದ ಆರೋಪಿ ಮಾತ್ರ ಕಾಣೆಯಾಗಿದ್ದು ಇನ್ನು ಬಂಧನವಾಗಿಲ್ಲ. ಅಲ್ಲದೇ ಪೊಲೀಸರು ಆರಂಭದಲ್ಲಿ ಕೇವಲ 304 ನಿರ್ಲಕ್ಷ್ಯದಿಂದ ಸಾವಿಗೆ ಕಾರಣ ಎಂಬ ಕೇಸು ಮಾತ್ರ ಹಾಕಿದ್ದಕ್ಕೆ ದಲಿತ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಈ ಗೋಡೆಯ ವಿರುದ್ಧ ದೂರು ನೀಡಿದ್ದರು ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿವೆ. ಆದರೆ ಪೊಲೀಸರು ಪ್ರತಿಭಟನಕಾರರ ಮೇಲೆಯ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಡಿಎಮ್‌ಕೆ ಪಕ್ಷದ ಸ್ಟಾಲಿನ್ ಮಾತನಾಡಿ, ಕೂಡಲೇ ಆರೋಪಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಹೆಚ್ಚಿನ ಪರಿಹಾರದ ಜೊತೆಗೆ ಹೊಸ ಮನೆ ಕಟ್ಟಿಸಿಕೊಡಬೇಕು. ದಲಿತ ಹೋರಾಟಗಾರರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...